Homeಮುಖಪುಟ‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಪ್ರತಿಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್, ಪ್ರಧಾನಮಂತ್ರಿಯವರು “ಕಳಂಕಿತ ಕೈಗಳನ್ನು ಹಿಡಿದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಭಾನುವಾರ ಪ್ರಧಾನಿ ಮೋದಿ ತಮಿಳುನಾಡಿನ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಕೈ ಹಿಡಿದು, ಕೈ ಮೇಲಕ್ಕೆ ಎತ್ತಿ ಸಂಭ್ರಮಿಸಿದ್ದನ್ನು ಸ್ಟಾಲಿನ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಡಳಿತಾರೂಢ ಎಐಡಿಎಂಕೆಯ ಇಬ್ಬರು ಉನ್ನತ ನಾಯಕರ ಕೈಗಳನ್ನು ಹಿಡಿದು ಮೇಲಕ್ಕೆತ್ತಿ ಚುನಾವಣಾ ಭಂಗಿಯನ್ನು ಪ್ರದರ್ಶಿಸಿದ್ದರು. ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಮುನ್ನ ರಾಜಕೀಯವಾಗಿ ಮಹತ್ವದ ಸಭೆಯಲ್ಲಿ ಪಿಎಂ ಮೋದಿ, ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಡಿಸಿಎಂ ಪನ್ನೀರ್‌ಸೆಲ್ವಂ ಅವರು ತಮ್ಮ ಕೈಗಳನ್ನು ಜೋಡಿಸಿ ಮೇಲಕ್ಕೆ ಎತ್ತಿಕೊಂಡು ವೇದಿಕೆಯ ಮೇಲೆ ನಿಂತಿದ್ದರು.

“ಒಂದು ಕಡೆ ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಮತ್ತು ಮತ್ತೊಂದೆಡೆ ಅವರು ಭ್ರಷ್ಟಾಚಾರದ ಆರೋಪ ಹೊತ್ತಿರುವ ಇಬ್ಬರು ಜನರ ಕೈಗಳನ್ನು ಹಿಡಿದಿದ್ದಾರೆ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಸ್ಟಾಲಿನ್ ಹೇಳಿದ್ದಾರೆ.

“ಪಿಎಂ ಮೋದಿ ಇಪಿಎಸ್ ಮತ್ತು ಒಪಿಎಸ್‌ಗಳ ಕಳಂಕಿತ ಕೈಗಳನ್ನು ಹಿಡಿದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಾರೆಯೇ” ಎಂದು ಅವರು ಪ್ರಶ್ನಿಸಿದರು, (ಇಪಿಎಸ್-ಮುಖ್ಯಮಂತ್ರಿ ಇ.ಪಳಮಿಸ್ವಾಮಿ ಮತ್ತು ಒಪಿಎಸ್-ಡಿಸಿಎಂ ಒ. ಪನ್ನೀರ್‌ಸೆಲ್ವಂ)

“ಅಂತಹ ಕಳಂಕಿತ ಕೈಗಳನ್ನು ಪ್ರಧಾನಿ ಹಿಡಿದಾಗ, ಅವರು ಭ್ರಷ್ಟಾಚಾರವನ್ನು ಸ್ವೀಕರಿಸಿ ಬೆಂಬಲಿಸುತ್ತಾರೆಯೇ ಎಂಬ ಅನುಮಾನ ಹುಟ್ಟುತ್ತದೆ’ ಎಂದು ಸ್ಟಾಲಿನ್ ಟೀಕಿಸಿದ್ದಾರೆ.
ಸರ್ಕಾರದ ಕಾಂಟ್ರಾಕ್ಟ್‌ಗಳನ್ನು ತನ್ನ ಸಂಬಂಧಿಕರಿಗೆ ಹಸ್ತಾಂತರಿಸುವಲ್ಲಿ, ಹೆದ್ದಾರಿ ಟೆಂಡರ್‌ಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಸಂಪತ್ತಿನಲ್ಲಿ ಮುಖ್ಯಮಂತ್ರಿ ಪಾತ್ರವಿದೆ ಎಂದು ಡಿಎಂಕೆ ಆರೋಪಿಸಿದೆ. ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿತ್ತು ಆದರೆ ಎಐಎಡಿಎಂಕೆ ಸರ್ಕಾರದ ಮೇಲ್ಮನವಿ ಮೇರೆಗೆ ಈ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಡಿಸಿಎಂ ಪನ್ನೀರ್‌ಸೆಲ್ವಂ ಅಥವಾ ಒಪಿಎಸ್ ಅಪಾರ ಅಕ್ರಮ ಸಂಪತ್ತಿನ ಆರೋಪ ಎದುರಿಸುತ್ತಿದ್ದಾರೆ.

ಈ ಇಬ್ಬರೂ ನಾಯಕರನ್ನು ಯಾವುದೇ ನ್ಯಾಯಾಲಯವು ದೋಷಾರೋಪಣೆ ಮಾಡಿಲ್ಲ ಎಂದು ಸೂಚಿಸಿದಾಗ, ಸ್ಟಾಲಿನ್, “ನ್ಯಾಯಾಲಯವು ಅವರನ್ನು ನಿರಪರಾಧಿಗಳೆಂದು ಕೂಡ ಎಂದು ಹೇಳಿಲ್ಲ. ಪ್ರಧಾನಿ ಅದನ್ನು ಬೆಂಬಲಿಸುವುದು ಇನ್ನೂ ತಪ್ಪು.” ಎಂದಿದ್ದಾರೆ.

ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ನಾರಾಯಣನ್ ತಿರುಪತಿ, “ಇಪಿಎಸ್ ಅಥವಾ ಒಪಿಎಸ್ ವಿರುದ್ಧ ಯಾವುದೇ ಪ್ರಕರಣಗಳು ಸಾಬೀತಾಗಿಲ್ಲ. ಪ್ರಧಾನಿ ಇಬ್ಬರು ತಮಿಳು ನಾಯಕರನ್ನು ಗೌರವಿಸುತ್ತಿದ್ದಾರೆ ಮತ್ತು ಅವರ ಕೈಗಳನ್ನು ಹಿಡಿದಿದ್ದಾರೆ ಎಂದು ಸ್ಟಾಲಿನ್ ಹೆಮ್ಮೆಪಡಬೇಕು” ಎಂದಿದ್ದು, ‘ಸ್ಟಾಲಿನ್ ನಮ್ಮ ಮೈತ್ರಿ ಬಗ್ಗೆ ಅಸೂಯೆ ಪಡುತ್ತಿದ್ದಾರಷ್ಟೇ’ ಎಂದಿದ್ದಾರೆ.

ಮೇ ವೇಳೆಗೆ ನಡೆಯಲಿರುವ ತಮಿಳುನಾಡು ಚುನಾವಣೆಗೆ ಬಿರುಸಿನ ತಯಾರಿ ನಡೆಸಿರುವ ಡಿಎಂಕೆ, ಎಐಎಡಿಎಂಕೆಯ ಎರಡು ಅವಧಿಯ ಭ್ರಷ್ಟಾಚಾರ ವಿಷಯವನ್ನು ಕೇಂದ್ರೀಕರಿಸುವ ಅಭಿಯಾನದೊಂದಿಗೆ ಆಕ್ರಮಣಕಾರಿಯಾಗಿ ಬೀದಿಗಿಳಿದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ 39 ಸ್ಥಾನಗಳನ್ನು ಗೆದ್ದಿದ್ದರೆ, ಎಐಡಿಎಂಕೆ-ಬಿಜೆಪಿ ಮೈತ್ರಿ ಒಂದು ಸ್ಥಾನ ಮಾತ್ರ ಗೆದ್ದಿತ್ತು.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...