Homeಕರ್ನಾಟಕದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

- Advertisement -
- Advertisement -

ಹಾದ್ರಿಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾದ ಹಾದ್ರಿಪುರ ಗ್ರಾಮದಲ್ಲಿ ಚರಂಡಿ ನಿರ್ಮಿಸಿ ಎರಡೂವರೆ ದಶಕಕ್ಕೂ ಹೆಚ್ಚಿನ ಕಾಲವಾಗಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಸದಸ್ಯರ ನಿರ್ಲಕ್ಷ್ಯದಿಂದ ದಲಿತರು ವಾಸಿಸುವ ಪ್ರದೇಶದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ, ದಲಿತರು ವಾಸಿಸುವ ಪ್ರದೇಶ ಎಂಬ ಕಾರಣಕ್ಕೆ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ. ದಲಿತರು ವಾಸಿಸುವ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಹಾದ್ರಿಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆ. 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ‘ವಿ’ ಆಕಾರದಲ್ಲಿ ಚರಂಡಿ ನಿರ್ಮಿಸಲಾಗಿತ್ತು. ಗ್ರಾಮ ಪಂಚಾಯಿತಿಯಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣಕ್ಕೆ ಬಹುತೇಕ ಕಡೆ ಹೂಳು ತುಂಬಿಕೊಂಡಿದೆ. ಇದರಿಂದಾಗಿ, ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಹೆಚ್ಳಳಕ್ಕೆ ಕಾರಣವಾಗಿದೆ. ಕೆಲವೆಡೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ನಿವಾಸಿಗಳು ಮೂಗು ಮುಚ್ಚಿಕೊಂಡು ಸಹಿಸಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಚಾಯಿತಿ ಅಧಿಕಾರಿಗಳು-ಅಧ್ಯಕ್ಷರ ನಿರ್ಲಕ್ಷ್ಯ; ಡೆಂಗ್ಯೂ-ಮಲೇರಿಯಾಕ್ಕೆ ಆಹ್ವಾನ

‘ಚರಂಡಿ ನಿರ್ಮಿಸಿ ಹಲವು ವರ್ಷಗಳೆ ಕಳೆದಿವೆ, ಹೊಸ ಚರಂಡಿ ನಿರ್ಮಿಸಿ’ ಎಂದು ಜನರು ಹಲವು ಭಾರಿ ಪಂಚಾಯಿತಿಯಲ್ಲಿ ಮನವಿ ಮಾಡಿದ್ದಾರೆ ಎಂದು ಹಾದ್ರಿಪುರ ನಿವಾಸಿ ಮಂಜುಳ ಅವರು ಹೇಳಿದರು. “ಆದರೆ, ಈವರೆಗೆ ಸಂಬಂಧಪಟ್ಟವರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ  ಬಂದಿಲ್ಲ. ಹೊಸ ಚರಂಡಿ ನಿರ್ಮಿಸುವುದಿರಲಿ, ಹಳೆ ಚರಂಡಿಗಳ ಹೂಳನ್ನೂ ತೆಗೆದಿಲ್ಲ. ಇದರಿಂದಾಗಿ ಕಳೆದ ವರ್ಷ ಹಲವು ಸಣ್ಣ ಮಕ್ಕಳು ಡೆಂಗ್ಯೂ, ಟೈಪಾಯ್ಡ್‌ನಂತಹ ಜ್ವರಕ್ಕೆ ಒಳಗಾಗಿದ್ದರು. ಈ ಬಗ್ಗೆ ಸಹ ಪಂಚಾಯಿತಿ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ” ಎಂದು ಅವರು ಹೇಳಿದರು. ದಲಿತರು ವಾಸಿಸುವ

ಈ ಬಗ್ಗೆ ಮಾತನಾಡಿದ ಗ್ರಾಮದ ನಿವಾಸಿ ರವಿಕುಮಾರ್, “ಕಳೆದ ಒಂದು ವರ್ಷದಿಂದ ನಮ್ಮ ಮನೆ ಮುಂದೆ ಚರಂಡಿ ನೀರು ಕಟ್ಟಿಕೊಂಡು ರಸ್ತೆಗೆ ಬರುತ್ತಿದೆ. ಹಲವರು ತಾವು ಮನೆ ನಿರ್ಮಿಸುವ ಸಮಯದಲ್ಲಿ ಚರಂಡಿಯನ್ನು ನೆಲಸಮ ಮಾಡಿದ್ದಾರೆ. ಮಳೆ ಬಂದರೆ ಮೊಳಕಾಲುದ್ದ ನೀರು ನಿಲ್ಲುತ್ತದೆ. ಇದೇ ಪ್ರದೇಶದಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ಸಣ್ಣಸಣ್ಣ ಮಕ್ಕಳು ಹಾಗೂ ವೃದ್ಧರಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದು, ವಾಟ್ಸಾಪ್ ಮೂಲಕ ಸಮಸ್ಯೆಯ ಫೋಟೋ ಕಳುಹಿಸಿದ್ದೇನೆ. ಇಬ್ಬರೂ ಸಹ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಗ್ರಾಮ ಪಂಚಾಯಿಯಲ್ಲಿ ‘ಇ’ ಖಾತೆ ಹಾಗೂ ಕಂದಾಯ ಸಂಗ್ರಹ ಬಿಟ್ಟು ಬೇರೆ ಕೆಲಸಗಳೇ ಆಗುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಅಧ್ಯಕ್ಷರು ‘ನಮ್ಮ ಬಳಿ ಚರಂಡಿ ನಿರ್ಮಿಸುವಷ್ಟು ಅನುದಾನ ಇಲ್ಲ’ ಎಂದು ಗದರಿಸಿ ಕಳುಹಿಸುತ್ತಾರೆ” ಎಂದು ತಮ್ಮ ಅಸಹಾಯಕತೆ ತೋಡಿಕೊಂಡರು.

“ನಮ್ಮದೇ ಪಂಚಾಯಿತಿಯ ಬೇರೆ ಊರಿನ ಸದಸ್ಯರು ಅನುದಾನ ಬಿಡುಗಡೆ ಮಾಡಿಸಿಕೊಂಡು ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ನಮ್ಮ ಊರಿನ ಮೂವರು ಸದಸ್ಯರಿಗೆ ಗ್ರಾಮದ ಮೇಲೆ ಕಾಳಜಿ ಇಲ್ಲ. ನಮ್ಮ ಊರಿನ ಸದಸ್ಯರೇ ಈಗ ಅಧ್ಯಕ್ಷರಾಗಿದ್ದರೂ ಪ್ರಯೋಜನವಾಗುತ್ತಿಲ್ಲ. ಮುಖ್ಯವಾಗಿ, ಪ್ರಬಲ ಜಾತಿಗೆ ಸೇರಿದ ಸದಸ್ಯರು ದಲಿತರ ಪ್ರದೇಶವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಪಿಡಿಒ ಶಿವಾನಂದ್, ”ಅಲ್ಲಿ ಚರಂಡಿ ಮಾಡಿದರೆ ಸಮಸ್ಯೆ ಪರಿಹಾರ ಆಗುತ್ತದೆ. ಈಗಿರುವ ಚರಂಡಿ ಮೇಲೆ ಕೆಲ ನಿವಾಸಿಗಳು ಕಲ್ಲಿನ ಚಪ್ಪಡಿ ಕಲ್ಲು ಹಾಕಿದ್ದಾರೆ. ಅಲ್ಲಿ ಸ್ವಚ್ಛತೆ ಮಾಡಲು ನಮಗೆ ಅವಕಾಶ ಸಿಗುವುದಿಲ್ಲ. ಅವರವರ ಮನೆ ಮುಂದಿನ ಚಪ್ಪಡಿ ತೆರವುಗೊಳಿಸಕೊಟ್ಟರೆ ನಾವು ಕೆಲಸ ಮಾಡಲು ಸಾಧ್ಯ. ಚಪ್ಪಡಿ ಇಲ್ಲದಿರುವ ಕಡೆ ನಾವು ಸ್ವಚ್ಛ ಮಾಡುತ್ತಿದ್ದೇವೆ. ಚಪ್ಪಡಿ ಇರುವ ಕಡೆ ನಿವಾಸಿಗಳೆ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

“ಸಮಸ್ಯೆ ನಮಗೆ ಮನವರಿಕೆ ಆಗಿದೆ. ಮುಂದೆ ಅಲ್ಲಿ ಸಿಸಿ ಚರಂಡಿ ನಿರ್ಮಿಸಬೇಕು. ಮುಂದಿನ ದಿನಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಆದರೆ, ರಸ್ರೆಗಳು ಅಲ್ಲಿ ಕಿರಿದಾಗಿದ್ದು ಸಿಸಿ ಚರಂಡಿ ನಿರ್ಮಿಸುವಷ್ಟು ಸ್ಥಳಾವಕಾಶವಿಲ್ಲ. ಸಮಸ್ಯೆ ಇರುವ ಜಾಗದಲ್ಲಿ ಚರಂಡಿ ನಿರ್ಮಿಸಬಹುದು. ಈ ಬಗ್ಗೆ ಸ್ಥಳೀಯ ನಿವಾಸಿಗಳ ಗಮನಕ್ಕೆ ತಂದಿದ್ದೇನೆ. ದಲಿತರ ಪ್ರದೇಶ ಎನ್ನುವ ಕಾರಣಕ್ಕೆ ನಿರ್ಲಕ್ಷ್ಯ ಮಾಡುತ್ತಿಲ್ಲ” ಎಂದು ನಾನುಗೌರಿ.ಕಾಂಗೆ ಅವರು ಹೇಳಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಸ್ ಮಾತನಾಡಿ, “ಈ ಸಮಸ್ಯೆ ನಮ್ಮ ಗಮನಕ್ಕೆ ಬಂದಿವೆ. ಚರಂಡಿ ಮೇಲೆ ಚಪ್ಪಡಿ ಹಾಕಿರುವುದಕ್ಕೆ ಅದು ಬ್ಲಾಕ್ ಆಗಿದೆ. ನಾವು ಸ್ಕ್ಯಾವೆಜಿಂಗ್ ಮಿಷನ್ ಮೂಲಕ ಅದನ್ನು ಸ್ವಚ್ಛ ಮಾಡಲು ಯೋಜಿಸುತ್ತಾ ಇದ್ದೇವೆ. ಆದಷ್ಟು ಬೇಗನೆ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಮ್ಮದು ‘ಸಿ’ ಗ್ರೇಡ್ ಪಂಚಾಯತಿಯಾಗಿದ್ದು, ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಅನುದಾನಗಳು ಬಂದರೆ ಹೊಸದಾಗಿ ಚರಂಡಿ ನಿರ್ಮಿಸಿ ಶಾಸ್ವತ ಪರಿಹಾರ ಮಾಡುತ್ತೇವೆ” ಎಂದು ಹೇಳಿದರು. ದಲಿತರು ವಾಸಿಸುವ ಪ್ರದೇಶ ಎನ್ನುವ ಕಾರಣಕ್ಕೆ ಯಾವುದೆ ನಿರ್ಲಕ್ಷ್ಯ ಮಾಡುತ್ತಿಲ್ಲ, ಅಂತಹ ಆರೋಪಗಳು ಸತ್ಯಕ್ಕೆ ದೂರವಾದ ಮಾತುಗಳಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...