Homeಕರ್ನಾಟಕದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

- Advertisement -
- Advertisement -

ಹಾದ್ರಿಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾದ ಹಾದ್ರಿಪುರ ಗ್ರಾಮದಲ್ಲಿ ಚರಂಡಿ ನಿರ್ಮಿಸಿ ಎರಡೂವರೆ ದಶಕಕ್ಕೂ ಹೆಚ್ಚಿನ ಕಾಲವಾಗಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಸದಸ್ಯರ ನಿರ್ಲಕ್ಷ್ಯದಿಂದ ದಲಿತರು ವಾಸಿಸುವ ಪ್ರದೇಶದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ, ದಲಿತರು ವಾಸಿಸುವ ಪ್ರದೇಶ ಎಂಬ ಕಾರಣಕ್ಕೆ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ. ದಲಿತರು ವಾಸಿಸುವ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಹಾದ್ರಿಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆ. 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ‘ವಿ’ ಆಕಾರದಲ್ಲಿ ಚರಂಡಿ ನಿರ್ಮಿಸಲಾಗಿತ್ತು. ಗ್ರಾಮ ಪಂಚಾಯಿತಿಯಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣಕ್ಕೆ ಬಹುತೇಕ ಕಡೆ ಹೂಳು ತುಂಬಿಕೊಂಡಿದೆ. ಇದರಿಂದಾಗಿ, ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಹೆಚ್ಳಳಕ್ಕೆ ಕಾರಣವಾಗಿದೆ. ಕೆಲವೆಡೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ನಿವಾಸಿಗಳು ಮೂಗು ಮುಚ್ಚಿಕೊಂಡು ಸಹಿಸಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಚಾಯಿತಿ ಅಧಿಕಾರಿಗಳು-ಅಧ್ಯಕ್ಷರ ನಿರ್ಲಕ್ಷ್ಯ; ಡೆಂಗ್ಯೂ-ಮಲೇರಿಯಾಕ್ಕೆ ಆಹ್ವಾನ

‘ಚರಂಡಿ ನಿರ್ಮಿಸಿ ಹಲವು ವರ್ಷಗಳೆ ಕಳೆದಿವೆ, ಹೊಸ ಚರಂಡಿ ನಿರ್ಮಿಸಿ’ ಎಂದು ಜನರು ಹಲವು ಭಾರಿ ಪಂಚಾಯಿತಿಯಲ್ಲಿ ಮನವಿ ಮಾಡಿದ್ದಾರೆ ಎಂದು ಹಾದ್ರಿಪುರ ನಿವಾಸಿ ಮಂಜುಳ ಅವರು ಹೇಳಿದರು. “ಆದರೆ, ಈವರೆಗೆ ಸಂಬಂಧಪಟ್ಟವರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ  ಬಂದಿಲ್ಲ. ಹೊಸ ಚರಂಡಿ ನಿರ್ಮಿಸುವುದಿರಲಿ, ಹಳೆ ಚರಂಡಿಗಳ ಹೂಳನ್ನೂ ತೆಗೆದಿಲ್ಲ. ಇದರಿಂದಾಗಿ ಕಳೆದ ವರ್ಷ ಹಲವು ಸಣ್ಣ ಮಕ್ಕಳು ಡೆಂಗ್ಯೂ, ಟೈಪಾಯ್ಡ್‌ನಂತಹ ಜ್ವರಕ್ಕೆ ಒಳಗಾಗಿದ್ದರು. ಈ ಬಗ್ಗೆ ಸಹ ಪಂಚಾಯಿತಿ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ” ಎಂದು ಅವರು ಹೇಳಿದರು. ದಲಿತರು ವಾಸಿಸುವ

ಈ ಬಗ್ಗೆ ಮಾತನಾಡಿದ ಗ್ರಾಮದ ನಿವಾಸಿ ರವಿಕುಮಾರ್, “ಕಳೆದ ಒಂದು ವರ್ಷದಿಂದ ನಮ್ಮ ಮನೆ ಮುಂದೆ ಚರಂಡಿ ನೀರು ಕಟ್ಟಿಕೊಂಡು ರಸ್ತೆಗೆ ಬರುತ್ತಿದೆ. ಹಲವರು ತಾವು ಮನೆ ನಿರ್ಮಿಸುವ ಸಮಯದಲ್ಲಿ ಚರಂಡಿಯನ್ನು ನೆಲಸಮ ಮಾಡಿದ್ದಾರೆ. ಮಳೆ ಬಂದರೆ ಮೊಳಕಾಲುದ್ದ ನೀರು ನಿಲ್ಲುತ್ತದೆ. ಇದೇ ಪ್ರದೇಶದಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ಸಣ್ಣಸಣ್ಣ ಮಕ್ಕಳು ಹಾಗೂ ವೃದ್ಧರಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದು, ವಾಟ್ಸಾಪ್ ಮೂಲಕ ಸಮಸ್ಯೆಯ ಫೋಟೋ ಕಳುಹಿಸಿದ್ದೇನೆ. ಇಬ್ಬರೂ ಸಹ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಗ್ರಾಮ ಪಂಚಾಯಿಯಲ್ಲಿ ‘ಇ’ ಖಾತೆ ಹಾಗೂ ಕಂದಾಯ ಸಂಗ್ರಹ ಬಿಟ್ಟು ಬೇರೆ ಕೆಲಸಗಳೇ ಆಗುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಅಧ್ಯಕ್ಷರು ‘ನಮ್ಮ ಬಳಿ ಚರಂಡಿ ನಿರ್ಮಿಸುವಷ್ಟು ಅನುದಾನ ಇಲ್ಲ’ ಎಂದು ಗದರಿಸಿ ಕಳುಹಿಸುತ್ತಾರೆ” ಎಂದು ತಮ್ಮ ಅಸಹಾಯಕತೆ ತೋಡಿಕೊಂಡರು.

“ನಮ್ಮದೇ ಪಂಚಾಯಿತಿಯ ಬೇರೆ ಊರಿನ ಸದಸ್ಯರು ಅನುದಾನ ಬಿಡುಗಡೆ ಮಾಡಿಸಿಕೊಂಡು ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ನಮ್ಮ ಊರಿನ ಮೂವರು ಸದಸ್ಯರಿಗೆ ಗ್ರಾಮದ ಮೇಲೆ ಕಾಳಜಿ ಇಲ್ಲ. ನಮ್ಮ ಊರಿನ ಸದಸ್ಯರೇ ಈಗ ಅಧ್ಯಕ್ಷರಾಗಿದ್ದರೂ ಪ್ರಯೋಜನವಾಗುತ್ತಿಲ್ಲ. ಮುಖ್ಯವಾಗಿ, ಪ್ರಬಲ ಜಾತಿಗೆ ಸೇರಿದ ಸದಸ್ಯರು ದಲಿತರ ಪ್ರದೇಶವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಪಿಡಿಒ ಶಿವಾನಂದ್, ”ಅಲ್ಲಿ ಚರಂಡಿ ಮಾಡಿದರೆ ಸಮಸ್ಯೆ ಪರಿಹಾರ ಆಗುತ್ತದೆ. ಈಗಿರುವ ಚರಂಡಿ ಮೇಲೆ ಕೆಲ ನಿವಾಸಿಗಳು ಕಲ್ಲಿನ ಚಪ್ಪಡಿ ಕಲ್ಲು ಹಾಕಿದ್ದಾರೆ. ಅಲ್ಲಿ ಸ್ವಚ್ಛತೆ ಮಾಡಲು ನಮಗೆ ಅವಕಾಶ ಸಿಗುವುದಿಲ್ಲ. ಅವರವರ ಮನೆ ಮುಂದಿನ ಚಪ್ಪಡಿ ತೆರವುಗೊಳಿಸಕೊಟ್ಟರೆ ನಾವು ಕೆಲಸ ಮಾಡಲು ಸಾಧ್ಯ. ಚಪ್ಪಡಿ ಇಲ್ಲದಿರುವ ಕಡೆ ನಾವು ಸ್ವಚ್ಛ ಮಾಡುತ್ತಿದ್ದೇವೆ. ಚಪ್ಪಡಿ ಇರುವ ಕಡೆ ನಿವಾಸಿಗಳೆ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

“ಸಮಸ್ಯೆ ನಮಗೆ ಮನವರಿಕೆ ಆಗಿದೆ. ಮುಂದೆ ಅಲ್ಲಿ ಸಿಸಿ ಚರಂಡಿ ನಿರ್ಮಿಸಬೇಕು. ಮುಂದಿನ ದಿನಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಆದರೆ, ರಸ್ರೆಗಳು ಅಲ್ಲಿ ಕಿರಿದಾಗಿದ್ದು ಸಿಸಿ ಚರಂಡಿ ನಿರ್ಮಿಸುವಷ್ಟು ಸ್ಥಳಾವಕಾಶವಿಲ್ಲ. ಸಮಸ್ಯೆ ಇರುವ ಜಾಗದಲ್ಲಿ ಚರಂಡಿ ನಿರ್ಮಿಸಬಹುದು. ಈ ಬಗ್ಗೆ ಸ್ಥಳೀಯ ನಿವಾಸಿಗಳ ಗಮನಕ್ಕೆ ತಂದಿದ್ದೇನೆ. ದಲಿತರ ಪ್ರದೇಶ ಎನ್ನುವ ಕಾರಣಕ್ಕೆ ನಿರ್ಲಕ್ಷ್ಯ ಮಾಡುತ್ತಿಲ್ಲ” ಎಂದು ನಾನುಗೌರಿ.ಕಾಂಗೆ ಅವರು ಹೇಳಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಸ್ ಮಾತನಾಡಿ, “ಈ ಸಮಸ್ಯೆ ನಮ್ಮ ಗಮನಕ್ಕೆ ಬಂದಿವೆ. ಚರಂಡಿ ಮೇಲೆ ಚಪ್ಪಡಿ ಹಾಕಿರುವುದಕ್ಕೆ ಅದು ಬ್ಲಾಕ್ ಆಗಿದೆ. ನಾವು ಸ್ಕ್ಯಾವೆಜಿಂಗ್ ಮಿಷನ್ ಮೂಲಕ ಅದನ್ನು ಸ್ವಚ್ಛ ಮಾಡಲು ಯೋಜಿಸುತ್ತಾ ಇದ್ದೇವೆ. ಆದಷ್ಟು ಬೇಗನೆ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಮ್ಮದು ‘ಸಿ’ ಗ್ರೇಡ್ ಪಂಚಾಯತಿಯಾಗಿದ್ದು, ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಅನುದಾನಗಳು ಬಂದರೆ ಹೊಸದಾಗಿ ಚರಂಡಿ ನಿರ್ಮಿಸಿ ಶಾಸ್ವತ ಪರಿಹಾರ ಮಾಡುತ್ತೇವೆ” ಎಂದು ಹೇಳಿದರು. ದಲಿತರು ವಾಸಿಸುವ ಪ್ರದೇಶ ಎನ್ನುವ ಕಾರಣಕ್ಕೆ ಯಾವುದೆ ನಿರ್ಲಕ್ಷ್ಯ ಮಾಡುತ್ತಿಲ್ಲ, ಅಂತಹ ಆರೋಪಗಳು ಸತ್ಯಕ್ಕೆ ದೂರವಾದ ಮಾತುಗಳಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...