Homeಕರ್ನಾಟಕಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಸ್ನೇಹ ಬೇರೆ, ರಾಜಕೀಯ ಬೇರೆ. ಸಂಸದ ಮೂಡ್ಲಗಿರಿಯಪ್ಪ ಕಾಂಗ್ರೆಸ್ ಪಕ್ಷದಲ್ಲಿದ್ದರು. ಹಾಗಾಗಿ ಅವರ ಮಗ ರಾಜೇಶ್ ಗೌಡ ನನಗೆ ಸ್ನೇಹಿತರು. ಹಾಗೆಂದ ಮಾತ್ರಕ್ಕೆ ಪಕ್ಷನಿಷ್ಠೆ ಮತ್ತು ತತ್ವನಿಷ್ಠೆ ಬಿಡಲು ಆಗುವುದಿಲ್ಲ.

- Advertisement -
- Advertisement -

ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ. ಶಿರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡರು ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದರು. ಟಿಕೆಟ್ ದೊರೆಯುವುದಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿ ಸೇರಿ ಆತುರ ತೋರಿದ್ದಾರೆ  ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಶಿರಾ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡ ಅವರು, ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದು. ಕ್ಷೇತ್ರದ ಮತದಾರರ ಒಲವು ಜಯಚಂದ್ರರತ್ತ ಇದೆ ಎಂದು ತಿಳಿಸಿದರು.

ಹಲವು ಜನ ಯತೀಂದ್ರ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಸ್ನೇಹಿತರು. ಹಾಗಾಗಿ ಯತೀಂದ್ರರವರು ಚುನಾವಣೆಯಲ್ಲಿ ಅವರಿಗೆ ಸಹಾಯ ಮಾಡುತ್ತಾರೆ ಎಂದು ಮಾತನಾಡುತ್ತಿದ್ದಾರೆ. ಆದರೆ ಅದೆಲ್ಲಾ ಸುಳ್ಳು. ಸ್ನೇಹ ಬೇರೆ, ರಾಜಕೀಯ ಬೇರೆ. ರಾಜೇಶ್ ಗೌಡ ನನಗೆ ಸ್ನೇಹಿತರು. ಸಂಸದ ಮೂಡ್ಲಗಿರಿಯಪ್ಪ ಕಾಂಗ್ರೆಸ್ ಪಕ್ಷದಲ್ಲಿದ್ದರು. ಹಾಗಾಗಿಯೇ ಸ್ನೇಹವೂ ಬೆಳೆಯಿತು. ಹಾಗೆಂದ ಮಾತ್ರಕ್ಕೆ ಪಕ್ಷನಿಷ್ಠೆ ಮತ್ತು ತತ್ವನಿಷ್ಠೆ ಬಿಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?


ರಾಜೇಶ್ ಗೌಡ ಶಿರಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದರು. ಮೊದಲು ಪಕ್ಷಕ್ಕೆ ಸೇರ್ಪಡೆಯಾಗಿ. ಕೆಲಸ ಮಾಡಿ ಆನಂತರ ಟಿಕೆಟ್ ವಿಚಾರ ಮಾತನಾಡೋಣ ಎಂದು ಹೇಳಿದೆವು. ನಂತರ ಜೆಡಿಎಸ್ ನಿಂದ ಟಿಕೆಟ್ ಕೇಳಿದರು. ಅಲ್ಲಿಯೂ ಅವರಿಗೆ ಟಿಕೆಟ್ ಸಿಗುವ ಭರವಸೆ ದೊರೆಯಲಿಲ್ಲ. ಹಾಗಾಗಿ ಬಿಜೆಪಿ ಸೇರಿದ್ದಾರೆ ಎಂದರು.

ಶಿರಾ ಕ್ಷೇತ್ರದಲ್ಲಿ ಹಿರಿಯರಾದ ಟಿ.ಬಿ.ಜಯಚಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಪಕ್ಷದ ನಿರ್ಧಾರ. ನಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದು ಜಯಚಂದ್ರ ಅವರ ಪರ ಪ್ರಚಾರ ನಡೆಸಿ ಹೋಗಿದ್ದಾರೆ. ಪಕ್ಷದ ತಳಮಟ್ಟದ ಕಾರ್ಯಕರ್ತರು ಆರಂಭದಿಂದಲೂ ಅಹರ್ನಿಶಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಟಿ.ಬಿ.ಜಯಚಂದ್ರ ಅವರ ಗೆಲುವು ಶತಃಸಿದ್ಧ ಎಂದರು.

ಕ್ಷೇತ್ರದಲ್ಲಿ ಸುತ್ತಾಡಿದ ಮೇಲೆ ಮತದಾರರಿಂದ ಮಾಹಿತಿ ಸಂಗ್ರಹಿಸಿದ್ದೇನೆ. ಟಿ.ಬಿ.ಜಯಚಂದ್ರ ಪರ ಹೆಚ್ಚಿನ ಒಲವು ವ್ಯಕ್ತವಾಗಿದೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಇದು ಶ್ಲಾಘನೀಯ ಸಂಗತಿ.  ಟಿ.ಬಿ.ಜಯಚಂದ್ರ ಅವರು ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಆದ್ದರಿಂದ ಅವರ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...