Homeಕರ್ನಾಟಕಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಗೆ ಎನ್‌ಡಿಎ ಒಕ್ಕೂಟವನ್ನು ಸೇರಲು ರಾಜ್ಯದ ಪ್ರದೇಶಿಕ ಪಕ್ಷ ಜೆಡಿಎಸ್ ಸಿದ್ದತೆ ನಡೆಸಿದೆ ಎನ್ನುವ ಚರ್ಚೆಗೆ ಮುನ್ನಲೆಗೆ ಬಂದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯುತ್ತಿರುವ ವಿರೋಧ ಪಕ್ಷಗಳ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು, ”ವಿರೋಧ ಪಕ್ಷಗಳು ಜೆಡಿಎಸ್ ಅನ್ನು ಅವರ ಭಾಗವೆಂದು ಪರಿಗಣಿಸಿಯೇ ಇಲ್ಲ. ಹಾಗಾಗಿ, ಜೆಡಿಎಸ್ ಯಾವುದೇ ಮಹಾಘಟಬಂಧನದ ಭಾಗವಾಗುವ ಪ್ರಶ್ನೆಯೇ ಇಲ್ಲ” ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದರು.

ಕುಮಾರಸ್ವಾಮಿ ಅವರ ಈ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ”ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದ್ದರೆ ಆ ಕುರಿತಂತೆ ಅಜೆಂಡಾದಲ್ಲಿ ಚರ್ಚೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

”ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ” ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್‌ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

”ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ಎನ್‌ಡಿಎ ಮೈತ್ರಿ ಕುರಿತು ಹೆಚ್‌ಡಿಕೆ ಹೇಳಿದ್ದೇನೆ?

”ರಾಷ್ಟ್ರ ರಾಜಕಾರಣದ ಕುರಿತು ನನಗೆ ಯಾವುದೇ ಒಲವಿಲ್ಲ. ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ವಿಚಾರ ಮತ್ತು ಕೇಂದ್ರದಲ್ಲಿ ನನ್ನನ್ನು ಸಚಿವನನ್ನಾಗಿ ಮಾಡು ವಿಚಾರವೂ ಗೊತ್ತಿಲ್ಲ. ವಿರೋಧ ಪಕ್ಷದ ಸ್ಥಾನವೂ ನನಗೆ ಬೇಕಿಲ್ಲ” ಎಂದು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನೊಬ್ಬ ಸಾಮಾನ್ಯ ವಿಧಾನಸಭಾ ಸದಸ್ಯನಾಗಿ ರಾಜ್ಯದ ಜನರ ಪರ ಕೆಲಸ ಮಾಡುತ್ತೇನೆ” ಎಂದರು.

”ಕೆಲವು ಮಾಧ್ಯಮಗಳು ಈ ಬಗ್ಗೆ ಚರ್ಚೆ ನಡೆಸುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂಬ ಸುದ್ದಿ ಯಾಕೆ ಚರ್ಚೆಯಾಗುತ್ತಿದೆ ಎಂಬುದು ಗೊತ್ತಿಲ್ಲ. ನನಗೆ ಮಹಾಘಟಬಂಧನ ಮತ್ತು ಎನ್‌ಡಿಎ ಎರಡರಿಂದಲೂ ಆಹ್ವಾನವಿಲ್ಲ. ಆಹ್ವಾನ ಬಂದಾಗ ಏನು ಮಾಡಬೇಕು ಎಂಬುದನ್ನು ಪಕ್ಷದ ಇತರ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ಹೇಳುವ ಮೂಲಕ ತಾವು ಎನ್‌ಡಿಎ ಸೇರುವ ಹಾಗೂ ಮಹಾಘಟಬಂಧನದ ಭಾಗವಾಗುವ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನನ್ನು ಬೇಗ ನೇಮಕ ಮಾಡಿ: ಬಿಜೆಪಿ ಹೆಚ್‌ಡಿಕೆ ಮನವಿ

ಈ ವೇಳೆ ವಿರೋಧ ಪಕ್ಷದ ನಾಯಕನ ಸ್ಥಾನಮಾನ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ”ನಾಡಿನ ಜನತೆ ನನ್ನನ್ನು ಸ್ಥಾನಮಾನದಿಂದ ಗುರುತಿಸಿಲ್ಲ. ಎಲ್ಲೇ ಹೋದರೂ ನನ್ನ ವೈಯಕ್ತಿಕ ವರ್ಚಸ್ಸಿನಿಂದ ಗುರುತಿಸುತ್ತಾರೆ. ಸ್ಥಾನಮಾನಗಳಿಂದ ವರ್ಚಸ್ಸು ಗಳಿಸಬೇಕಿಲ್ಲ. ನಾನೂ ಈಗಲೂ ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. 65 ಸ್ಥಾನ ಗೆದ್ದಿರುವ ಆ ಪಕ್ಷದಲ್ಲಿ ಹಲವು ಹಿರಿಯ ನಾಯಕರಿದ್ದಾರೆ. ಒಬ್ಬ ಸಮರ್ಥ ನಾಯಕನನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿ. ಈ ವಿಚಾರದಲ್ಲಿ ಕಾಲಹರಣ ಮಾಡಬೇಡಿ ಎಂದು ಆ ಪಕ್ಷದ ದೆಹಲಿ ನಾಯಕರಿಗೂ ಮನವಿ ಮಾಡುತ್ತೇನೆ” ಎಂದರು.

”ಮೈತ್ರಿ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಸೇರಿದಂತೆ, ನಮ್ಮ ಪಕ್ಷದಿಂದ ಯಾವುದೇ ಬೇಡಿಕೆ ಇಲ್ಲ. ಆ ಕುರಿತು ಮಾತುಕತೆಯೂ ಆಗಿಲ್ಲ. ನಾವು 19 ಸ್ಥಾನ ಗೆದ್ದಿದ್ದೇವೆ, ಬಿಜೆಪಿ 65 ಸ್ಥಾನ ಗೆದ್ದಿದೆ. ಅಲ್ಲಿಯೂ ಮಾಜಿ ಮುಖ್ಯಮಂತ್ರಿ ಸೇರಿ ಅನೇಕ ಮಾಜಿ ಸಚಿವರಿದ್ದಾರೆ. ಹಾಗಾಗಿ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...