Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ - ದೇವನೂರ ಮಹಾದೇವ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ – ದೇವನೂರ ಮಹಾದೇವ

ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ?

- Advertisement -
- Advertisement -

ಗೆಳೆಯ ದೊಡ್ಡಿಪಾಳ್ಯ ನರಸಿಂಹಮೂರ್ತಿರನ್ನು ರಾಯಚೂರು ಪೊಲೀಸ್, ಎರಡು ದಶಕಗಳ ಹಿಂದೆ ನಡೆದಿತ್ತು ಎನ್ನಲಾದ `ಕ್ರಿಮಿನಲ್ ಪ್ರಕರಣ’ ಗಳಲ್ಲಿ ವಿನೋದ್ ಎಂಬ ಹೆಸರಿನಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯೇ ನರಸಿಂಹಮೂರ್ತಿ ಎಂದು ಪೊಲೀಸ್ ಸಾಕ್ಷಿ ಆಧರಿಸಿ ಗುಮಾನಿ ಮೇಲೆ ಬಂಧಿಸಲಾಗಿದೆ.

ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದೇ ಅನುಮಾನ ಆತಂಕ ಹುಟ್ಟಿಸುವಂತಿದೆ. ಯಾಕೆಂದರೆ ನರಸಿಂಹಮೂರ್ತಿ ಸಾರ್ವಜನಿಕ ವ್ಯಕ್ತಿ. ಪತ್ರಿಕಾ ಕ್ಷೇತ್ರದಲ್ಲಿ ಚಿರಪರಿಚಿತ. ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ. ಪ್ರಗತಿಪರ ಸಂಘಟನೆಗಳ ಸಖ. ದಶಕಗಳಿಂದಲೂ ರಾಯಚೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಟ ನಡೆಸಿದವರು, ಅವರು ಭಾಗವಹಿಸಿದ ಕಾರ್ಯಕ್ರಮ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 1997 ರಿಂದಲೇ ಬೆಂಗಳೂರು-ಮೈಸೂರು ಕಾರಿಡಾರ್ ವಿರುದ್ಧದ ಹೋರಾಟದಲ್ಲಿ ನರಸಿಂಹಮೂರ್ತಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರೊಡನೆ ಸಕ್ರಿಯವಾಗಿದ್ದನ್ನು ನಾವು ನೋಡಿದ್ದೇವೆ. ಗೌರಿ ಟ್ರಸ್ಟ್‌ಗೆ ಎಚ್.ಎಸ್.ದೊರೆಸ್ವಾಮಿಯವರು ಅಧ್ಯಕ್ಷರು, ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ.

ದೊರೆಸ್ವಾಮಿಯವರು ಇದ್ದ ಕಡೆ ಬಲಗೈಯಂತೆ ಅವರ ಜೊತೆ ನರಸಿಂಹಮೂರ್ತಿಯವರೂ ಸಾಮಾನ್ಯವಾಗಿ ಇದ್ದೇ ಇರುತ್ತಾರೆ.
ಹೀಗಿರುವಾಗ, ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದಾದರೆ ಎಚ್.ಎಸ್.ದೊರೆಸ್ವಾಮಿಯವರೂ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಬೇಕಾಗಿ ಬರುವ ದಯಾನೀಯ ಪರಿಸ್ಥಿತಿಯೂ ನಮಗೆ ಬರಬಹುದೇನೋ.

ಇನ್ನೂ ತಮಾಷೆ ಎಂದರೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಪೊಲೀಸ್ ಕ್ವಾಟ್ರಸ್ ಎದುರೇನೆ ನರಸಿಂಹಮೂರ್ತಿ ಮನೆ. ನರಸಿಂಹಮೂರ್ತಿ ಮನೆ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳನ್ನೆ ಮೂರ್ತಿ ಮನೆ ವಿಳಾಸ ಕೇಳುವ ಪರಿಪಾಠ ಉಂಟು. ಹೀಗಿರುವಾಗ ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎಂದು ಹೇಳುವಲ್ಲಿ ಯಾವುದಾದರೂ ಕಾಣದ ಕೈಗಳ ಒತ್ತಡ ಇರಬಹುದೇ? ಈ ಅನುಮಾನ ಆತಂಕ ಕಾಡುತ್ತದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೆ, ಪತ್ರಿಕಾಕರ್ತರು, ಭಿನ್ನ ಧ್ವನಿಗಳ ಕತ್ತು ಹಿಸುಕಲಾಗುತ್ತಿದೆ.

ಈ ಪ್ರಕರಣ ಸಂಬಂಧಪಟ್ಟಂತೆ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವೇದಮೂರ್ತಿಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ನೀಡಿರುವ ವಿವರಗಳನ್ನು ವಿಶೇಷವಾಗಿ ಗಮನಿಸಬೇಕಾಗಿದೆ. ಅವರು ಹೇಳುತ್ತಾರೆ- 1) ಬಡವರಿಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಏಳೆಂಟು ಜನ ಸಭೆ ನಡೆಸುತ್ತಿದ್ದರು- ಇದೊಂದು ಪ್ರಕರಣ 2) ಬಿಡಿಓ ನೇತೃತ್ವದಲ್ಲಿ ಸಭಾ ಭವನ ಕಟ್ಟುತ್ತಿದ್ದಾಗ ಪಕ್ಕದಲ್ಲಿದ್ದ ಗರೀಬನ ಜೋಪಡಿಗೆ ತೊಂದರೆಯಾಗುತ್ತದೆ ಎಂದು ಒಂದಿಷ್ಟು ಜನ ಮಾರಾಕಾಸ್ತ್ರಗಳೊಡನೆ ಅಡಚಣೆ ಮಾಡಿದರು. 3) ಈ ಪ್ರಕರಣಗಳಲ್ಲಿ ಚಾರ್ಜ್‍ಷೀಟ್ ಆಗಿದೆ. ನ್ಯಾಯಾಲಯದಿಂದ ವಾರೆಂಟ್ ಇದೆ. ಈ ವಾರೆಂಟ್ ಮೇರೆಗೆ (ವಿನೋದ್ ಎಂಬ ಹೆಸರಲ್ಲಿ ಪ್ರಕರಣಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯೇ ತಲೆ ಮರೆಸಿಕೊಂಡಿದ್ದ ನರಸಿಂಹಮೂರ್ತಿ ಎಂದು) ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಮುಂದಿನದು ನ್ಯಾಯಾಲಯಕ್ಕೆ ಬಿಟ್ಟಿದ್ದು ಎನ್ನುತ್ತಾರೆ.

ಮೊದಲನೆಯದಾಗಿ ಎಸ್.ಪಿ. ವೇದಮೂರ್ತಿಯವರ ಸರಳ, ನೇರ ಮಾತುಗಳನ್ನು ನಾವು ಗೌರವಿಸಬೇಕು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಲಯದ ವಾರೆಂಟ್ ಇದೆ. ಆ ಪ್ರಕಾರವಾಗಿ ಕರ್ತವ್ಯ ನಿರ್ವಹಿಸಿದ್ದೇವೆ ಎನ್ನುತ್ತಾರೆ. ಈಗ ಇರುವ ಯಥಾಸ್ಥಿತಿ ಜಡ ಕಾನೂನು ಪ್ರಕಾರ ಅವರು ಕೆಲಸ ಮಾಡಿದ್ದಾರೆ. ಅವರು ಮಾಡಲೇಬೇಕಾಗುತ್ತದೆ. ಆದ್ದರಿಂದ ಎತ್ತು ಈಯ್ತು ಎಂದರೆ ಕೊಟ್ಟಿಗೆಗೆ ಕಟ್ಟು ಎಂಬ ಗಾದೆ ಮಾತಿನಂತೆ ಪೊಲೀಸ್ ಬಗ್ಗೆ ಕುರುಡಾಗಿ ಎಗರಾಡುವುದನ್ನು ನಮ್ಮ ಹೋರಾಟದ ಸಂಘಟನೆಗಳ ಗೆಳೆಯರು ಕೈ ಬಿಡುವುದು ಕ್ಷೇಮ.

ಯಾಕೆಂದರೆ, ಇಲ್ಲಿ ನಾವು ಚರ್ಚಿಸಬೇಕಾದ ವಿಚಾರಗಳೇ ಬೇರೆ ಇದೆ. ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ? ಇನ್ನು ಸಮುದಾಯ ಭವನ ಕಟ್ಟುವುದಕ್ಕೆ ಒಂದಿಷ್ಟು ಜನ ಅಡಚಣೆ ಮಾಡಿದರು ಎಂಬ ಪ್ರಕರಣವನ್ನು ಈಗಾಗಲೇ ನ್ಯಾಯಾಲಯ ವಿಚಾರಣೆ ಮಾಡಿ ಸಾಕ್ಷ್ಯಾ ಇಲ್ಲದೆ ಪ್ರಕರಣವನ್ನು ಖುಲಾಸೆ ಮಾಡಿದೆ. ಏನು ಆರೋಪ ಇತ್ತೋ ಅದೇ ಬಿದ್ದುಹೋಗಿದೆ. ಈ ಸಂಬಂಧ ಬಂಧಿಸಿದ್ದ ಆರೋಪಿಗಳ ಬಿಡುಗಡೆಯೂ ಆಗಿದೆ. ಆರೋಪವೇ ಬಿದ್ದು ಹೋಗಿರುವಾಗ, ಇವರಲ್ಲಿ ಆರೋಪಿತರಾದ ವಿನೋದನೊ ಮತ್ತೊಬ್ಬನೊ ಸಿಕ್ಕರೆಷ್ಟು? ಸಿಗದಿದ್ದರೆಷ್ಟು? ಈ ಪ್ರಕರಣವನ್ನು ಜೀವಂತವಾಗಿರಿಸುವುದೇಕೆ? ಇದು ನಮ್ಮ ಪೊಲೀಸ್ ಮತ್ತು ನ್ಯಾಯಾಲಯದ ಮೇಲೆ ಆಚರಣಾತ್ಮಕ ವೃಥಾ ಹೆಣ ಭಾರವಲ್ಲವೆ?- ಪಿ.ಐ.ಎಲ್. ಮೂಲಕ ಪ್ರಶ್ನಿಸಬೇಕಾಗಿದೆ. ಜೊತೆಗೆ ಇದನ್ನು ಸಾರ್ವಜನಿಕರು, ಸಂಘಟನೆಗಳು, ಪರ್ಯಾಯ ಕಾನೂನು ತಜ್ಞರು ಚರ್ಚಿಸಬೇಕಾಗಿದೆ.

ಯಾರ ಅಪರಾಧವೂ ಕಾನೂನು ಚೌಕಟ್ಟನ್ನು ಮೀರಿದ್ದಲ್ಲ ಎಂಬ ಅರಿವಿನಲ್ಲೆ, ನರಸಿಂಹಮೂರ್ತಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಹೊರಬರುತ್ತಾರೆಂಬ ನಂಬಿಕೆ ಇದ್ದರೂ, ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತ ‘ವಿಳಂಬ ಹಿಂಸೆ’ ನೀಡಬಹುದೆನ್ನುವ ಆತಂಕವೂ ನನಗಿದೆ. ಈ ರೀತಿಯಾದಲ್ಲಿ ಸ್ವರಾಜ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳಾದ ರೈತ ಸಂಘ, ದಲಿತ ಸಂಘಟನೆ, ಮತ್ತಿತರ ಸಮಾಜಮುಖಿ ಸಂಘಟನೆಗಳ ಜೊತೆಗೂಡಿ ಬರ, ನೆರೆ, ಉದ್ಯೋಗ ಕುಸಿತ ಇವುಗಳನ್ನೆಲ್ಲ ಸಮ್ಮಿಲನಗೊಳಿಸಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...