Homeಕರ್ನಾಟಕಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮೇಲಿಂದ ಮೇಲೆ ನಾಲಿಗೆ ಹರಿಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಇದೀಗ ಮತ್ತೆ ವಿವಾದಾತ್ಮಕ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ. ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಆಝಾನ್‍ ಕೇಳಿಸಿದೆ. ಅದನ್ನು ಸಹಿಸದ ಈಶ್ವರಪ್ಪ ಅಲ್ಲಿಯೇ ಸಿಟ್ಟು ಹೊರಹಾಕಿದ್ದಾರೆ.

ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಮಸೀದಿಯಿಂದ ಆಝಾನ್  ಕೇಳಿಬಂದಿದೆ. ಇದಕ್ಕೆ ಸಿಟ್ಟಾದ ಈಶರಪ್ಪ ”ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನೆ ಮಾಡಿದ್ದಾರೆ.

”ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

”ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳುತ್ತದೆ ಎನ್ನುವುದಾದರೆ, ಅವನು ಕಿವುಡನಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು” ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆ ಬಳಿಕ ಮಂಗಳೂರಿನಲ್ಲಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಮುಸ್ಲಿಮರ ಅಝಾನ್‌ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್‌ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ” ಎಂದು ಹೇಳಿದರು.

”ಲೌಡ್‌ ಸ್ಪೀಕರ್‌ ನಲ್ಲಿ ಅಝಾನ್‌ನಿಂದ ಅನೇಕರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್‌ ತೀರ್ಪು ಅದರ ವಿರುದ್ಧವೇ ಇದೆ. ಮುಸ್ಲಿಂ ನಾಯಕರು ಈ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದರು.

”ನಾನು ಮುಸ್ಲಿಮರ ಮತಗಳು ಬೇಡವೇ ಬೇಡ ಎಂದಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರ ಮತ ಇರಲಿ. ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ. ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್‌ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು. ಎಲ್ಲಾ ರಾಷ್ಟ್ರೀಯವಾದಿ ಮುಸ್ಲಿಮರೂ ಅದನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್‌ ಇಂತಹ ವಿಚಾರದಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳಿಗೆ ವಂಚನೆ ಮಾಡುತ್ತಾ ಬಂದಿದೆ” ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...