Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ - ದೇವನೂರ ಮಹಾದೇವ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದಲ್ಲಿ ಅನುಮಾನ, ಆತಂಕ, ನಂಬಿಕೆ – ದೇವನೂರ ಮಹಾದೇವ

ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ?

- Advertisement -
- Advertisement -

ಗೆಳೆಯ ದೊಡ್ಡಿಪಾಳ್ಯ ನರಸಿಂಹಮೂರ್ತಿರನ್ನು ರಾಯಚೂರು ಪೊಲೀಸ್, ಎರಡು ದಶಕಗಳ ಹಿಂದೆ ನಡೆದಿತ್ತು ಎನ್ನಲಾದ `ಕ್ರಿಮಿನಲ್ ಪ್ರಕರಣ’ ಗಳಲ್ಲಿ ವಿನೋದ್ ಎಂಬ ಹೆಸರಿನಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯೇ ನರಸಿಂಹಮೂರ್ತಿ ಎಂದು ಪೊಲೀಸ್ ಸಾಕ್ಷಿ ಆಧರಿಸಿ ಗುಮಾನಿ ಮೇಲೆ ಬಂಧಿಸಲಾಗಿದೆ.

ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದೇ ಅನುಮಾನ ಆತಂಕ ಹುಟ್ಟಿಸುವಂತಿದೆ. ಯಾಕೆಂದರೆ ನರಸಿಂಹಮೂರ್ತಿ ಸಾರ್ವಜನಿಕ ವ್ಯಕ್ತಿ. ಪತ್ರಿಕಾ ಕ್ಷೇತ್ರದಲ್ಲಿ ಚಿರಪರಿಚಿತ. ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ. ಪ್ರಗತಿಪರ ಸಂಘಟನೆಗಳ ಸಖ. ದಶಕಗಳಿಂದಲೂ ರಾಯಚೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಟ ನಡೆಸಿದವರು, ಅವರು ಭಾಗವಹಿಸಿದ ಕಾರ್ಯಕ್ರಮ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 1997 ರಿಂದಲೇ ಬೆಂಗಳೂರು-ಮೈಸೂರು ಕಾರಿಡಾರ್ ವಿರುದ್ಧದ ಹೋರಾಟದಲ್ಲಿ ನರಸಿಂಹಮೂರ್ತಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರೊಡನೆ ಸಕ್ರಿಯವಾಗಿದ್ದನ್ನು ನಾವು ನೋಡಿದ್ದೇವೆ. ಗೌರಿ ಟ್ರಸ್ಟ್‌ಗೆ ಎಚ್.ಎಸ್.ದೊರೆಸ್ವಾಮಿಯವರು ಅಧ್ಯಕ್ಷರು, ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ.

ದೊರೆಸ್ವಾಮಿಯವರು ಇದ್ದ ಕಡೆ ಬಲಗೈಯಂತೆ ಅವರ ಜೊತೆ ನರಸಿಂಹಮೂರ್ತಿಯವರೂ ಸಾಮಾನ್ಯವಾಗಿ ಇದ್ದೇ ಇರುತ್ತಾರೆ.
ಹೀಗಿರುವಾಗ, ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎನ್ನುವುದಾದರೆ ಎಚ್.ಎಸ್.ದೊರೆಸ್ವಾಮಿಯವರೂ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಬೇಕಾಗಿ ಬರುವ ದಯಾನೀಯ ಪರಿಸ್ಥಿತಿಯೂ ನಮಗೆ ಬರಬಹುದೇನೋ.

ಇನ್ನೂ ತಮಾಷೆ ಎಂದರೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಪೊಲೀಸ್ ಕ್ವಾಟ್ರಸ್ ಎದುರೇನೆ ನರಸಿಂಹಮೂರ್ತಿ ಮನೆ. ನರಸಿಂಹಮೂರ್ತಿ ಮನೆ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳನ್ನೆ ಮೂರ್ತಿ ಮನೆ ವಿಳಾಸ ಕೇಳುವ ಪರಿಪಾಠ ಉಂಟು. ಹೀಗಿರುವಾಗ ನರಸಿಂಹಮೂರ್ತಿ ತಲೆ ಮರೆಸಿಕೊಂಡಿದ್ದರು ಎಂದು ಹೇಳುವಲ್ಲಿ ಯಾವುದಾದರೂ ಕಾಣದ ಕೈಗಳ ಒತ್ತಡ ಇರಬಹುದೇ? ಈ ಅನುಮಾನ ಆತಂಕ ಕಾಡುತ್ತದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೆ, ಪತ್ರಿಕಾಕರ್ತರು, ಭಿನ್ನ ಧ್ವನಿಗಳ ಕತ್ತು ಹಿಸುಕಲಾಗುತ್ತಿದೆ.

ಈ ಪ್ರಕರಣ ಸಂಬಂಧಪಟ್ಟಂತೆ, ರಾಯಚೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವೇದಮೂರ್ತಿಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ನೀಡಿರುವ ವಿವರಗಳನ್ನು ವಿಶೇಷವಾಗಿ ಗಮನಿಸಬೇಕಾಗಿದೆ. ಅವರು ಹೇಳುತ್ತಾರೆ- 1) ಬಡವರಿಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಏಳೆಂಟು ಜನ ಸಭೆ ನಡೆಸುತ್ತಿದ್ದರು- ಇದೊಂದು ಪ್ರಕರಣ 2) ಬಿಡಿಓ ನೇತೃತ್ವದಲ್ಲಿ ಸಭಾ ಭವನ ಕಟ್ಟುತ್ತಿದ್ದಾಗ ಪಕ್ಕದಲ್ಲಿದ್ದ ಗರೀಬನ ಜೋಪಡಿಗೆ ತೊಂದರೆಯಾಗುತ್ತದೆ ಎಂದು ಒಂದಿಷ್ಟು ಜನ ಮಾರಾಕಾಸ್ತ್ರಗಳೊಡನೆ ಅಡಚಣೆ ಮಾಡಿದರು. 3) ಈ ಪ್ರಕರಣಗಳಲ್ಲಿ ಚಾರ್ಜ್‍ಷೀಟ್ ಆಗಿದೆ. ನ್ಯಾಯಾಲಯದಿಂದ ವಾರೆಂಟ್ ಇದೆ. ಈ ವಾರೆಂಟ್ ಮೇರೆಗೆ (ವಿನೋದ್ ಎಂಬ ಹೆಸರಲ್ಲಿ ಪ್ರಕರಣಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯೇ ತಲೆ ಮರೆಸಿಕೊಂಡಿದ್ದ ನರಸಿಂಹಮೂರ್ತಿ ಎಂದು) ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಮುಂದಿನದು ನ್ಯಾಯಾಲಯಕ್ಕೆ ಬಿಟ್ಟಿದ್ದು ಎನ್ನುತ್ತಾರೆ.

ಮೊದಲನೆಯದಾಗಿ ಎಸ್.ಪಿ. ವೇದಮೂರ್ತಿಯವರ ಸರಳ, ನೇರ ಮಾತುಗಳನ್ನು ನಾವು ಗೌರವಿಸಬೇಕು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಲಯದ ವಾರೆಂಟ್ ಇದೆ. ಆ ಪ್ರಕಾರವಾಗಿ ಕರ್ತವ್ಯ ನಿರ್ವಹಿಸಿದ್ದೇವೆ ಎನ್ನುತ್ತಾರೆ. ಈಗ ಇರುವ ಯಥಾಸ್ಥಿತಿ ಜಡ ಕಾನೂನು ಪ್ರಕಾರ ಅವರು ಕೆಲಸ ಮಾಡಿದ್ದಾರೆ. ಅವರು ಮಾಡಲೇಬೇಕಾಗುತ್ತದೆ. ಆದ್ದರಿಂದ ಎತ್ತು ಈಯ್ತು ಎಂದರೆ ಕೊಟ್ಟಿಗೆಗೆ ಕಟ್ಟು ಎಂಬ ಗಾದೆ ಮಾತಿನಂತೆ ಪೊಲೀಸ್ ಬಗ್ಗೆ ಕುರುಡಾಗಿ ಎಗರಾಡುವುದನ್ನು ನಮ್ಮ ಹೋರಾಟದ ಸಂಘಟನೆಗಳ ಗೆಳೆಯರು ಕೈ ಬಿಡುವುದು ಕ್ಷೇಮ.

ಯಾಕೆಂದರೆ, ಇಲ್ಲಿ ನಾವು ಚರ್ಚಿಸಬೇಕಾದ ವಿಚಾರಗಳೇ ಬೇರೆ ಇದೆ. ಬಡವರಿಗೆ ಕೆಲಸ ಮಾಡುತ್ತಿಲ್ಲ ಎಂದು ಚರ್ಚಿಸುವುದೂ ಅಪರಾಧವಾಗುವುದಾದರೆ ಎಲ್ಲಾ ಊರು ನಗರಗಳ ತೊಂಬತ್ತು ಭಾಗವನ್ನು ಜೈಲಾಗಿ ಪರಿವರ್ತಿಸಬೇಕಾಗುತ್ತದಲ್ಲವೆ? ಇನ್ನು ಸಮುದಾಯ ಭವನ ಕಟ್ಟುವುದಕ್ಕೆ ಒಂದಿಷ್ಟು ಜನ ಅಡಚಣೆ ಮಾಡಿದರು ಎಂಬ ಪ್ರಕರಣವನ್ನು ಈಗಾಗಲೇ ನ್ಯಾಯಾಲಯ ವಿಚಾರಣೆ ಮಾಡಿ ಸಾಕ್ಷ್ಯಾ ಇಲ್ಲದೆ ಪ್ರಕರಣವನ್ನು ಖುಲಾಸೆ ಮಾಡಿದೆ. ಏನು ಆರೋಪ ಇತ್ತೋ ಅದೇ ಬಿದ್ದುಹೋಗಿದೆ. ಈ ಸಂಬಂಧ ಬಂಧಿಸಿದ್ದ ಆರೋಪಿಗಳ ಬಿಡುಗಡೆಯೂ ಆಗಿದೆ. ಆರೋಪವೇ ಬಿದ್ದು ಹೋಗಿರುವಾಗ, ಇವರಲ್ಲಿ ಆರೋಪಿತರಾದ ವಿನೋದನೊ ಮತ್ತೊಬ್ಬನೊ ಸಿಕ್ಕರೆಷ್ಟು? ಸಿಗದಿದ್ದರೆಷ್ಟು? ಈ ಪ್ರಕರಣವನ್ನು ಜೀವಂತವಾಗಿರಿಸುವುದೇಕೆ? ಇದು ನಮ್ಮ ಪೊಲೀಸ್ ಮತ್ತು ನ್ಯಾಯಾಲಯದ ಮೇಲೆ ಆಚರಣಾತ್ಮಕ ವೃಥಾ ಹೆಣ ಭಾರವಲ್ಲವೆ?- ಪಿ.ಐ.ಎಲ್. ಮೂಲಕ ಪ್ರಶ್ನಿಸಬೇಕಾಗಿದೆ. ಜೊತೆಗೆ ಇದನ್ನು ಸಾರ್ವಜನಿಕರು, ಸಂಘಟನೆಗಳು, ಪರ್ಯಾಯ ಕಾನೂನು ತಜ್ಞರು ಚರ್ಚಿಸಬೇಕಾಗಿದೆ.

ಯಾರ ಅಪರಾಧವೂ ಕಾನೂನು ಚೌಕಟ್ಟನ್ನು ಮೀರಿದ್ದಲ್ಲ ಎಂಬ ಅರಿವಿನಲ್ಲೆ, ನರಸಿಂಹಮೂರ್ತಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಹೊರಬರುತ್ತಾರೆಂಬ ನಂಬಿಕೆ ಇದ್ದರೂ, ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತ ‘ವಿಳಂಬ ಹಿಂಸೆ’ ನೀಡಬಹುದೆನ್ನುವ ಆತಂಕವೂ ನನಗಿದೆ. ಈ ರೀತಿಯಾದಲ್ಲಿ ಸ್ವರಾಜ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳಾದ ರೈತ ಸಂಘ, ದಲಿತ ಸಂಘಟನೆ, ಮತ್ತಿತರ ಸಮಾಜಮುಖಿ ಸಂಘಟನೆಗಳ ಜೊತೆಗೂಡಿ ಬರ, ನೆರೆ, ಉದ್ಯೋಗ ಕುಸಿತ ಇವುಗಳನ್ನೆಲ್ಲ ಸಮ್ಮಿಲನಗೊಳಿಸಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...