Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ - ದೇವನೂರ ಮಹಾದೇವ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ – ದೇವನೂರ ಮಹಾದೇವ

ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ?

- Advertisement -
- Advertisement -

ಗೆಳೆಯ ದೊಡ್ಡಿಪಾಳ್ಯ ನರಸಿಂಹಮೂರ್ತಿರನ್ನು ರಾಯಚೂರು ಪೊಲೀಸ್, ಎರಡು ದಶಕಗಳ ಹಿಂದೆ ನಡೆದಿತ್ತು ಎನ್ನಲಾದ `ಕ್ರಿಮಿನಲ್ ಪ್ರಕರಣ’ ಗಳಲ್ಲಿ ವಿನೋದ್ ಎಂಬ ಹೆಸರಿನಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯೇ ನರಸಿಂಹಮೂರ್ತಿ ಎಂದು ಪೊಲೀಸ್ ಸಾಕ್ಷಿ ಆಧರಿಸಿ ಗುಮಾನಿ ಮೇಲೆ ಬಂಧಿಸಲಾಗಿದೆ.

ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದೇ ಅನುಮಾನ ಆತಂಕ ಹುಟ್ಟಿಸುವಂತಿದೆ. ಯಾಕೆಂದರೆ ನರಸಿಂಹಮೂರ್ತಿ ಸಾರ್ವಜನಿಕ ವ್ಯಕ್ತಿ. ಪತ್ರಿಕಾ ಕ್ಷೇತ್ರದಲ್ಲಿ ಚಿರಪರಿಚಿತ. ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ. ಪ್ರಗತಿಪರ ಸಂಘಟನೆಗಳ ಸಖ. ದಶಕಗಳಿಂದಲೂ ರಾಯಚೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಟ ನಡೆಸಿದವರು, ಅವರು ಭಾಗವಹಿಸಿದ ಕಾರ್ಯಕ್ರಮ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 1997 ರಿಂದಲೇ ಬೆಂಗಳೂರು-ಮೈಸೂರು ಕಾರಿಡಾರ್ ವಿರುದ್ಧದ ಹೋರಾಟದಲ್ಲಿ ನರಸಿಂಹಮೂರ್ತಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರೊಡನೆ ಸಕ್ರಿಯವಾಗಿದ್ದನ್ನು ನಾವು ನೋಡಿದ್ದೇವೆ. ಗೌರಿ ಟ್ರಸ್ಟ್‌ಗೆ ಎಚ್.ಎಸ್.ದೊರೆಸ್ವಾಮಿಯವರು ಅಧ್ಯಕ್ಷರು, ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ.

ದೊರೆಸ್ವಾಮಿಯವರು ಇದ್ದ ಕಡೆ ಬಲಗೈಯಂತೆ ಅವರ ಜೊತೆ ನರಸಿಂಹಮೂರ್ತಿಯವರೂ ಸಾಮಾನ್ಯವಾಗಿ ಇದ್ದೇ ಇರುತ್ತಾರೆ.
ಹೀಗಿರುವಾಗ, ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದಾದರೆ ಎಚ್.ಎಸ್.ದೊರೆಸ್ವಾಮಿಯವರೂ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಬೇಕಾಗಿ ಬರುವ ದಯಾನೀಯ ಪರಿಸ್ಥಿತಿಯೂ ನಮಗೆ ಬರಬಹುದೇನೋ.

ಇನ್ನೂ ತಮಾಷೆ ಎಂದರೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಪೊಲೀಸ್ ಕ್ವಾಟ್ರಸ್ ಎದುರೇನೆ ನರಸಿಂಹಮೂರ್ತಿ ಮನೆ. ನರಸಿಂಹಮೂರ್ತಿ ಮನೆ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳನ್ನೆ ಮೂರ್ತಿ ಮನೆ ವಿಳಾಸ ಕೇಳುವ ಪರಿಪಾಠ ಉಂಟು. ಹೀಗಿರುವಾಗ ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎಂದು ಹೇಳುವಲ್ಲಿ ಯಾವುದಾದರೂ ಕಾಣದ ಕೈಗಳ ಒತ್ತಡ ಇರಬಹುದೇ? ಈ ಅನುಮಾನ ಆತಂಕ ಕಾಡುತ್ತದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೆ, ಪತ್ರಿಕಾಕರ್ತರು, ಭಿನ್ನ ಧ್ವನಿಗಳ ಕತ್ತು ಹಿಸುಕಲಾಗುತ್ತಿದೆ.

ಈ ಪ್ರಕರಣ ಸಂಬಂಧಪಟ್ಟಂತೆ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವೇದಮೂರ್ತಿಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ನೀಡಿರುವ ವಿವರಗಳನ್ನು ವಿಶೇಷವಾಗಿ ಗಮನಿಸಬೇಕಾಗಿದೆ. ಅವರು ಹೇಳುತ್ತಾರೆ- 1) ಬಡವರಿಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಏಳೆಂಟು ಜನ ಸಭೆ ನಡೆಸುತ್ತಿದ್ದರು- ಇದೊಂದು ಪ್ರಕರಣ 2) ಬಿಡಿಓ ನೇತೃತ್ವದಲ್ಲಿ ಸಭಾ ಭವನ ಕಟ್ಟುತ್ತಿದ್ದಾಗ ಪಕ್ಕದಲ್ಲಿದ್ದ ಗರೀಬನ ಜೋಪಡಿಗೆ ತೊಂದರೆಯಾಗುತ್ತದೆ ಎಂದು ಒಂದಿಷ್ಟು ಜನ ಮಾರಾಕಾಸ್ತ್ರಗಳೊಡನೆ ಅಡಚಣೆ ಮಾಡಿದರು. 3) ಈ ಪ್ರಕರಣಗಳಲ್ಲಿ ಚಾರ್ಜ್‍ಷೀಟ್ ಆಗಿದೆ. ನ್ಯಾಯಾಲಯದಿಂದ ವಾರೆಂಟ್ ಇದೆ. ಈ ವಾರೆಂಟ್ ಮೇರೆಗೆ (ವಿನೋದ್ ಎಂಬ ಹೆಸರಲ್ಲಿ ಪ್ರಕರಣಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯೇ ತಲೆ ಮರೆಸಿಕೊಂಡಿದ್ದ ನರಸಿಂಹಮೂರ್ತಿ ಎಂದು) ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಮುಂದಿನದು ನ್ಯಾಯಾಲಯಕ್ಕೆ ಬಿಟ್ಟಿದ್ದು ಎನ್ನುತ್ತಾರೆ.

ಮೊದಲನೆಯದಾಗಿ ಎಸ್.ಪಿ. ವೇದಮೂರ್ತಿಯವರ ಸರಳ, ನೇರ ಮಾತುಗಳನ್ನು ನಾವು ಗೌರವಿಸಬೇಕು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಲಯದ ವಾರೆಂಟ್ ಇದೆ. ಆ ಪ್ರಕಾರವಾಗಿ ಕರ್ತವ್ಯ ನಿರ್ವಹಿಸಿದ್ದೇವೆ ಎನ್ನುತ್ತಾರೆ. ಈಗ ಇರುವ ಯಥಾಸ್ಥಿತಿ ಜಡ ಕಾನೂನು ಪ್ರಕಾರ ಅವರು ಕೆಲಸ ಮಾಡಿದ್ದಾರೆ. ಅವರು ಮಾಡಲೇಬೇಕಾಗುತ್ತದೆ. ಆದ್ದರಿಂದ ಎತ್ತು ಈಯ್ತು ಎಂದರೆ ಕೊಟ್ಟಿಗೆಗೆ ಕಟ್ಟು ಎಂಬ ಗಾದೆ ಮಾತಿನಂತೆ ಪೊಲೀಸ್ ಬಗ್ಗೆ ಕುರುಡಾಗಿ ಎಗರಾಡುವುದನ್ನು ನಮ್ಮ ಹೋರಾಟದ ಸಂಘಟನೆಗಳ ಗೆಳೆಯರು ಕೈ ಬಿಡುವುದು ಕ್ಷೇಮ.

ಯಾಕೆಂದರೆ, ಇಲ್ಲಿ ನಾವು ಚರ್ಚಿಸಬೇಕಾದ ವಿಚಾರಗಳೇ ಬೇರೆ ಇದೆ. ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ? ಇನ್ನು ಸಮುದಾಯ ಭವನ ಕಟ್ಟುವುದಕ್ಕೆ ಒಂದಿಷ್ಟು ಜನ ಅಡಚಣೆ ಮಾಡಿದರು ಎಂಬ ಪ್ರಕರಣವನ್ನು ಈಗಾಗಲೇ ನ್ಯಾಯಾಲಯ ವಿಚಾರಣೆ ಮಾಡಿ ಸಾಕ್ಷ್ಯಾ ಇಲ್ಲದೆ ಪ್ರಕರಣವನ್ನು ಖುಲಾಸೆ ಮಾಡಿದೆ. ಏನು ಆರೋಪ ಇತ್ತೋ ಅದೇ ಬಿದ್ದುಹೋಗಿದೆ. ಈ ಸಂಬಂಧ ಬಂಧಿಸಿದ್ದ ಆರೋಪಿಗಳ ಬಿಡುಗಡೆಯೂ ಆಗಿದೆ. ಆರೋಪವೇ ಬಿದ್ದು ಹೋಗಿರುವಾಗ, ಇವರಲ್ಲಿ ಆರೋಪಿತರಾದ ವಿನೋದನೊ ಮತ್ತೊಬ್ಬನೊ ಸಿಕ್ಕರೆಷ್ಟು? ಸಿಗದಿದ್ದರೆಷ್ಟು? ಈ ಪ್ರಕರಣವನ್ನು ಜೀವಂತವಾಗಿರಿಸುವುದೇಕೆ? ಇದು ನಮ್ಮ ಪೊಲೀಸ್ ಮತ್ತು ನ್ಯಾಯಾಲಯದ ಮೇಲೆ ಆಚರಣಾತ್ಮಕ ವೃಥಾ ಹೆಣ ಭಾರವಲ್ಲವೆ?- ಪಿ.ಐ.ಎಲ್. ಮೂಲಕ ಪ್ರಶ್ನಿಸಬೇಕಾಗಿದೆ. ಜೊತೆಗೆ ಇದನ್ನು ಸಾರ್ವಜನಿಕರು, ಸಂಘಟನೆಗಳು, ಪರ್ಯಾಯ ಕಾನೂನು ತಜ್ಞರು ಚರ್ಚಿಸಬೇಕಾಗಿದೆ.

ಯಾರ ಅಪರಾಧವೂ ಕಾನೂನು ಚೌಕಟ್ಟನ್ನು ಮೀರಿದ್ದಲ್ಲ ಎಂಬ ಅರಿವಿನಲ್ಲೆ, ನರಸಿಂಹಮೂರ್ತಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಹೊರಬರುತ್ತಾರೆಂಬ ನಂಬಿಕೆ ಇದ್ದರೂ, ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತ ‘ವಿಳಂಬ ಹಿಂಸೆ’ ನೀಡಬಹುದೆನ್ನುವ ಆತಂಕವೂ ನನಗಿದೆ. ಈ ರೀತಿಯಾದಲ್ಲಿ ಸ್ವರಾಜ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳಾದ ರೈತ ಸಂಘ, ದಲಿತ ಸಂಘಟನೆ, ಮತ್ತಿತರ ಸಮಾಜಮುಖಿ ಸಂಘಟನೆಗಳ ಜೊತೆಗೂಡಿ ಬರ, ನೆರೆ, ಉದ್ಯೋಗ ಕುಸಿತ ಇವುಗಳನ್ನೆಲ್ಲ ಸಮ್ಮಿಲನಗೊಳಿಸಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...