Homeಮುಖಪುಟಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

- Advertisement -
- Advertisement -

ಅಲಪಾನ್‌ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿರುವ ಕೇಂದ್ರ ಸರ್ಕಾರದ ಆಶ್ಚರ್ಯಕರ ನಡೆ ಹಲವು ಚರ್ಚೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಪಶ್ಚಿಮ ಬಂಗಾಳ ರಾಜ್ಯಸರ್ಕಾರದ ಕರ್ತವ್ಯದಲ್ಲಿ ನಿಯೋಜಿತರಾಗಿರುವ 1987 ಬ್ಯಾಚ್‌ ನ IAS ಅಧಿಕಾರಿಯನ್ನು ಕೇಂದ್ರ ಏಕಾಏಕಿ ದೆಹಲಿಯ ಸಿಬ್ಬಂದಿ ಮತ್ತು ಸಾವರ್ಜನಿಕ ಕುಂದು ಕೊರತೆ ಇಲಾಖೆಗೆ ವರ್ಗಾವಣೆ ಮಾಡಿತ್ತು. ತಮ್ಮ ವರ್ಗಾವಣೆ ಆದೇಶಕ್ಕೆ ಮನ್ನಣೆ ಕೊಡದೇ ನಿವೃತ್ತಿ ತೆಗೆದುಕೊಂಡ ಅಲಪಾನ್‌ ಬಂದೋಪಾದ್ಯಾಯ್‌ ಅವರ ಮೇಲೆ ಕೇಂದ್ರ ಕ್ರಮ ಕೈಗೊಂಡಿದ್ದು ಅದರ ಭಾಗವಾಗಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಕಾರ್ಯುದರ್ಶಿ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಹಾಗಾದರೆ ಬಂದೋಪಾದ್ಯಾಯ್‌ ಅವರಿಗೆ ಕೇಂದ್ರಕ್ಕೆ ಶೋಕಾಸ್‌ ನೀಡುವ ಅಧಿಕಾರವಿದೆಯೇ? ಕಾನೂನು ಈ ವಿಷಯದಲ್ಲಿ ಏನು ಹೇಳುತ್ತದೆ ಎಂಬುದನ್ನು ನಾವಿಲ್ಲಿ ವಿವರವಾಗಿ ಚರ್ಚಿಸಿದ್ದೇವೆ.

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

ರೂಲ್‌ 7 IAS ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ವಿಚಾರಣೆ ನಡೆಸುವ ಅಧಿಕಾರ ಯಾರಿಗೆ ಇದೆ ಎಂದು ಹೇಳುತ್ತದೆ. ಐಎಎಸ್‌ ಅಧಿಕಾರಿಯು ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಆ ಅಧಿಕಾರಿಯ ಮೇಲೆ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ ಎಂದು ಆಲ್‌ ಇಂಡಿಯಾ ಸರ್ವಿಸಸ್‌ ರೂಲ್ಸ್‌, 1969 ರ 7 ನೇ ನಿಯಮವು ಸ್ಪಷ್ಟವಾಗಿ ಹೇಳುತ್ತದೆ. ಜೊತೆಗೆ ರಾಜ್ಯ ಸರ್ಕಾರದ ನಿಯೋಜನೆಯಲ್ಲಿರುವ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಥವಾ ದಂಡ ವಿಧಿಸುವಾಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಒಪ್ಪಿಗೆ ಸೂಚಿಸಬೇಕು. ರಾಜ್ಯ ಸರ್ಕಾರದ ಸಮ್ಮತಿಯ ಆಧಾರದ ಮೇಲೆ ಕೇಂದ್ರ ಐಎಎಸ್‌ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬಹುದು ಎಂದು ಈ ನಿಯಮಾವಳಿಯು ಹೇಳುತ್ತದೆ.

ಈ ಹಿಂದಿನ ಪ್ರಕರಣಗಳಲ್ಲಿ ನ್ಯಾಯಾಯಗಳು ಏನು ಹೇಳಿವೆ?

ಇತಿಹಾಸದಲ್ಲಿ ಹಿಂದೆ ನಡೆದಿರುವ ಘಟನೆಗಳಲ್ಲಿ ಬಹುತೇಕ ನ್ಯಾಯಾಲಯಗಳು ರಾಜ್ಯ ಸರ್ಕಾರಕ್ಕೆ ತನ್ನ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ಪ್ರಕರಣಗಳಲ್ಲಿ ನ್ಯಾಯಧೀಶರಲ್ಲೇ ಈ ಕುರಿತು ಭಿನ್ನಾಭಿಪ್ರಾಯಗಳಿವೆ. ಕೆಲವು ನ್ಯಾಯಾಧೀಶರು ಕೇಂದ್ರಕ್ಕೆ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆಯೆಂದು ಹೇಳಿದರೆ ಕೆಲವು ನ್ಯಾಯಾಲಯಗಳು ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಕ್ರಮ ಕೈಗೊಳ್ಳಲು ಅಧಿಕಾರವಿದೆಯೆಂದು ಹೇಳಿದ್ದಾರೆ.

ಮದ್ರಾಸ್‌ ಹೈಕೋರ್ಟ್‌ 2013 ರಲ್ಲಿ ʼಪ್ರಮೋದ್‌ ಕುಮಾರ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮಾತ್ರ ಇದೆ ಎಂದು ಹೇಳಿದೆ. ನ್ಯಾಯಾಲಯವು ಮುಂದುವರೆದು ರಾಜ್ಯ ಸರ್ಕಾರದ ಕರ್ತವ್ಯದಲ್ಲಿರುವ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳ ಮೇಲೆ ಕೇಂದ್ರವು ಸ್ವಯಂ ಪ್ರೇರಿತಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ.

ಮದ್ರಾಸ್‌ ಉಚ್ಛನ್ಯಾಯಾಲಯವು ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ , 1969 ನಿಯಮ ಏಳರ ಅರ್ಥಾನ್ವಯವನ್ನು ಮಾಡಿದ್ದು ಇಲ್ಲಿರುವ ಅಕ್ಷರಗಳನ್ನು ವಿಶಾಲವಾದ ದೃಷ್ಟಿಕೋನದಲ್ಲಿ ಅನ್ವಯಿಸಬೇಕೆಂದು ಹೇಳಿದೆ. ಜೊತೆಗೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ವಿಶೇಷವಾದ ಸೌಲಭ್ಯಗಳನ್ನು ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದ ಅಧೀನ ಇಲಾಖೆಯಲ್ಲಿ ಕೆಲಸ ಮಾಡುವಾಗ ಕೇಂದ್ರದ ಉದ್ಯೋಗಿಗಳಾಗಿರುತ್ತಾರೆ. ರಾಜ್ಯ ಸರ್ಕಾರದ ಕರ್ತವ್ಯದಲ್ಲಿ ಇರುವಾಗ ರಾಜ್ಯ ಸರ್ಕಾರದ ಉದ್ಯೋಗಿಗಳಾಗಿರುತ್ತಾರೆ ಎಂದು ಮದ್ರಾಸ್‌ ಹೈಕೋರ್ಟ್‌ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

ಇದೇ ಭಾವನೆಯು ಗುವಾಹಟಿ ಮತ್ತು ಹೈದರಾಬಾದ್‌ ಸೆಂಟ್ರಲ್‌ ಅಡ್ಮಿನಿಸ್ಟರೇಟಿವ್‌ ಟ್ರಿಬ್ಯುನಲ್‌ ಗಳು ವ್ಯಕ್ತಪಡಿಸಿವೆ. ಒಮ್ಮೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯು ರಾಜ್ಯಗಳ ಸೇವೆಗೆ ನೇಮಕಗೊಂಡ ಮೇಲೆ ಅವರು ರಾಜ್ಯ ಸರ್ಕಾರದ ಉದ್ಯೋಗಿಗಳಾಗುತ್ತಾರೆ, ಅವರು ಆಲ್ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ನಿಯಮ 7 ಅಡಿಯಲ್ಲಿ ಬರುವುದಿಲ್ಲ. ಶಿಸ್ತು ಕ್ರಮ ಮತ್ತು ಮನವಿಯ ಅವಕಾಶ ವಿರುವ ನಿಯಮ 7 ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರದ ದೂರನ್ನು ವಜಾ ಮಾಡಿತ್ತು.

ಈ ಮೇಲಿನ ಆದೇಶಗಳಿಗೆ ವ್ಯತಿರಿಕ್ತವಾಗಿ ಗುಜರಾತ್‌ ಹೈಕೋರ್ಟ್‌ 2007 ರ ʼಪ್ರೇಮ್‌ಶಂಕರ್‌ ವಿ ಭಟ್‌ Vs ಗುಜರಾತ್‌ ರಾಜ್ಯʼ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮಾತ್ರ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಇದೆ. ರಾಜ್ಯ ಸರ್ಕಾರಗಳಿಗೆ IAS ಅಧಿಕಾರಿಗಳ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಆದೇಶ ನೀಡಿದೆ. ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ಕೇಂದ್ರ ಸರ್ಕಾರದಿಂದ ಉದ್ಯೋಗಕ್ಕೆ ಆಯ್ಕೆಯಾದವರಾಗಿದ್ದಾರೆ. ಅಧಿಕಾರಿಗಳ ನೇಮಕ, ಪ್ರೊಬೆಶನರಿ, ಭತ್ಯೆ, ವರ್ಗಾವಣೆ, ರಜೆ ಮತ್ತು ಇತರ ಸೌಲಭ್ಯ, ಸಂಬಳ, ನಿವೃತ್ತಿ, ಗೌಪ್ಯತೆ , ಸೇವಾವಧಿಯ ವಿಸ್ತರಣೆ, ಕೆಲಸದಿಂದ ವಜಾ ಎಲ್ಲವೂ ಕೂಡ ಕೇಂದ್ರ ಸರ್ಕಾರದ ಅಧೀನದಲ್ಲೆ ಬರುತ್ತವೆ ಎಂದು ಗುಜರಾತ್‌ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಬೇರೆ ಬೇರೆ ನ್ಯಾಯಾಲಯಗಳ ಬೇರೆ ಬೇರೆ ಆದೇಶಗಳ ನಡುವೆ ಹೆಚ್ಚಿನ ನ್ಯಾಯಶಾಸ್ತ್ರಜ್ಞರ ಮತ್ತು ನ್ಯಾಯಾಧೀಶರ ಅಭಿಪ್ರಾಯ ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯುಕ್ತಿಗೊಂಡ ಅಧಿಕಾರಿಗಳು ರಾಜ್ಯದ ಅಧೀನದಲ್ಲಿ ಬರುತ್ತಾರೆ ಎಂಬ ಕಡೆಯೇ ವಾಲುತ್ತದೆ.

IAS ಅಧಿಕಾರಿಯ ನಿವೃತ್ತಿಯ ನಂತರ ಕೇಂದ್ರ ಸರ್ಕಾರ ವಿಚಾರಣೆ ನಡೆಸಬಹುದೇ?

ಬಂದೋಪಾದ್ಯಾಯ್‌ ಅವರ ಪ್ರಕರಣವು ಅವರ ನಿವೃತ್ತಿಯಿಂದಾಗಿ ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಮೇ 31 ರಂದು ಬಂದೋಪಾದ್ಯಾಯ ತಮ್ಮ ಆಲ್‌ ಇಂಡಿಯಾ ಸರ್ವಿಸ್‌ ಅಡಿಯ ಉದ್ಯೋಗದಿಂದ ನಿವೃತ್ತರಾಗಿದ್ದಾರೆ. ಹಾಗಾದರೆ ನಿವೃತ್ತಿಯ ನಂತರ ಕೇಂದ್ರ ಸರ್ಕಾರವು ಬಂದೋಪಾದ್ಯಾಯ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಬಹುದೇ?

ಸುಪ್ರಿಂ ಕೋರ್ಟ್‌ 1971 ರಲ್ಲಿ IAS ಅಧಿಕಾರಿಗಳ ನಿವೃತ್ತಿಯ ನಂತರ ಅವರ ವಿರುದ್ಧ ವಿಚಾರಣೆಗಳನ್ನು ನಡೆಸುವ ಕುರಿತು ತನ್ನ ಆದೇಶದಲ್ಲಿ ಸ್ಪಷ್ಟತೆಯನ್ನು ನೀಡಿದೆ. 1971 ರಲ್ಲಿ ʼಪಿ.ಆರ್‌ ನಾಯಕ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಇಂಡಿಯನ್‌ ಸಿವಿಲ್‌ ಸರ್ವಿಸ್‌ ನ ಸದಸ್ಯರ ನಿವೃತ್ತಿಯ ನಂತರದಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಬೇರೆ ಉದ್ಯೋಗಿಗಳನ್ನು ನಿವೃತ್ತಿಯ ನಂತರವೂ ಇಲಾಖಾ ವಿಚಾರಣೆಗೆ ಒಳಪಡಿಸಬಹುದು ಎಂಬ ಸ್ಪಷ್ಟ ಆದೇಶವನ್ನು ನೀಡಿದೆ.
2014 ರಲ್ಲಿ ಸುಪ್ರೀಂ ಕೋರ್ಟ್‌ ದೇವ್‌ ಪ್ರಕಾಶ್‌ Vs ಉತ್ತರ ಪ್ರದೇಶ ಕೊ ಆಪರೇಟಿವ್‌ ಸಂಸ್ಥೆ ಪ್ರಕರಣದಲ್ಲಿ IAS ಅಧಿಕಾರಿಯ ನಿವೃತ್ತಿಯ ನಂತರ ಅವರ ವಿರುದ್ಧವಿರುವ ಇಲಾಖಾ ವಿಚಾರಣೆಯನ್ನು ಮುಂದುವರಿಸಬಾರದು. ನಿಯಮಗಳ ಪ್ರಕಾರ ವಿಚಾರಣೆಯನ್ನು ನಡೆಸಲು ಅವಕಾಶವಿಲ್ಲದಿದ್ದಾಗ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಯು ನಿವೃತ್ತಿಯ ನಂತರದಲ್ಲಿ ವಿಚಾರಣೆಯನ್ನು ಮುಂದುವರೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಹೇಳಿದೆ.

ಬಂದೋಪಾದ್ಯಾಯ್‌ ಅವರ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌ 1983 ರ ನಿಯಮಾವಳಿಗಳು IAS ಅಧಿಕಾರಿಯು ನಿವೃತ್ತನಾಗಿ ನಾಲ್ಕು ವರ್ಷಗಳ ಅವಧಿಯ ವರೆಗೆ ಇಲಾಖಾ ವಿಚಾರಣೆಗೆ ಅವಕಾಶವನ್ನು ಕಲ್ಪಿಸುತ್ತದೆ. ಆದರೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ IAS ಅಧಿಕಾರಿಯ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆಯೆಂದು ಈ ನಿಯಮಾವಳಿಗಳು ಎಲ್ಲೂ ಸ್ಪಷ್ಟವಾಗಿ ಹೇಳುವುದಿಲ್ಲ.

ಒಂದು ವೇಳೆ ಬಂದೋಪಾದ್ಯಾಯ್‌ ಅವರ ವಿರುದ್ಧ ಇಲಾಖಾ ತನಿಖೆಯನ್ನು ನಡೆಸುವುದೇ ಆದರೆ ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆ? ಕೇಂದ್ರ ಸರ್ಕಾರಕ್ಕೋ ? ಅಥವಾ ರಾಜ್ಯ ಸರ್ಕಾರಕ್ಕೋ?

ದೇಶದಲ್ಲಿ ಇದುವರೆಗೆ ಈ ಸಮಸ್ಯೆ ಉದ್ಭವವಾಗಿಲ್ಲ. ಈ ಹೊಸ ಸಮಸ್ಯೆಗೆ ಹೈ ಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ ಗಳು ಮಾತ್ರ ಸಮರ್ಪಕ ಉತ್ತರವನ್ನು ನೀಡಲು ಸಾಧ್ಯ.


ಇದನ್ನೂ ಓದಿ: ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...