Homeಕರ್ನಾಟಕಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಗೆ ಎನ್‌ಡಿಎ ಒಕ್ಕೂಟವನ್ನು ಸೇರಲು ರಾಜ್ಯದ ಪ್ರದೇಶಿಕ ಪಕ್ಷ ಜೆಡಿಎಸ್ ಸಿದ್ದತೆ ನಡೆಸಿದೆ ಎನ್ನುವ ಚರ್ಚೆಗೆ ಮುನ್ನಲೆಗೆ ಬಂದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯುತ್ತಿರುವ ವಿರೋಧ ಪಕ್ಷಗಳ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು, ”ವಿರೋಧ ಪಕ್ಷಗಳು ಜೆಡಿಎಸ್ ಅನ್ನು ಅವರ ಭಾಗವೆಂದು ಪರಿಗಣಿಸಿಯೇ ಇಲ್ಲ. ಹಾಗಾಗಿ, ಜೆಡಿಎಸ್ ಯಾವುದೇ ಮಹಾಘಟಬಂಧನದ ಭಾಗವಾಗುವ ಪ್ರಶ್ನೆಯೇ ಇಲ್ಲ” ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದರು.

ಕುಮಾರಸ್ವಾಮಿ ಅವರ ಈ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ”ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದ್ದರೆ ಆ ಕುರಿತಂತೆ ಅಜೆಂಡಾದಲ್ಲಿ ಚರ್ಚೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

”ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ” ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್‌ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

”ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ಎನ್‌ಡಿಎ ಮೈತ್ರಿ ಕುರಿತು ಹೆಚ್‌ಡಿಕೆ ಹೇಳಿದ್ದೇನೆ?

”ರಾಷ್ಟ್ರ ರಾಜಕಾರಣದ ಕುರಿತು ನನಗೆ ಯಾವುದೇ ಒಲವಿಲ್ಲ. ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ವಿಚಾರ ಮತ್ತು ಕೇಂದ್ರದಲ್ಲಿ ನನ್ನನ್ನು ಸಚಿವನನ್ನಾಗಿ ಮಾಡು ವಿಚಾರವೂ ಗೊತ್ತಿಲ್ಲ. ವಿರೋಧ ಪಕ್ಷದ ಸ್ಥಾನವೂ ನನಗೆ ಬೇಕಿಲ್ಲ” ಎಂದು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನೊಬ್ಬ ಸಾಮಾನ್ಯ ವಿಧಾನಸಭಾ ಸದಸ್ಯನಾಗಿ ರಾಜ್ಯದ ಜನರ ಪರ ಕೆಲಸ ಮಾಡುತ್ತೇನೆ” ಎಂದರು.

”ಕೆಲವು ಮಾಧ್ಯಮಗಳು ಈ ಬಗ್ಗೆ ಚರ್ಚೆ ನಡೆಸುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂಬ ಸುದ್ದಿ ಯಾಕೆ ಚರ್ಚೆಯಾಗುತ್ತಿದೆ ಎಂಬುದು ಗೊತ್ತಿಲ್ಲ. ನನಗೆ ಮಹಾಘಟಬಂಧನ ಮತ್ತು ಎನ್‌ಡಿಎ ಎರಡರಿಂದಲೂ ಆಹ್ವಾನವಿಲ್ಲ. ಆಹ್ವಾನ ಬಂದಾಗ ಏನು ಮಾಡಬೇಕು ಎಂಬುದನ್ನು ಪಕ್ಷದ ಇತರ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ಹೇಳುವ ಮೂಲಕ ತಾವು ಎನ್‌ಡಿಎ ಸೇರುವ ಹಾಗೂ ಮಹಾಘಟಬಂಧನದ ಭಾಗವಾಗುವ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನನ್ನು ಬೇಗ ನೇಮಕ ಮಾಡಿ: ಬಿಜೆಪಿ ಹೆಚ್‌ಡಿಕೆ ಮನವಿ

ಈ ವೇಳೆ ವಿರೋಧ ಪಕ್ಷದ ನಾಯಕನ ಸ್ಥಾನಮಾನ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ”ನಾಡಿನ ಜನತೆ ನನ್ನನ್ನು ಸ್ಥಾನಮಾನದಿಂದ ಗುರುತಿಸಿಲ್ಲ. ಎಲ್ಲೇ ಹೋದರೂ ನನ್ನ ವೈಯಕ್ತಿಕ ವರ್ಚಸ್ಸಿನಿಂದ ಗುರುತಿಸುತ್ತಾರೆ. ಸ್ಥಾನಮಾನಗಳಿಂದ ವರ್ಚಸ್ಸು ಗಳಿಸಬೇಕಿಲ್ಲ. ನಾನೂ ಈಗಲೂ ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. 65 ಸ್ಥಾನ ಗೆದ್ದಿರುವ ಆ ಪಕ್ಷದಲ್ಲಿ ಹಲವು ಹಿರಿಯ ನಾಯಕರಿದ್ದಾರೆ. ಒಬ್ಬ ಸಮರ್ಥ ನಾಯಕನನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿ. ಈ ವಿಚಾರದಲ್ಲಿ ಕಾಲಹರಣ ಮಾಡಬೇಡಿ ಎಂದು ಆ ಪಕ್ಷದ ದೆಹಲಿ ನಾಯಕರಿಗೂ ಮನವಿ ಮಾಡುತ್ತೇನೆ” ಎಂದರು.

”ಮೈತ್ರಿ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಸೇರಿದಂತೆ, ನಮ್ಮ ಪಕ್ಷದಿಂದ ಯಾವುದೇ ಬೇಡಿಕೆ ಇಲ್ಲ. ಆ ಕುರಿತು ಮಾತುಕತೆಯೂ ಆಗಿಲ್ಲ. ನಾವು 19 ಸ್ಥಾನ ಗೆದ್ದಿದ್ದೇವೆ, ಬಿಜೆಪಿ 65 ಸ್ಥಾನ ಗೆದ್ದಿದೆ. ಅಲ್ಲಿಯೂ ಮಾಜಿ ಮುಖ್ಯಮಂತ್ರಿ ಸೇರಿ ಅನೇಕ ಮಾಜಿ ಸಚಿವರಿದ್ದಾರೆ. ಹಾಗಾಗಿ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...