Homeಮುಖಪುಟಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

- Advertisement -
- Advertisement -

ಅಲಪಾನ್‌ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿರುವ ಕೇಂದ್ರ ಸರ್ಕಾರದ ಆಶ್ಚರ್ಯಕರ ನಡೆ ಹಲವು ಚರ್ಚೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಪಶ್ಚಿಮ ಬಂಗಾಳ ರಾಜ್ಯಸರ್ಕಾರದ ಕರ್ತವ್ಯದಲ್ಲಿ ನಿಯೋಜಿತರಾಗಿರುವ 1987 ಬ್ಯಾಚ್‌ ನ IAS ಅಧಿಕಾರಿಯನ್ನು ಕೇಂದ್ರ ಏಕಾಏಕಿ ದೆಹಲಿಯ ಸಿಬ್ಬಂದಿ ಮತ್ತು ಸಾವರ್ಜನಿಕ ಕುಂದು ಕೊರತೆ ಇಲಾಖೆಗೆ ವರ್ಗಾವಣೆ ಮಾಡಿತ್ತು. ತಮ್ಮ ವರ್ಗಾವಣೆ ಆದೇಶಕ್ಕೆ ಮನ್ನಣೆ ಕೊಡದೇ ನಿವೃತ್ತಿ ತೆಗೆದುಕೊಂಡ ಅಲಪಾನ್‌ ಬಂದೋಪಾದ್ಯಾಯ್‌ ಅವರ ಮೇಲೆ ಕೇಂದ್ರ ಕ್ರಮ ಕೈಗೊಂಡಿದ್ದು ಅದರ ಭಾಗವಾಗಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಕಾರ್ಯುದರ್ಶಿ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಹಾಗಾದರೆ ಬಂದೋಪಾದ್ಯಾಯ್‌ ಅವರಿಗೆ ಕೇಂದ್ರಕ್ಕೆ ಶೋಕಾಸ್‌ ನೀಡುವ ಅಧಿಕಾರವಿದೆಯೇ? ಕಾನೂನು ಈ ವಿಷಯದಲ್ಲಿ ಏನು ಹೇಳುತ್ತದೆ ಎಂಬುದನ್ನು ನಾವಿಲ್ಲಿ ವಿವರವಾಗಿ ಚರ್ಚಿಸಿದ್ದೇವೆ.

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

ರೂಲ್‌ 7 IAS ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ವಿಚಾರಣೆ ನಡೆಸುವ ಅಧಿಕಾರ ಯಾರಿಗೆ ಇದೆ ಎಂದು ಹೇಳುತ್ತದೆ. ಐಎಎಸ್‌ ಅಧಿಕಾರಿಯು ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಆ ಅಧಿಕಾರಿಯ ಮೇಲೆ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ ಎಂದು ಆಲ್‌ ಇಂಡಿಯಾ ಸರ್ವಿಸಸ್‌ ರೂಲ್ಸ್‌, 1969 ರ 7 ನೇ ನಿಯಮವು ಸ್ಪಷ್ಟವಾಗಿ ಹೇಳುತ್ತದೆ. ಜೊತೆಗೆ ರಾಜ್ಯ ಸರ್ಕಾರದ ನಿಯೋಜನೆಯಲ್ಲಿರುವ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಥವಾ ದಂಡ ವಿಧಿಸುವಾಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಒಪ್ಪಿಗೆ ಸೂಚಿಸಬೇಕು. ರಾಜ್ಯ ಸರ್ಕಾರದ ಸಮ್ಮತಿಯ ಆಧಾರದ ಮೇಲೆ ಕೇಂದ್ರ ಐಎಎಸ್‌ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬಹುದು ಎಂದು ಈ ನಿಯಮಾವಳಿಯು ಹೇಳುತ್ತದೆ.

ಈ ಹಿಂದಿನ ಪ್ರಕರಣಗಳಲ್ಲಿ ನ್ಯಾಯಾಯಗಳು ಏನು ಹೇಳಿವೆ?

ಇತಿಹಾಸದಲ್ಲಿ ಹಿಂದೆ ನಡೆದಿರುವ ಘಟನೆಗಳಲ್ಲಿ ಬಹುತೇಕ ನ್ಯಾಯಾಲಯಗಳು ರಾಜ್ಯ ಸರ್ಕಾರಕ್ಕೆ ತನ್ನ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ಪ್ರಕರಣಗಳಲ್ಲಿ ನ್ಯಾಯಧೀಶರಲ್ಲೇ ಈ ಕುರಿತು ಭಿನ್ನಾಭಿಪ್ರಾಯಗಳಿವೆ. ಕೆಲವು ನ್ಯಾಯಾಧೀಶರು ಕೇಂದ್ರಕ್ಕೆ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆಯೆಂದು ಹೇಳಿದರೆ ಕೆಲವು ನ್ಯಾಯಾಲಯಗಳು ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಕ್ರಮ ಕೈಗೊಳ್ಳಲು ಅಧಿಕಾರವಿದೆಯೆಂದು ಹೇಳಿದ್ದಾರೆ.

ಮದ್ರಾಸ್‌ ಹೈಕೋರ್ಟ್‌ 2013 ರಲ್ಲಿ ʼಪ್ರಮೋದ್‌ ಕುಮಾರ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮಾತ್ರ ಇದೆ ಎಂದು ಹೇಳಿದೆ. ನ್ಯಾಯಾಲಯವು ಮುಂದುವರೆದು ರಾಜ್ಯ ಸರ್ಕಾರದ ಕರ್ತವ್ಯದಲ್ಲಿರುವ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳ ಮೇಲೆ ಕೇಂದ್ರವು ಸ್ವಯಂ ಪ್ರೇರಿತಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ.

ಮದ್ರಾಸ್‌ ಉಚ್ಛನ್ಯಾಯಾಲಯವು ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ , 1969 ನಿಯಮ ಏಳರ ಅರ್ಥಾನ್ವಯವನ್ನು ಮಾಡಿದ್ದು ಇಲ್ಲಿರುವ ಅಕ್ಷರಗಳನ್ನು ವಿಶಾಲವಾದ ದೃಷ್ಟಿಕೋನದಲ್ಲಿ ಅನ್ವಯಿಸಬೇಕೆಂದು ಹೇಳಿದೆ. ಜೊತೆಗೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ವಿಶೇಷವಾದ ಸೌಲಭ್ಯಗಳನ್ನು ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದ ಅಧೀನ ಇಲಾಖೆಯಲ್ಲಿ ಕೆಲಸ ಮಾಡುವಾಗ ಕೇಂದ್ರದ ಉದ್ಯೋಗಿಗಳಾಗಿರುತ್ತಾರೆ. ರಾಜ್ಯ ಸರ್ಕಾರದ ಕರ್ತವ್ಯದಲ್ಲಿ ಇರುವಾಗ ರಾಜ್ಯ ಸರ್ಕಾರದ ಉದ್ಯೋಗಿಗಳಾಗಿರುತ್ತಾರೆ ಎಂದು ಮದ್ರಾಸ್‌ ಹೈಕೋರ್ಟ್‌ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

ಇದೇ ಭಾವನೆಯು ಗುವಾಹಟಿ ಮತ್ತು ಹೈದರಾಬಾದ್‌ ಸೆಂಟ್ರಲ್‌ ಅಡ್ಮಿನಿಸ್ಟರೇಟಿವ್‌ ಟ್ರಿಬ್ಯುನಲ್‌ ಗಳು ವ್ಯಕ್ತಪಡಿಸಿವೆ. ಒಮ್ಮೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯು ರಾಜ್ಯಗಳ ಸೇವೆಗೆ ನೇಮಕಗೊಂಡ ಮೇಲೆ ಅವರು ರಾಜ್ಯ ಸರ್ಕಾರದ ಉದ್ಯೋಗಿಗಳಾಗುತ್ತಾರೆ, ಅವರು ಆಲ್ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ನಿಯಮ 7 ಅಡಿಯಲ್ಲಿ ಬರುವುದಿಲ್ಲ. ಶಿಸ್ತು ಕ್ರಮ ಮತ್ತು ಮನವಿಯ ಅವಕಾಶ ವಿರುವ ನಿಯಮ 7 ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರದ ದೂರನ್ನು ವಜಾ ಮಾಡಿತ್ತು.

ಈ ಮೇಲಿನ ಆದೇಶಗಳಿಗೆ ವ್ಯತಿರಿಕ್ತವಾಗಿ ಗುಜರಾತ್‌ ಹೈಕೋರ್ಟ್‌ 2007 ರ ʼಪ್ರೇಮ್‌ಶಂಕರ್‌ ವಿ ಭಟ್‌ Vs ಗುಜರಾತ್‌ ರಾಜ್ಯʼ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮಾತ್ರ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಇದೆ. ರಾಜ್ಯ ಸರ್ಕಾರಗಳಿಗೆ IAS ಅಧಿಕಾರಿಗಳ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಆದೇಶ ನೀಡಿದೆ. ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ಕೇಂದ್ರ ಸರ್ಕಾರದಿಂದ ಉದ್ಯೋಗಕ್ಕೆ ಆಯ್ಕೆಯಾದವರಾಗಿದ್ದಾರೆ. ಅಧಿಕಾರಿಗಳ ನೇಮಕ, ಪ್ರೊಬೆಶನರಿ, ಭತ್ಯೆ, ವರ್ಗಾವಣೆ, ರಜೆ ಮತ್ತು ಇತರ ಸೌಲಭ್ಯ, ಸಂಬಳ, ನಿವೃತ್ತಿ, ಗೌಪ್ಯತೆ , ಸೇವಾವಧಿಯ ವಿಸ್ತರಣೆ, ಕೆಲಸದಿಂದ ವಜಾ ಎಲ್ಲವೂ ಕೂಡ ಕೇಂದ್ರ ಸರ್ಕಾರದ ಅಧೀನದಲ್ಲೆ ಬರುತ್ತವೆ ಎಂದು ಗುಜರಾತ್‌ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಬೇರೆ ಬೇರೆ ನ್ಯಾಯಾಲಯಗಳ ಬೇರೆ ಬೇರೆ ಆದೇಶಗಳ ನಡುವೆ ಹೆಚ್ಚಿನ ನ್ಯಾಯಶಾಸ್ತ್ರಜ್ಞರ ಮತ್ತು ನ್ಯಾಯಾಧೀಶರ ಅಭಿಪ್ರಾಯ ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯುಕ್ತಿಗೊಂಡ ಅಧಿಕಾರಿಗಳು ರಾಜ್ಯದ ಅಧೀನದಲ್ಲಿ ಬರುತ್ತಾರೆ ಎಂಬ ಕಡೆಯೇ ವಾಲುತ್ತದೆ.

IAS ಅಧಿಕಾರಿಯ ನಿವೃತ್ತಿಯ ನಂತರ ಕೇಂದ್ರ ಸರ್ಕಾರ ವಿಚಾರಣೆ ನಡೆಸಬಹುದೇ?

ಬಂದೋಪಾದ್ಯಾಯ್‌ ಅವರ ಪ್ರಕರಣವು ಅವರ ನಿವೃತ್ತಿಯಿಂದಾಗಿ ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಮೇ 31 ರಂದು ಬಂದೋಪಾದ್ಯಾಯ ತಮ್ಮ ಆಲ್‌ ಇಂಡಿಯಾ ಸರ್ವಿಸ್‌ ಅಡಿಯ ಉದ್ಯೋಗದಿಂದ ನಿವೃತ್ತರಾಗಿದ್ದಾರೆ. ಹಾಗಾದರೆ ನಿವೃತ್ತಿಯ ನಂತರ ಕೇಂದ್ರ ಸರ್ಕಾರವು ಬಂದೋಪಾದ್ಯಾಯ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಬಹುದೇ?

ಸುಪ್ರಿಂ ಕೋರ್ಟ್‌ 1971 ರಲ್ಲಿ IAS ಅಧಿಕಾರಿಗಳ ನಿವೃತ್ತಿಯ ನಂತರ ಅವರ ವಿರುದ್ಧ ವಿಚಾರಣೆಗಳನ್ನು ನಡೆಸುವ ಕುರಿತು ತನ್ನ ಆದೇಶದಲ್ಲಿ ಸ್ಪಷ್ಟತೆಯನ್ನು ನೀಡಿದೆ. 1971 ರಲ್ಲಿ ʼಪಿ.ಆರ್‌ ನಾಯಕ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಇಂಡಿಯನ್‌ ಸಿವಿಲ್‌ ಸರ್ವಿಸ್‌ ನ ಸದಸ್ಯರ ನಿವೃತ್ತಿಯ ನಂತರದಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಬೇರೆ ಉದ್ಯೋಗಿಗಳನ್ನು ನಿವೃತ್ತಿಯ ನಂತರವೂ ಇಲಾಖಾ ವಿಚಾರಣೆಗೆ ಒಳಪಡಿಸಬಹುದು ಎಂಬ ಸ್ಪಷ್ಟ ಆದೇಶವನ್ನು ನೀಡಿದೆ.
2014 ರಲ್ಲಿ ಸುಪ್ರೀಂ ಕೋರ್ಟ್‌ ದೇವ್‌ ಪ್ರಕಾಶ್‌ Vs ಉತ್ತರ ಪ್ರದೇಶ ಕೊ ಆಪರೇಟಿವ್‌ ಸಂಸ್ಥೆ ಪ್ರಕರಣದಲ್ಲಿ IAS ಅಧಿಕಾರಿಯ ನಿವೃತ್ತಿಯ ನಂತರ ಅವರ ವಿರುದ್ಧವಿರುವ ಇಲಾಖಾ ವಿಚಾರಣೆಯನ್ನು ಮುಂದುವರಿಸಬಾರದು. ನಿಯಮಗಳ ಪ್ರಕಾರ ವಿಚಾರಣೆಯನ್ನು ನಡೆಸಲು ಅವಕಾಶವಿಲ್ಲದಿದ್ದಾಗ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಯು ನಿವೃತ್ತಿಯ ನಂತರದಲ್ಲಿ ವಿಚಾರಣೆಯನ್ನು ಮುಂದುವರೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಹೇಳಿದೆ.

ಬಂದೋಪಾದ್ಯಾಯ್‌ ಅವರ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌ 1983 ರ ನಿಯಮಾವಳಿಗಳು IAS ಅಧಿಕಾರಿಯು ನಿವೃತ್ತನಾಗಿ ನಾಲ್ಕು ವರ್ಷಗಳ ಅವಧಿಯ ವರೆಗೆ ಇಲಾಖಾ ವಿಚಾರಣೆಗೆ ಅವಕಾಶವನ್ನು ಕಲ್ಪಿಸುತ್ತದೆ. ಆದರೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ IAS ಅಧಿಕಾರಿಯ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆಯೆಂದು ಈ ನಿಯಮಾವಳಿಗಳು ಎಲ್ಲೂ ಸ್ಪಷ್ಟವಾಗಿ ಹೇಳುವುದಿಲ್ಲ.

ಒಂದು ವೇಳೆ ಬಂದೋಪಾದ್ಯಾಯ್‌ ಅವರ ವಿರುದ್ಧ ಇಲಾಖಾ ತನಿಖೆಯನ್ನು ನಡೆಸುವುದೇ ಆದರೆ ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆ? ಕೇಂದ್ರ ಸರ್ಕಾರಕ್ಕೋ ? ಅಥವಾ ರಾಜ್ಯ ಸರ್ಕಾರಕ್ಕೋ?

ದೇಶದಲ್ಲಿ ಇದುವರೆಗೆ ಈ ಸಮಸ್ಯೆ ಉದ್ಭವವಾಗಿಲ್ಲ. ಈ ಹೊಸ ಸಮಸ್ಯೆಗೆ ಹೈ ಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ ಗಳು ಮಾತ್ರ ಸಮರ್ಪಕ ಉತ್ತರವನ್ನು ನೀಡಲು ಸಾಧ್ಯ.


ಇದನ್ನೂ ಓದಿ: ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....