Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ - ದೇವನೂರ ಮಹಾದೇವ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ – ದೇವನೂರ ಮಹಾದೇವ

ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ?

- Advertisement -
- Advertisement -

ಗೆಳೆಯ ದೊಡ್ಡಿಪಾಳ್ಯ ನರಸಿಂಹಮೂರ್ತಿರನ್ನು ರಾಯಚೂರು ಪೊಲೀಸ್, ಎರಡು ದಶಕಗಳ ಹಿಂದೆ ನಡೆದಿತ್ತು ಎನ್ನಲಾದ `ಕ್ರಿಮಿನಲ್ ಪ್ರಕರಣ’ ಗಳಲ್ಲಿ ವಿನೋದ್ ಎಂಬ ಹೆಸರಿನಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯೇ ನರಸಿಂಹಮೂರ್ತಿ ಎಂದು ಪೊಲೀಸ್ ಸಾಕ್ಷಿ ಆಧರಿಸಿ ಗುಮಾನಿ ಮೇಲೆ ಬಂಧಿಸಲಾಗಿದೆ.

ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದೇ ಅನುಮಾನ ಆತಂಕ ಹುಟ್ಟಿಸುವಂತಿದೆ. ಯಾಕೆಂದರೆ ನರಸಿಂಹಮೂರ್ತಿ ಸಾರ್ವಜನಿಕ ವ್ಯಕ್ತಿ. ಪತ್ರಿಕಾ ಕ್ಷೇತ್ರದಲ್ಲಿ ಚಿರಪರಿಚಿತ. ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ. ಪ್ರಗತಿಪರ ಸಂಘಟನೆಗಳ ಸಖ. ದಶಕಗಳಿಂದಲೂ ರಾಯಚೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಟ ನಡೆಸಿದವರು, ಅವರು ಭಾಗವಹಿಸಿದ ಕಾರ್ಯಕ್ರಮ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 1997 ರಿಂದಲೇ ಬೆಂಗಳೂರು-ಮೈಸೂರು ಕಾರಿಡಾರ್ ವಿರುದ್ಧದ ಹೋರಾಟದಲ್ಲಿ ನರಸಿಂಹಮೂರ್ತಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರೊಡನೆ ಸಕ್ರಿಯವಾಗಿದ್ದನ್ನು ನಾವು ನೋಡಿದ್ದೇವೆ. ಗೌರಿ ಟ್ರಸ್ಟ್‌ಗೆ ಎಚ್.ಎಸ್.ದೊರೆಸ್ವಾಮಿಯವರು ಅಧ್ಯಕ್ಷರು, ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ.

ದೊರೆಸ್ವಾಮಿಯವರು ಇದ್ದ ಕಡೆ ಬಲಗೈಯಂತೆ ಅವರ ಜೊತೆ ನರಸಿಂಹಮೂರ್ತಿಯವರೂ ಸಾಮಾನ್ಯವಾಗಿ ಇದ್ದೇ ಇರುತ್ತಾರೆ.
ಹೀಗಿರುವಾಗ, ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದಾದರೆ ಎಚ್.ಎಸ್.ದೊರೆಸ್ವಾಮಿಯವರೂ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಬೇಕಾಗಿ ಬರುವ ದಯಾನೀಯ ಪರಿಸ್ಥಿತಿಯೂ ನಮಗೆ ಬರಬಹುದೇನೋ.

ಇನ್ನೂ ತಮಾಷೆ ಎಂದರೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಪೊಲೀಸ್ ಕ್ವಾಟ್ರಸ್ ಎದುರೇನೆ ನರಸಿಂಹಮೂರ್ತಿ ಮನೆ. ನರಸಿಂಹಮೂರ್ತಿ ಮನೆ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳನ್ನೆ ಮೂರ್ತಿ ಮನೆ ವಿಳಾಸ ಕೇಳುವ ಪರಿಪಾಠ ಉಂಟು. ಹೀಗಿರುವಾಗ ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎಂದು ಹೇಳುವಲ್ಲಿ ಯಾವುದಾದರೂ ಕಾಣದ ಕೈಗಳ ಒತ್ತಡ ಇರಬಹುದೇ? ಈ ಅನುಮಾನ ಆತಂಕ ಕಾಡುತ್ತದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೆ, ಪತ್ರಿಕಾಕರ್ತರು, ಭಿನ್ನ ಧ್ವನಿಗಳ ಕತ್ತು ಹಿಸುಕಲಾಗುತ್ತಿದೆ.

ಈ ಪ್ರಕರಣ ಸಂಬಂಧಪಟ್ಟಂತೆ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವೇದಮೂರ್ತಿಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ನೀಡಿರುವ ವಿವರಗಳನ್ನು ವಿಶೇಷವಾಗಿ ಗಮನಿಸಬೇಕಾಗಿದೆ. ಅವರು ಹೇಳುತ್ತಾರೆ- 1) ಬಡವರಿಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಏಳೆಂಟು ಜನ ಸಭೆ ನಡೆಸುತ್ತಿದ್ದರು- ಇದೊಂದು ಪ್ರಕರಣ 2) ಬಿಡಿಓ ನೇತೃತ್ವದಲ್ಲಿ ಸಭಾ ಭವನ ಕಟ್ಟುತ್ತಿದ್ದಾಗ ಪಕ್ಕದಲ್ಲಿದ್ದ ಗರೀಬನ ಜೋಪಡಿಗೆ ತೊಂದರೆಯಾಗುತ್ತದೆ ಎಂದು ಒಂದಿಷ್ಟು ಜನ ಮಾರಾಕಾಸ್ತ್ರಗಳೊಡನೆ ಅಡಚಣೆ ಮಾಡಿದರು. 3) ಈ ಪ್ರಕರಣಗಳಲ್ಲಿ ಚಾರ್ಜ್‍ಷೀಟ್ ಆಗಿದೆ. ನ್ಯಾಯಾಲಯದಿಂದ ವಾರೆಂಟ್ ಇದೆ. ಈ ವಾರೆಂಟ್ ಮೇರೆಗೆ (ವಿನೋದ್ ಎಂಬ ಹೆಸರಲ್ಲಿ ಪ್ರಕರಣಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯೇ ತಲೆ ಮರೆಸಿಕೊಂಡಿದ್ದ ನರಸಿಂಹಮೂರ್ತಿ ಎಂದು) ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಮುಂದಿನದು ನ್ಯಾಯಾಲಯಕ್ಕೆ ಬಿಟ್ಟಿದ್ದು ಎನ್ನುತ್ತಾರೆ.

ಮೊದಲನೆಯದಾಗಿ ಎಸ್.ಪಿ. ವೇದಮೂರ್ತಿಯವರ ಸರಳ, ನೇರ ಮಾತುಗಳನ್ನು ನಾವು ಗೌರವಿಸಬೇಕು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಲಯದ ವಾರೆಂಟ್ ಇದೆ. ಆ ಪ್ರಕಾರವಾಗಿ ಕರ್ತವ್ಯ ನಿರ್ವಹಿಸಿದ್ದೇವೆ ಎನ್ನುತ್ತಾರೆ. ಈಗ ಇರುವ ಯಥಾಸ್ಥಿತಿ ಜಡ ಕಾನೂನು ಪ್ರಕಾರ ಅವರು ಕೆಲಸ ಮಾಡಿದ್ದಾರೆ. ಅವರು ಮಾಡಲೇಬೇಕಾಗುತ್ತದೆ. ಆದ್ದರಿಂದ ಎತ್ತು ಈಯ್ತು ಎಂದರೆ ಕೊಟ್ಟಿಗೆಗೆ ಕಟ್ಟು ಎಂಬ ಗಾದೆ ಮಾತಿನಂತೆ ಪೊಲೀಸ್ ಬಗ್ಗೆ ಕುರುಡಾಗಿ ಎಗರಾಡುವುದನ್ನು ನಮ್ಮ ಹೋರಾಟದ ಸಂಘಟನೆಗಳ ಗೆಳೆಯರು ಕೈ ಬಿಡುವುದು ಕ್ಷೇಮ.

ಯಾಕೆಂದರೆ, ಇಲ್ಲಿ ನಾವು ಚರ್ಚಿಸಬೇಕಾದ ವಿಚಾರಗಳೇ ಬೇರೆ ಇದೆ. ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ? ಇನ್ನು ಸಮುದಾಯ ಭವನ ಕಟ್ಟುವುದಕ್ಕೆ ಒಂದಿಷ್ಟು ಜನ ಅಡಚಣೆ ಮಾಡಿದರು ಎಂಬ ಪ್ರಕರಣವನ್ನು ಈಗಾಗಲೇ ನ್ಯಾಯಾಲಯ ವಿಚಾರಣೆ ಮಾಡಿ ಸಾಕ್ಷ್ಯಾ ಇಲ್ಲದೆ ಪ್ರಕರಣವನ್ನು ಖುಲಾಸೆ ಮಾಡಿದೆ. ಏನು ಆರೋಪ ಇತ್ತೋ ಅದೇ ಬಿದ್ದುಹೋಗಿದೆ. ಈ ಸಂಬಂಧ ಬಂಧಿಸಿದ್ದ ಆರೋಪಿಗಳ ಬಿಡುಗಡೆಯೂ ಆಗಿದೆ. ಆರೋಪವೇ ಬಿದ್ದು ಹೋಗಿರುವಾಗ, ಇವರಲ್ಲಿ ಆರೋಪಿತರಾದ ವಿನೋದನೊ ಮತ್ತೊಬ್ಬನೊ ಸಿಕ್ಕರೆಷ್ಟು? ಸಿಗದಿದ್ದರೆಷ್ಟು? ಈ ಪ್ರಕರಣವನ್ನು ಜೀವಂತವಾಗಿರಿಸುವುದೇಕೆ? ಇದು ನಮ್ಮ ಪೊಲೀಸ್ ಮತ್ತು ನ್ಯಾಯಾಲಯದ ಮೇಲೆ ಆಚರಣಾತ್ಮಕ ವೃಥಾ ಹೆಣ ಭಾರವಲ್ಲವೆ?- ಪಿ.ಐ.ಎಲ್. ಮೂಲಕ ಪ್ರಶ್ನಿಸಬೇಕಾಗಿದೆ. ಜೊತೆಗೆ ಇದನ್ನು ಸಾರ್ವಜನಿಕರು, ಸಂಘಟನೆಗಳು, ಪರ್ಯಾಯ ಕಾನೂನು ತಜ್ಞರು ಚರ್ಚಿಸಬೇಕಾಗಿದೆ.

ಯಾರ ಅಪರಾಧವೂ ಕಾನೂನು ಚೌಕಟ್ಟನ್ನು ಮೀರಿದ್ದಲ್ಲ ಎಂಬ ಅರಿವಿನಲ್ಲೆ, ನರಸಿಂಹಮೂರ್ತಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಹೊರಬರುತ್ತಾರೆಂಬ ನಂಬಿಕೆ ಇದ್ದರೂ, ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತ ‘ವಿಳಂಬ ಹಿಂಸೆ’ ನೀಡಬಹುದೆನ್ನುವ ಆತಂಕವೂ ನನಗಿದೆ. ಈ ರೀತಿಯಾದಲ್ಲಿ ಸ್ವರಾಜ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳಾದ ರೈತ ಸಂಘ, ದಲಿತ ಸಂಘಟನೆ, ಮತ್ತಿತರ ಸಮಾಜಮುಖಿ ಸಂಘಟನೆಗಳ ಜೊತೆಗೂಡಿ ಬರ, ನೆರೆ, ಉದ್ಯೋಗ ಕುಸಿತ ಇವುಗಳನ್ನೆಲ್ಲ ಸಮ್ಮಿಲನಗೊಳಿಸಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...