Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ - ದೇವನೂರ ಮಹಾದೇವ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ – ದೇವನೂರ ಮಹಾದೇವ

ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ?

- Advertisement -
- Advertisement -

ಗೆಳೆಯ ದೊಡ್ಡಿಪಾಳ್ಯ ನರಸಿಂಹಮೂರ್ತಿರನ್ನು ರಾಯಚೂರು ಪೊಲೀಸ್, ಎರಡು ದಶಕಗಳ ಹಿಂದೆ ನಡೆದಿತ್ತು ಎನ್ನಲಾದ `ಕ್ರಿಮಿನಲ್ ಪ್ರಕರಣ’ ಗಳಲ್ಲಿ ವಿನೋದ್ ಎಂಬ ಹೆಸರಿನಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯೇ ನರಸಿಂಹಮೂರ್ತಿ ಎಂದು ಪೊಲೀಸ್ ಸಾಕ್ಷಿ ಆಧರಿಸಿ ಗುಮಾನಿ ಮೇಲೆ ಬಂಧಿಸಲಾಗಿದೆ.

ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದೇ ಅನುಮಾನ ಆತಂಕ ಹುಟ್ಟಿಸುವಂತಿದೆ. ಯಾಕೆಂದರೆ ನರಸಿಂಹಮೂರ್ತಿ ಸಾರ್ವಜನಿಕ ವ್ಯಕ್ತಿ. ಪತ್ರಿಕಾ ಕ್ಷೇತ್ರದಲ್ಲಿ ಚಿರಪರಿಚಿತ. ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ. ಪ್ರಗತಿಪರ ಸಂಘಟನೆಗಳ ಸಖ. ದಶಕಗಳಿಂದಲೂ ರಾಯಚೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಟ ನಡೆಸಿದವರು, ಅವರು ಭಾಗವಹಿಸಿದ ಕಾರ್ಯಕ್ರಮ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 1997 ರಿಂದಲೇ ಬೆಂಗಳೂರು-ಮೈಸೂರು ಕಾರಿಡಾರ್ ವಿರುದ್ಧದ ಹೋರಾಟದಲ್ಲಿ ನರಸಿಂಹಮೂರ್ತಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರೊಡನೆ ಸಕ್ರಿಯವಾಗಿದ್ದನ್ನು ನಾವು ನೋಡಿದ್ದೇವೆ. ಗೌರಿ ಟ್ರಸ್ಟ್‌ಗೆ ಎಚ್.ಎಸ್.ದೊರೆಸ್ವಾಮಿಯವರು ಅಧ್ಯಕ್ಷರು, ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ.

ದೊರೆಸ್ವಾಮಿಯವರು ಇದ್ದ ಕಡೆ ಬಲಗೈಯಂತೆ ಅವರ ಜೊತೆ ನರಸಿಂಹಮೂರ್ತಿಯವರೂ ಸಾಮಾನ್ಯವಾಗಿ ಇದ್ದೇ ಇರುತ್ತಾರೆ.
ಹೀಗಿರುವಾಗ, ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದಾದರೆ ಎಚ್.ಎಸ್.ದೊರೆಸ್ವಾಮಿಯವರೂ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಬೇಕಾಗಿ ಬರುವ ದಯಾನೀಯ ಪರಿಸ್ಥಿತಿಯೂ ನಮಗೆ ಬರಬಹುದೇನೋ.

ಇನ್ನೂ ತಮಾಷೆ ಎಂದರೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಪೊಲೀಸ್ ಕ್ವಾಟ್ರಸ್ ಎದುರೇನೆ ನರಸಿಂಹಮೂರ್ತಿ ಮನೆ. ನರಸಿಂಹಮೂರ್ತಿ ಮನೆ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳನ್ನೆ ಮೂರ್ತಿ ಮನೆ ವಿಳಾಸ ಕೇಳುವ ಪರಿಪಾಠ ಉಂಟು. ಹೀಗಿರುವಾಗ ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎಂದು ಹೇಳುವಲ್ಲಿ ಯಾವುದಾದರೂ ಕಾಣದ ಕೈಗಳ ಒತ್ತಡ ಇರಬಹುದೇ? ಈ ಅನುಮಾನ ಆತಂಕ ಕಾಡುತ್ತದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೆ, ಪತ್ರಿಕಾಕರ್ತರು, ಭಿನ್ನ ಧ್ವನಿಗಳ ಕತ್ತು ಹಿಸುಕಲಾಗುತ್ತಿದೆ.

ಈ ಪ್ರಕರಣ ಸಂಬಂಧಪಟ್ಟಂತೆ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವೇದಮೂರ್ತಿಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ನೀಡಿರುವ ವಿವರಗಳನ್ನು ವಿಶೇಷವಾಗಿ ಗಮನಿಸಬೇಕಾಗಿದೆ. ಅವರು ಹೇಳುತ್ತಾರೆ- 1) ಬಡವರಿಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಏಳೆಂಟು ಜನ ಸಭೆ ನಡೆಸುತ್ತಿದ್ದರು- ಇದೊಂದು ಪ್ರಕರಣ 2) ಬಿಡಿಓ ನೇತೃತ್ವದಲ್ಲಿ ಸಭಾ ಭವನ ಕಟ್ಟುತ್ತಿದ್ದಾಗ ಪಕ್ಕದಲ್ಲಿದ್ದ ಗರೀಬನ ಜೋಪಡಿಗೆ ತೊಂದರೆಯಾಗುತ್ತದೆ ಎಂದು ಒಂದಿಷ್ಟು ಜನ ಮಾರಾಕಾಸ್ತ್ರಗಳೊಡನೆ ಅಡಚಣೆ ಮಾಡಿದರು. 3) ಈ ಪ್ರಕರಣಗಳಲ್ಲಿ ಚಾರ್ಜ್‍ಷೀಟ್ ಆಗಿದೆ. ನ್ಯಾಯಾಲಯದಿಂದ ವಾರೆಂಟ್ ಇದೆ. ಈ ವಾರೆಂಟ್ ಮೇರೆಗೆ (ವಿನೋದ್ ಎಂಬ ಹೆಸರಲ್ಲಿ ಪ್ರಕರಣಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯೇ ತಲೆ ಮರೆಸಿಕೊಂಡಿದ್ದ ನರಸಿಂಹಮೂರ್ತಿ ಎಂದು) ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಮುಂದಿನದು ನ್ಯಾಯಾಲಯಕ್ಕೆ ಬಿಟ್ಟಿದ್ದು ಎನ್ನುತ್ತಾರೆ.

ಮೊದಲನೆಯದಾಗಿ ಎಸ್.ಪಿ. ವೇದಮೂರ್ತಿಯವರ ಸರಳ, ನೇರ ಮಾತುಗಳನ್ನು ನಾವು ಗೌರವಿಸಬೇಕು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಲಯದ ವಾರೆಂಟ್ ಇದೆ. ಆ ಪ್ರಕಾರವಾಗಿ ಕರ್ತವ್ಯ ನಿರ್ವಹಿಸಿದ್ದೇವೆ ಎನ್ನುತ್ತಾರೆ. ಈಗ ಇರುವ ಯಥಾಸ್ಥಿತಿ ಜಡ ಕಾನೂನು ಪ್ರಕಾರ ಅವರು ಕೆಲಸ ಮಾಡಿದ್ದಾರೆ. ಅವರು ಮಾಡಲೇಬೇಕಾಗುತ್ತದೆ. ಆದ್ದರಿಂದ ಎತ್ತು ಈಯ್ತು ಎಂದರೆ ಕೊಟ್ಟಿಗೆಗೆ ಕಟ್ಟು ಎಂಬ ಗಾದೆ ಮಾತಿನಂತೆ ಪೊಲೀಸ್ ಬಗ್ಗೆ ಕುರುಡಾಗಿ ಎಗರಾಡುವುದನ್ನು ನಮ್ಮ ಹೋರಾಟದ ಸಂಘಟನೆಗಳ ಗೆಳೆಯರು ಕೈ ಬಿಡುವುದು ಕ್ಷೇಮ.

ಯಾಕೆಂದರೆ, ಇಲ್ಲಿ ನಾವು ಚರ್ಚಿಸಬೇಕಾದ ವಿಚಾರಗಳೇ ಬೇರೆ ಇದೆ. ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ? ಇನ್ನು ಸಮುದಾಯ ಭವನ ಕಟ್ಟುವುದಕ್ಕೆ ಒಂದಿಷ್ಟು ಜನ ಅಡಚಣೆ ಮಾಡಿದರು ಎಂಬ ಪ್ರಕರಣವನ್ನು ಈಗಾಗಲೇ ನ್ಯಾಯಾಲಯ ವಿಚಾರಣೆ ಮಾಡಿ ಸಾಕ್ಷ್ಯಾ ಇಲ್ಲದೆ ಪ್ರಕರಣವನ್ನು ಖುಲಾಸೆ ಮಾಡಿದೆ. ಏನು ಆರೋಪ ಇತ್ತೋ ಅದೇ ಬಿದ್ದುಹೋಗಿದೆ. ಈ ಸಂಬಂಧ ಬಂಧಿಸಿದ್ದ ಆರೋಪಿಗಳ ಬಿಡುಗಡೆಯೂ ಆಗಿದೆ. ಆರೋಪವೇ ಬಿದ್ದು ಹೋಗಿರುವಾಗ, ಇವರಲ್ಲಿ ಆರೋಪಿತರಾದ ವಿನೋದನೊ ಮತ್ತೊಬ್ಬನೊ ಸಿಕ್ಕರೆಷ್ಟು? ಸಿಗದಿದ್ದರೆಷ್ಟು? ಈ ಪ್ರಕರಣವನ್ನು ಜೀವಂತವಾಗಿರಿಸುವುದೇಕೆ? ಇದು ನಮ್ಮ ಪೊಲೀಸ್ ಮತ್ತು ನ್ಯಾಯಾಲಯದ ಮೇಲೆ ಆಚರಣಾತ್ಮಕ ವೃಥಾ ಹೆಣ ಭಾರವಲ್ಲವೆ?- ಪಿ.ಐ.ಎಲ್. ಮೂಲಕ ಪ್ರಶ್ನಿಸಬೇಕಾಗಿದೆ. ಜೊತೆಗೆ ಇದನ್ನು ಸಾರ್ವಜನಿಕರು, ಸಂಘಟನೆಗಳು, ಪರ್ಯಾಯ ಕಾನೂನು ತಜ್ಞರು ಚರ್ಚಿಸಬೇಕಾಗಿದೆ.

ಯಾರ ಅಪರಾಧವೂ ಕಾನೂನು ಚೌಕಟ್ಟನ್ನು ಮೀರಿದ್ದಲ್ಲ ಎಂಬ ಅರಿವಿನಲ್ಲೆ, ನರಸಿಂಹಮೂರ್ತಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಹೊರಬರುತ್ತಾರೆಂಬ ನಂಬಿಕೆ ಇದ್ದರೂ, ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತ ‘ವಿಳಂಬ ಹಿಂಸೆ’ ನೀಡಬಹುದೆನ್ನುವ ಆತಂಕವೂ ನನಗಿದೆ. ಈ ರೀತಿಯಾದಲ್ಲಿ ಸ್ವರಾಜ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳಾದ ರೈತ ಸಂಘ, ದಲಿತ ಸಂಘಟನೆ, ಮತ್ತಿತರ ಸಮಾಜಮುಖಿ ಸಂಘಟನೆಗಳ ಜೊತೆಗೂಡಿ ಬರ, ನೆರೆ, ಉದ್ಯೋಗ ಕುಸಿತ ಇವುಗಳನ್ನೆಲ್ಲ ಸಮ್ಮಿಲನಗೊಳಿಸಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...