Homeಮುಖಪುಟ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

- Advertisement -
- Advertisement -

ಹಿಂದಿ ಹೇರಿಕೆಗೆ ತಮಿಳುನಾಡಿನಲ್ಲಿ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ವಿವಿಧ ರಾಜ್ಯಗಳ ಜನರು ಹಿಂದಿ ಭಾಷೆಯಲ್ಲಿ ವ್ಯವಹರಿಸುವಂತೆ ಒ‌ಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ಈ ಹೇಳಿಕೆ ನೀಡಿದೆ.

ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಣ್ಣಾಮಲೈ, “ನಮಗೆ ಕೆಲಸ, ಶಿಕ್ಷಣ ಅಥವಾ ಇತರ ಉದ್ದೇಶಗಳಿಗಾಗಿ ಅಗತ್ಯವಿದ್ದರೆ ನಾವು ಹಿಂದಿ ಕಲಿಯುತ್ತೇವೆ. ಆದರೆ ಹಿಂದಿ ಹೇರಿಕೆ ಮಾಡಲು ಸಾಧ್ಯವಿಲ್ಲ. ನಾನೂ ಸೇರಿದಂತೆ ಇಲ್ಲಿ ಯಾರೂ ಹಿಂದಿ ಮಾತನಾಡುವುದಿಲ್ಲ. ನಾವು ಭಾರತೀಯರು ಎಂದು ಸಾಬೀತುಪಡಿಸಲು ನಾವು ಭಾಷೆಯೊಂದನ್ನು ಕಲಿಯಬೇಕಾದ ಪರಿಸ್ಥಿತಿ ಇಲ್ಲಿ ಇಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ 40 ವರ್ಷಗಳಿಂದ ಹಿಂದಿ ಭಾಷೆಯ ವಿಷಯದಲ್ಲಿ ರಾಜಕೀಯ ಮಾಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿಯನ್ನು ಮುಖ್ಯ ಭಾಷೆಯನ್ನಾಗಿ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಅನುಮೋದಿಸಲಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಹಿಂದಿಯನ್ನು ಐಚ್ಛಿಕ ಭಾಷೆಯನ್ನಾಗಿ ಮಾಡಿದ ಅಂತಿಮ ವರದಿಯನ್ನು ಸಂಪುಟ ಪರಿಶೀಲಿಸಿದ ನಂತರವೇ ಮೋದಿ ಅನುಮತಿ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು ಹೇಳಿಕೆ ನೀಡಿದ್ದ ಸಂಗೀತಗಾರ ಎ.ಆರ್.ರೆಹಮಾನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಣ್ಣಾ ಮಲೈ, “ತಮಿಳು ಭಾರತದ ಸಂಪರ್ಕ ಭಾಷೆಯಾದರೆ, ಅದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಆದರೆ ತಮಿಳು ಭಾಷೆ ಆ ಜಾಗವನ್ನು ಸಾಧಿಸಲು ನಾವು ಪ್ರಯತ್ನಗಳನ್ನು ಮಾಡಿದ್ದೇವೆಯೇ?” ಎಂದು ಪ್ರಶ್ನಿಸಿದ್ದಾರೆ.

ತಮಿಳನ್ನು ಸಂಪರ್ಕ ಭಾಷೆಯನ್ನಾಗಿ ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೊದಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕು. ಆಯಾ ರಾಜ್ಯಗಳ ಕನಿಷ್ಠ 10 ಶಾಲೆಗಳಲ್ಲಿ ಸಂಪೂರ್ಣವಾಗಿ ತಮಿಳಿನಲ್ಲಿ ಕಲಿಸುವಂತೆ ಕೇಳಿಕೊಳ್ಳಬೇಕೆಂದು ಅಣ್ಣಾಮಲೈ ಹೇಳಿದ್ದಾರೆ. ಇದಲ್ಲದೆ, ಇದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅವರಿಗೆ ಭರವಸೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಹಿಂದಿ ಹೇರಿಕೆ ಮಾಡುವ ಅಮಿತ್‌ ಶಾ ಅವರ ನಡೆಯು ಭಾರತದ ಸಮಗ್ರತೆ ಮತ್ತು ಬಹುತ್ವಕ್ಕೆ ವಿರುದ್ಧವಾಗಿದೆ ಮತ್ತು ಅದು ಯಶಸ್ವಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಟಾಲಿನ್ ಈ ಹಿಂದೆ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಗುಜರಾತಿ ಮಾತೃಭಾಷೆಯ ಅಮಿತ್‌ ಶಾ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕದ ಯಾವೊಬ್ಬ ಬಿಜೆಪಿ ನಾಯಕನಿಗೂ ಇಂತಹ ದೈರ್ಯ ಇಲ್ಲದಿರುವುದು ನಮ್ಮ ದುರಂತ.

  2. ಇದು ತಾಯಿಯ ನೆಲದಿಂದ ಹುಟ್ಟಿದ ಅಪ್ಪಟ ಅಪ್ಪನಿಗೆ ಹುಟ್ಟಿದ ಮಾತಾಗಿದೆ
    ಧನ್ಯವಾದಗಳು ಅವರಿಗೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...