Homeಕರ್ನಾಟಕಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಗೆ ಎನ್‌ಡಿಎ ಒಕ್ಕೂಟವನ್ನು ಸೇರಲು ರಾಜ್ಯದ ಪ್ರದೇಶಿಕ ಪಕ್ಷ ಜೆಡಿಎಸ್ ಸಿದ್ದತೆ ನಡೆಸಿದೆ ಎನ್ನುವ ಚರ್ಚೆಗೆ ಮುನ್ನಲೆಗೆ ಬಂದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯುತ್ತಿರುವ ವಿರೋಧ ಪಕ್ಷಗಳ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು, ”ವಿರೋಧ ಪಕ್ಷಗಳು ಜೆಡಿಎಸ್ ಅನ್ನು ಅವರ ಭಾಗವೆಂದು ಪರಿಗಣಿಸಿಯೇ ಇಲ್ಲ. ಹಾಗಾಗಿ, ಜೆಡಿಎಸ್ ಯಾವುದೇ ಮಹಾಘಟಬಂಧನದ ಭಾಗವಾಗುವ ಪ್ರಶ್ನೆಯೇ ಇಲ್ಲ” ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದರು.

ಕುಮಾರಸ್ವಾಮಿ ಅವರ ಈ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ”ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದ್ದರೆ ಆ ಕುರಿತಂತೆ ಅಜೆಂಡಾದಲ್ಲಿ ಚರ್ಚೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

”ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ” ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್‌ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

”ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ಎನ್‌ಡಿಎ ಮೈತ್ರಿ ಕುರಿತು ಹೆಚ್‌ಡಿಕೆ ಹೇಳಿದ್ದೇನೆ?

”ರಾಷ್ಟ್ರ ರಾಜಕಾರಣದ ಕುರಿತು ನನಗೆ ಯಾವುದೇ ಒಲವಿಲ್ಲ. ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ವಿಚಾರ ಮತ್ತು ಕೇಂದ್ರದಲ್ಲಿ ನನ್ನನ್ನು ಸಚಿವನನ್ನಾಗಿ ಮಾಡು ವಿಚಾರವೂ ಗೊತ್ತಿಲ್ಲ. ವಿರೋಧ ಪಕ್ಷದ ಸ್ಥಾನವೂ ನನಗೆ ಬೇಕಿಲ್ಲ” ಎಂದು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನೊಬ್ಬ ಸಾಮಾನ್ಯ ವಿಧಾನಸಭಾ ಸದಸ್ಯನಾಗಿ ರಾಜ್ಯದ ಜನರ ಪರ ಕೆಲಸ ಮಾಡುತ್ತೇನೆ” ಎಂದರು.

”ಕೆಲವು ಮಾಧ್ಯಮಗಳು ಈ ಬಗ್ಗೆ ಚರ್ಚೆ ನಡೆಸುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂಬ ಸುದ್ದಿ ಯಾಕೆ ಚರ್ಚೆಯಾಗುತ್ತಿದೆ ಎಂಬುದು ಗೊತ್ತಿಲ್ಲ. ನನಗೆ ಮಹಾಘಟಬಂಧನ ಮತ್ತು ಎನ್‌ಡಿಎ ಎರಡರಿಂದಲೂ ಆಹ್ವಾನವಿಲ್ಲ. ಆಹ್ವಾನ ಬಂದಾಗ ಏನು ಮಾಡಬೇಕು ಎಂಬುದನ್ನು ಪಕ್ಷದ ಇತರ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ಹೇಳುವ ಮೂಲಕ ತಾವು ಎನ್‌ಡಿಎ ಸೇರುವ ಹಾಗೂ ಮಹಾಘಟಬಂಧನದ ಭಾಗವಾಗುವ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನನ್ನು ಬೇಗ ನೇಮಕ ಮಾಡಿ: ಬಿಜೆಪಿ ಹೆಚ್‌ಡಿಕೆ ಮನವಿ

ಈ ವೇಳೆ ವಿರೋಧ ಪಕ್ಷದ ನಾಯಕನ ಸ್ಥಾನಮಾನ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ”ನಾಡಿನ ಜನತೆ ನನ್ನನ್ನು ಸ್ಥಾನಮಾನದಿಂದ ಗುರುತಿಸಿಲ್ಲ. ಎಲ್ಲೇ ಹೋದರೂ ನನ್ನ ವೈಯಕ್ತಿಕ ವರ್ಚಸ್ಸಿನಿಂದ ಗುರುತಿಸುತ್ತಾರೆ. ಸ್ಥಾನಮಾನಗಳಿಂದ ವರ್ಚಸ್ಸು ಗಳಿಸಬೇಕಿಲ್ಲ. ನಾನೂ ಈಗಲೂ ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. 65 ಸ್ಥಾನ ಗೆದ್ದಿರುವ ಆ ಪಕ್ಷದಲ್ಲಿ ಹಲವು ಹಿರಿಯ ನಾಯಕರಿದ್ದಾರೆ. ಒಬ್ಬ ಸಮರ್ಥ ನಾಯಕನನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿ. ಈ ವಿಚಾರದಲ್ಲಿ ಕಾಲಹರಣ ಮಾಡಬೇಡಿ ಎಂದು ಆ ಪಕ್ಷದ ದೆಹಲಿ ನಾಯಕರಿಗೂ ಮನವಿ ಮಾಡುತ್ತೇನೆ” ಎಂದರು.

”ಮೈತ್ರಿ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಸೇರಿದಂತೆ, ನಮ್ಮ ಪಕ್ಷದಿಂದ ಯಾವುದೇ ಬೇಡಿಕೆ ಇಲ್ಲ. ಆ ಕುರಿತು ಮಾತುಕತೆಯೂ ಆಗಿಲ್ಲ. ನಾವು 19 ಸ್ಥಾನ ಗೆದ್ದಿದ್ದೇವೆ, ಬಿಜೆಪಿ 65 ಸ್ಥಾನ ಗೆದ್ದಿದೆ. ಅಲ್ಲಿಯೂ ಮಾಜಿ ಮುಖ್ಯಮಂತ್ರಿ ಸೇರಿ ಅನೇಕ ಮಾಜಿ ಸಚಿವರಿದ್ದಾರೆ. ಹಾಗಾಗಿ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...