Homeಕರ್ನಾಟಕಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

"ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲಿತ 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಯ್ಕೆಯಾಗಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡೆಗೆ ನಮ್ಮ ಮೊದಲ ಹೆಜ್ಜೆ"

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಂಜಾಬ್‍ನವರು ಮಾತ್ರ ಭಾಗಿಯಾಗಿದ್ದಾರೆ ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದರು. ಈ ಹೇಳಿಕೆಗೆ ಸಾಹಿತಿ ದೇವನೂರು ಮಹಾದೇವ ತಿರುಗೇಟು ನೀಡಿದ್ದು, “ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ ಎಂದು ಮಾಧ್ಯಮದವರು ಕೇಳಬೇಕು” ಎಂದು ಹೇಳಿದ್ದಾರೆ.

ಮೈಸೂರಿನ ಕೃಷಿ ಅಧ್ಯಯನ ಸಂಸ್ಥೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ದೇವನೂರು ಮಹಾದೇವ, “ಪ್ರತಿಭಟನೆಯಲ್ಲಿ ಪಂಜಾಬ್‍ನವರು ಮಾತ್ರವಲ್ಲದೆ ಉತ್ತರಾಖಂಡ, ಹರಿಯಾಣ ಮುಂತಾದ ರಾಜ್ಯದ ಜನರು ಭಾಗಿಯಾಗಿದ್ದಾರೆ. ಎಲ್ಲ ರಾಜ್ಯಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಅವರಿಗೇಕೆ ತಿಳಿದಿಲ್ಲ? ಕಣ್ಣು ಕುರುಡಾಗಿದೆಯೇ, ಕಿವಿ ಕಿವುಡಾಗಿದೆಯೇ, ಸಂವೇದನೆ ಹೊರಟು ಹೋಗಿದೆಯೇ ಎಂದು ಮಾಧ್ಯಮದವರು ಅವರನ್ನು ಪ್ರಶ್ನಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

“ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲಿತ 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಯ್ಕೆಯಾಗಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡೆಗೆ ನಮ್ಮ ಮೊದಲ ಹೆಜ್ಜೆ. ಸ್ಥಳೀಯ ಹಿತಾಸಕ್ತಿಯಿಂದ ಜನರಿಗಾಗಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳು ಆಯ್ಕೆಯಾಗಿರುವುದು ನಮಗೆ ಸಂತಸ ತಂದಿದೆ. ಇದು ಸ್ವರಾಜ್ ಇಂಡಿಯಾ ಪಕ್ಷದ ಸಮತಾವಾದದ ಮೌಲ್ಯಗಳು, ಸಮಾಜಮುಖಿ ಆಶಯಗಳಿಗೆ ಸಿಕ್ಕ ಜಯ” ಎಂದು ಹರ್ಷ ವ್ಯಕ್ತಪಡಿಸಿದರು.

“ಈಗ ನೀವು ಸಾಧಿಸಿರುವ ಗೆಲುವು ಬಹಿರಂಗದ ಗೆಲುವು. ಇದರಿಂದಾಗಿ ನೀವು ಜವಾಬ್ದಾರಿಯ ನೊಗ ಹೊತ್ತಂತಾಗಿದೆ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ಗೆ ಸ್ಪರ್ಧಿಸುವ ಯೋಚನೆ ಮಾಡಬೇಕು. ಇನ್ನು ಮುಂದೆ ಪ್ರತಿನಿತ್ಯವೂ ನಿಮ್ಮನ್ನು ನೀವು ಗೆಲ್ಲಬೇಕು. ಇದು ಆಂತರಂಗದ ಗೆಲುವು. ಬೇರೆ ಪಕ್ಷಗಳು ಒಡ್ಡುವ ಆಮಿಷದ ಎದುರು ನೀವು ಗೆಲ್ಲಬೇಕು. ಅದು ನಿಜವಾದ ಗೆಲುವು. ಸ್ವರಾಜ್ ಇಂಡಿಯಾ ಪಕ್ಷಕ್ಕೆ ತನ್ನದೇ ಆದ ಸಿದ್ಧಾಂತಗಳಿವೆ. ನಿಷ್ಠೆಯಿಂದ ಒಳ್ಳೆಯ ಕೆಲಸ ಮಾಡಬೇಕು. ಗೆದ್ದವರು ಸೋತವರೊಂದಿಗೆ ವಿಶ್ವಾಸದಿಂದರಬೇಕು” ಎಂದು ಆಯ್ಕೆಯಾದವರಿಗೆ ಸಲಹೆ ನೀಡಿದರು.


ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...