Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ - ದೇವನೂರ ಮಹಾದೇವ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ – ದೇವನೂರ ಮಹಾದೇವ

ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ?

- Advertisement -
- Advertisement -

ಗೆಳೆಯ ದೊಡ್ಡಿಪಾಳ್ಯ ನರಸಿಂಹಮೂರ್ತಿರನ್ನು ರಾಯಚೂರು ಪೊಲೀಸ್, ಎರಡು ದಶಕಗಳ ಹಿಂದೆ ನಡೆದಿತ್ತು ಎನ್ನಲಾದ `ಕ್ರಿಮಿನಲ್ ಪ್ರಕರಣ’ ಗಳಲ್ಲಿ ವಿನೋದ್ ಎಂಬ ಹೆಸರಿನಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯೇ ನರಸಿಂಹಮೂರ್ತಿ ಎಂದು ಪೊಲೀಸ್ ಸಾಕ್ಷಿ ಆಧರಿಸಿ ಗುಮಾನಿ ಮೇಲೆ ಬಂಧಿಸಲಾಗಿದೆ.

ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದೇ ಅನುಮಾನ ಆತಂಕ ಹುಟ್ಟಿಸುವಂತಿದೆ. ಯಾಕೆಂದರೆ ನರಸಿಂಹಮೂರ್ತಿ ಸಾರ್ವಜನಿಕ ವ್ಯಕ್ತಿ. ಪತ್ರಿಕಾ ಕ್ಷೇತ್ರದಲ್ಲಿ ಚಿರಪರಿಚಿತ. ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ. ಪ್ರಗತಿಪರ ಸಂಘಟನೆಗಳ ಸಖ. ದಶಕಗಳಿಂದಲೂ ರಾಯಚೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಟ ನಡೆಸಿದವರು, ಅವರು ಭಾಗವಹಿಸಿದ ಕಾರ್ಯಕ್ರಮ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 1997 ರಿಂದಲೇ ಬೆಂಗಳೂರು-ಮೈಸೂರು ಕಾರಿಡಾರ್ ವಿರುದ್ಧದ ಹೋರಾಟದಲ್ಲಿ ನರಸಿಂಹಮೂರ್ತಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರೊಡನೆ ಸಕ್ರಿಯವಾಗಿದ್ದನ್ನು ನಾವು ನೋಡಿದ್ದೇವೆ. ಗೌರಿ ಟ್ರಸ್ಟ್‌ಗೆ ಎಚ್.ಎಸ್.ದೊರೆಸ್ವಾಮಿಯವರು ಅಧ್ಯಕ್ಷರು, ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ.

ದೊರೆಸ್ವಾಮಿಯವರು ಇದ್ದ ಕಡೆ ಬಲಗೈಯಂತೆ ಅವರ ಜೊತೆ ನರಸಿಂಹಮೂರ್ತಿಯವರೂ ಸಾಮಾನ್ಯವಾಗಿ ಇದ್ದೇ ಇರುತ್ತಾರೆ.
ಹೀಗಿರುವಾಗ, ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದಾದರೆ ಎಚ್.ಎಸ್.ದೊರೆಸ್ವಾಮಿಯವರೂ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಬೇಕಾಗಿ ಬರುವ ದಯಾನೀಯ ಪರಿಸ್ಥಿತಿಯೂ ನಮಗೆ ಬರಬಹುದೇನೋ.

ಇನ್ನೂ ತಮಾಷೆ ಎಂದರೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಪೊಲೀಸ್ ಕ್ವಾಟ್ರಸ್ ಎದುರೇನೆ ನರಸಿಂಹಮೂರ್ತಿ ಮನೆ. ನರಸಿಂಹಮೂರ್ತಿ ಮನೆ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳನ್ನೆ ಮೂರ್ತಿ ಮನೆ ವಿಳಾಸ ಕೇಳುವ ಪರಿಪಾಠ ಉಂಟು. ಹೀಗಿರುವಾಗ ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎಂದು ಹೇಳುವಲ್ಲಿ ಯಾವುದಾದರೂ ಕಾಣದ ಕೈಗಳ ಒತ್ತಡ ಇರಬಹುದೇ? ಈ ಅನುಮಾನ ಆತಂಕ ಕಾಡುತ್ತದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೆ, ಪತ್ರಿಕಾಕರ್ತರು, ಭಿನ್ನ ಧ್ವನಿಗಳ ಕತ್ತು ಹಿಸುಕಲಾಗುತ್ತಿದೆ.

ಈ ಪ್ರಕರಣ ಸಂಬಂಧಪಟ್ಟಂತೆ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವೇದಮೂರ್ತಿಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ನೀಡಿರುವ ವಿವರಗಳನ್ನು ವಿಶೇಷವಾಗಿ ಗಮನಿಸಬೇಕಾಗಿದೆ. ಅವರು ಹೇಳುತ್ತಾರೆ- 1) ಬಡವರಿಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಏಳೆಂಟು ಜನ ಸಭೆ ನಡೆಸುತ್ತಿದ್ದರು- ಇದೊಂದು ಪ್ರಕರಣ 2) ಬಿಡಿಓ ನೇತೃತ್ವದಲ್ಲಿ ಸಭಾ ಭವನ ಕಟ್ಟುತ್ತಿದ್ದಾಗ ಪಕ್ಕದಲ್ಲಿದ್ದ ಗರೀಬನ ಜೋಪಡಿಗೆ ತೊಂದರೆಯಾಗುತ್ತದೆ ಎಂದು ಒಂದಿಷ್ಟು ಜನ ಮಾರಾಕಾಸ್ತ್ರಗಳೊಡನೆ ಅಡಚಣೆ ಮಾಡಿದರು. 3) ಈ ಪ್ರಕರಣಗಳಲ್ಲಿ ಚಾರ್ಜ್‍ಷೀಟ್ ಆಗಿದೆ. ನ್ಯಾಯಾಲಯದಿಂದ ವಾರೆಂಟ್ ಇದೆ. ಈ ವಾರೆಂಟ್ ಮೇರೆಗೆ (ವಿನೋದ್ ಎಂಬ ಹೆಸರಲ್ಲಿ ಪ್ರಕರಣಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯೇ ತಲೆ ಮರೆಸಿಕೊಂಡಿದ್ದ ನರಸಿಂಹಮೂರ್ತಿ ಎಂದು) ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಮುಂದಿನದು ನ್ಯಾಯಾಲಯಕ್ಕೆ ಬಿಟ್ಟಿದ್ದು ಎನ್ನುತ್ತಾರೆ.

ಮೊದಲನೆಯದಾಗಿ ಎಸ್.ಪಿ. ವೇದಮೂರ್ತಿಯವರ ಸರಳ, ನೇರ ಮಾತುಗಳನ್ನು ನಾವು ಗೌರವಿಸಬೇಕು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಲಯದ ವಾರೆಂಟ್ ಇದೆ. ಆ ಪ್ರಕಾರವಾಗಿ ಕರ್ತವ್ಯ ನಿರ್ವಹಿಸಿದ್ದೇವೆ ಎನ್ನುತ್ತಾರೆ. ಈಗ ಇರುವ ಯಥಾಸ್ಥಿತಿ ಜಡ ಕಾನೂನು ಪ್ರಕಾರ ಅವರು ಕೆಲಸ ಮಾಡಿದ್ದಾರೆ. ಅವರು ಮಾಡಲೇಬೇಕಾಗುತ್ತದೆ. ಆದ್ದರಿಂದ ಎತ್ತು ಈಯ್ತು ಎಂದರೆ ಕೊಟ್ಟಿಗೆಗೆ ಕಟ್ಟು ಎಂಬ ಗಾದೆ ಮಾತಿನಂತೆ ಪೊಲೀಸ್ ಬಗ್ಗೆ ಕುರುಡಾಗಿ ಎಗರಾಡುವುದನ್ನು ನಮ್ಮ ಹೋರಾಟದ ಸಂಘಟನೆಗಳ ಗೆಳೆಯರು ಕೈ ಬಿಡುವುದು ಕ್ಷೇಮ.

ಯಾಕೆಂದರೆ, ಇಲ್ಲಿ ನಾವು ಚರ್ಚಿಸಬೇಕಾದ ವಿಚಾರಗಳೇ ಬೇರೆ ಇದೆ. ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ? ಇನ್ನು ಸಮುದಾಯ ಭವನ ಕಟ್ಟುವುದಕ್ಕೆ ಒಂದಿಷ್ಟು ಜನ ಅಡಚಣೆ ಮಾಡಿದರು ಎಂಬ ಪ್ರಕರಣವನ್ನು ಈಗಾಗಲೇ ನ್ಯಾಯಾಲಯ ವಿಚಾರಣೆ ಮಾಡಿ ಸಾಕ್ಷ್ಯಾ ಇಲ್ಲದೆ ಪ್ರಕರಣವನ್ನು ಖುಲಾಸೆ ಮಾಡಿದೆ. ಏನು ಆರೋಪ ಇತ್ತೋ ಅದೇ ಬಿದ್ದುಹೋಗಿದೆ. ಈ ಸಂಬಂಧ ಬಂಧಿಸಿದ್ದ ಆರೋಪಿಗಳ ಬಿಡುಗಡೆಯೂ ಆಗಿದೆ. ಆರೋಪವೇ ಬಿದ್ದು ಹೋಗಿರುವಾಗ, ಇವರಲ್ಲಿ ಆರೋಪಿತರಾದ ವಿನೋದನೊ ಮತ್ತೊಬ್ಬನೊ ಸಿಕ್ಕರೆಷ್ಟು? ಸಿಗದಿದ್ದರೆಷ್ಟು? ಈ ಪ್ರಕರಣವನ್ನು ಜೀವಂತವಾಗಿರಿಸುವುದೇಕೆ? ಇದು ನಮ್ಮ ಪೊಲೀಸ್ ಮತ್ತು ನ್ಯಾಯಾಲಯದ ಮೇಲೆ ಆಚರಣಾತ್ಮಕ ವೃಥಾ ಹೆಣ ಭಾರವಲ್ಲವೆ?- ಪಿ.ಐ.ಎಲ್. ಮೂಲಕ ಪ್ರಶ್ನಿಸಬೇಕಾಗಿದೆ. ಜೊತೆಗೆ ಇದನ್ನು ಸಾರ್ವಜನಿಕರು, ಸಂಘಟನೆಗಳು, ಪರ್ಯಾಯ ಕಾನೂನು ತಜ್ಞರು ಚರ್ಚಿಸಬೇಕಾಗಿದೆ.

ಯಾರ ಅಪರಾಧವೂ ಕಾನೂನು ಚೌಕಟ್ಟನ್ನು ಮೀರಿದ್ದಲ್ಲ ಎಂಬ ಅರಿವಿನಲ್ಲೆ, ನರಸಿಂಹಮೂರ್ತಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಹೊರಬರುತ್ತಾರೆಂಬ ನಂಬಿಕೆ ಇದ್ದರೂ, ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತ ‘ವಿಳಂಬ ಹಿಂಸೆ’ ನೀಡಬಹುದೆನ್ನುವ ಆತಂಕವೂ ನನಗಿದೆ. ಈ ರೀತಿಯಾದಲ್ಲಿ ಸ್ವರಾಜ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳಾದ ರೈತ ಸಂಘ, ದಲಿತ ಸಂಘಟನೆ, ಮತ್ತಿತರ ಸಮಾಜಮುಖಿ ಸಂಘಟನೆಗಳ ಜೊತೆಗೂಡಿ ಬರ, ನೆರೆ, ಉದ್ಯೋಗ ಕುಸಿತ ಇವುಗಳನ್ನೆಲ್ಲ ಸಮ್ಮಿಲನಗೊಳಿಸಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...