Homeಮುಖಪುಟ‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಪ್ರತಿಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್, ಪ್ರಧಾನಮಂತ್ರಿಯವರು “ಕಳಂಕಿತ ಕೈಗಳನ್ನು ಹಿಡಿದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಭಾನುವಾರ ಪ್ರಧಾನಿ ಮೋದಿ ತಮಿಳುನಾಡಿನ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಕೈ ಹಿಡಿದು, ಕೈ ಮೇಲಕ್ಕೆ ಎತ್ತಿ ಸಂಭ್ರಮಿಸಿದ್ದನ್ನು ಸ್ಟಾಲಿನ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಡಳಿತಾರೂಢ ಎಐಡಿಎಂಕೆಯ ಇಬ್ಬರು ಉನ್ನತ ನಾಯಕರ ಕೈಗಳನ್ನು ಹಿಡಿದು ಮೇಲಕ್ಕೆತ್ತಿ ಚುನಾವಣಾ ಭಂಗಿಯನ್ನು ಪ್ರದರ್ಶಿಸಿದ್ದರು. ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಮುನ್ನ ರಾಜಕೀಯವಾಗಿ ಮಹತ್ವದ ಸಭೆಯಲ್ಲಿ ಪಿಎಂ ಮೋದಿ, ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಡಿಸಿಎಂ ಪನ್ನೀರ್‌ಸೆಲ್ವಂ ಅವರು ತಮ್ಮ ಕೈಗಳನ್ನು ಜೋಡಿಸಿ ಮೇಲಕ್ಕೆ ಎತ್ತಿಕೊಂಡು ವೇದಿಕೆಯ ಮೇಲೆ ನಿಂತಿದ್ದರು.

“ಒಂದು ಕಡೆ ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಮತ್ತು ಮತ್ತೊಂದೆಡೆ ಅವರು ಭ್ರಷ್ಟಾಚಾರದ ಆರೋಪ ಹೊತ್ತಿರುವ ಇಬ್ಬರು ಜನರ ಕೈಗಳನ್ನು ಹಿಡಿದಿದ್ದಾರೆ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಸ್ಟಾಲಿನ್ ಹೇಳಿದ್ದಾರೆ.

“ಪಿಎಂ ಮೋದಿ ಇಪಿಎಸ್ ಮತ್ತು ಒಪಿಎಸ್‌ಗಳ ಕಳಂಕಿತ ಕೈಗಳನ್ನು ಹಿಡಿದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಾರೆಯೇ” ಎಂದು ಅವರು ಪ್ರಶ್ನಿಸಿದರು, (ಇಪಿಎಸ್-ಮುಖ್ಯಮಂತ್ರಿ ಇ.ಪಳಮಿಸ್ವಾಮಿ ಮತ್ತು ಒಪಿಎಸ್-ಡಿಸಿಎಂ ಒ. ಪನ್ನೀರ್‌ಸೆಲ್ವಂ)

“ಅಂತಹ ಕಳಂಕಿತ ಕೈಗಳನ್ನು ಪ್ರಧಾನಿ ಹಿಡಿದಾಗ, ಅವರು ಭ್ರಷ್ಟಾಚಾರವನ್ನು ಸ್ವೀಕರಿಸಿ ಬೆಂಬಲಿಸುತ್ತಾರೆಯೇ ಎಂಬ ಅನುಮಾನ ಹುಟ್ಟುತ್ತದೆ’ ಎಂದು ಸ್ಟಾಲಿನ್ ಟೀಕಿಸಿದ್ದಾರೆ.
ಸರ್ಕಾರದ ಕಾಂಟ್ರಾಕ್ಟ್‌ಗಳನ್ನು ತನ್ನ ಸಂಬಂಧಿಕರಿಗೆ ಹಸ್ತಾಂತರಿಸುವಲ್ಲಿ, ಹೆದ್ದಾರಿ ಟೆಂಡರ್‌ಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಸಂಪತ್ತಿನಲ್ಲಿ ಮುಖ್ಯಮಂತ್ರಿ ಪಾತ್ರವಿದೆ ಎಂದು ಡಿಎಂಕೆ ಆರೋಪಿಸಿದೆ. ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿತ್ತು ಆದರೆ ಎಐಎಡಿಎಂಕೆ ಸರ್ಕಾರದ ಮೇಲ್ಮನವಿ ಮೇರೆಗೆ ಈ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಡಿಸಿಎಂ ಪನ್ನೀರ್‌ಸೆಲ್ವಂ ಅಥವಾ ಒಪಿಎಸ್ ಅಪಾರ ಅಕ್ರಮ ಸಂಪತ್ತಿನ ಆರೋಪ ಎದುರಿಸುತ್ತಿದ್ದಾರೆ.

ಈ ಇಬ್ಬರೂ ನಾಯಕರನ್ನು ಯಾವುದೇ ನ್ಯಾಯಾಲಯವು ದೋಷಾರೋಪಣೆ ಮಾಡಿಲ್ಲ ಎಂದು ಸೂಚಿಸಿದಾಗ, ಸ್ಟಾಲಿನ್, “ನ್ಯಾಯಾಲಯವು ಅವರನ್ನು ನಿರಪರಾಧಿಗಳೆಂದು ಕೂಡ ಎಂದು ಹೇಳಿಲ್ಲ. ಪ್ರಧಾನಿ ಅದನ್ನು ಬೆಂಬಲಿಸುವುದು ಇನ್ನೂ ತಪ್ಪು.” ಎಂದಿದ್ದಾರೆ.

ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ನಾರಾಯಣನ್ ತಿರುಪತಿ, “ಇಪಿಎಸ್ ಅಥವಾ ಒಪಿಎಸ್ ವಿರುದ್ಧ ಯಾವುದೇ ಪ್ರಕರಣಗಳು ಸಾಬೀತಾಗಿಲ್ಲ. ಪ್ರಧಾನಿ ಇಬ್ಬರು ತಮಿಳು ನಾಯಕರನ್ನು ಗೌರವಿಸುತ್ತಿದ್ದಾರೆ ಮತ್ತು ಅವರ ಕೈಗಳನ್ನು ಹಿಡಿದಿದ್ದಾರೆ ಎಂದು ಸ್ಟಾಲಿನ್ ಹೆಮ್ಮೆಪಡಬೇಕು” ಎಂದಿದ್ದು, ‘ಸ್ಟಾಲಿನ್ ನಮ್ಮ ಮೈತ್ರಿ ಬಗ್ಗೆ ಅಸೂಯೆ ಪಡುತ್ತಿದ್ದಾರಷ್ಟೇ’ ಎಂದಿದ್ದಾರೆ.

ಮೇ ವೇಳೆಗೆ ನಡೆಯಲಿರುವ ತಮಿಳುನಾಡು ಚುನಾವಣೆಗೆ ಬಿರುಸಿನ ತಯಾರಿ ನಡೆಸಿರುವ ಡಿಎಂಕೆ, ಎಐಎಡಿಎಂಕೆಯ ಎರಡು ಅವಧಿಯ ಭ್ರಷ್ಟಾಚಾರ ವಿಷಯವನ್ನು ಕೇಂದ್ರೀಕರಿಸುವ ಅಭಿಯಾನದೊಂದಿಗೆ ಆಕ್ರಮಣಕಾರಿಯಾಗಿ ಬೀದಿಗಿಳಿದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ 39 ಸ್ಥಾನಗಳನ್ನು ಗೆದ್ದಿದ್ದರೆ, ಎಐಡಿಎಂಕೆ-ಬಿಜೆಪಿ ಮೈತ್ರಿ ಒಂದು ಸ್ಥಾನ ಮಾತ್ರ ಗೆದ್ದಿತ್ತು.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...