Homeಮುಖಪುಟಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

- Advertisement -
- Advertisement -

ಅಲಪಾನ್‌ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿರುವ ಕೇಂದ್ರ ಸರ್ಕಾರದ ಆಶ್ಚರ್ಯಕರ ನಡೆ ಹಲವು ಚರ್ಚೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಪಶ್ಚಿಮ ಬಂಗಾಳ ರಾಜ್ಯಸರ್ಕಾರದ ಕರ್ತವ್ಯದಲ್ಲಿ ನಿಯೋಜಿತರಾಗಿರುವ 1987 ಬ್ಯಾಚ್‌ ನ IAS ಅಧಿಕಾರಿಯನ್ನು ಕೇಂದ್ರ ಏಕಾಏಕಿ ದೆಹಲಿಯ ಸಿಬ್ಬಂದಿ ಮತ್ತು ಸಾವರ್ಜನಿಕ ಕುಂದು ಕೊರತೆ ಇಲಾಖೆಗೆ ವರ್ಗಾವಣೆ ಮಾಡಿತ್ತು. ತಮ್ಮ ವರ್ಗಾವಣೆ ಆದೇಶಕ್ಕೆ ಮನ್ನಣೆ ಕೊಡದೇ ನಿವೃತ್ತಿ ತೆಗೆದುಕೊಂಡ ಅಲಪಾನ್‌ ಬಂದೋಪಾದ್ಯಾಯ್‌ ಅವರ ಮೇಲೆ ಕೇಂದ್ರ ಕ್ರಮ ಕೈಗೊಂಡಿದ್ದು ಅದರ ಭಾಗವಾಗಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಕಾರ್ಯುದರ್ಶಿ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಹಾಗಾದರೆ ಬಂದೋಪಾದ್ಯಾಯ್‌ ಅವರಿಗೆ ಕೇಂದ್ರಕ್ಕೆ ಶೋಕಾಸ್‌ ನೀಡುವ ಅಧಿಕಾರವಿದೆಯೇ? ಕಾನೂನು ಈ ವಿಷಯದಲ್ಲಿ ಏನು ಹೇಳುತ್ತದೆ ಎಂಬುದನ್ನು ನಾವಿಲ್ಲಿ ವಿವರವಾಗಿ ಚರ್ಚಿಸಿದ್ದೇವೆ.

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

ರೂಲ್‌ 7 IAS ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ವಿಚಾರಣೆ ನಡೆಸುವ ಅಧಿಕಾರ ಯಾರಿಗೆ ಇದೆ ಎಂದು ಹೇಳುತ್ತದೆ. ಐಎಎಸ್‌ ಅಧಿಕಾರಿಯು ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಆ ಅಧಿಕಾರಿಯ ಮೇಲೆ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ ಎಂದು ಆಲ್‌ ಇಂಡಿಯಾ ಸರ್ವಿಸಸ್‌ ರೂಲ್ಸ್‌, 1969 ರ 7 ನೇ ನಿಯಮವು ಸ್ಪಷ್ಟವಾಗಿ ಹೇಳುತ್ತದೆ. ಜೊತೆಗೆ ರಾಜ್ಯ ಸರ್ಕಾರದ ನಿಯೋಜನೆಯಲ್ಲಿರುವ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಥವಾ ದಂಡ ವಿಧಿಸುವಾಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಒಪ್ಪಿಗೆ ಸೂಚಿಸಬೇಕು. ರಾಜ್ಯ ಸರ್ಕಾರದ ಸಮ್ಮತಿಯ ಆಧಾರದ ಮೇಲೆ ಕೇಂದ್ರ ಐಎಎಸ್‌ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬಹುದು ಎಂದು ಈ ನಿಯಮಾವಳಿಯು ಹೇಳುತ್ತದೆ.

ಈ ಹಿಂದಿನ ಪ್ರಕರಣಗಳಲ್ಲಿ ನ್ಯಾಯಾಯಗಳು ಏನು ಹೇಳಿವೆ?

ಇತಿಹಾಸದಲ್ಲಿ ಹಿಂದೆ ನಡೆದಿರುವ ಘಟನೆಗಳಲ್ಲಿ ಬಹುತೇಕ ನ್ಯಾಯಾಲಯಗಳು ರಾಜ್ಯ ಸರ್ಕಾರಕ್ಕೆ ತನ್ನ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ಪ್ರಕರಣಗಳಲ್ಲಿ ನ್ಯಾಯಧೀಶರಲ್ಲೇ ಈ ಕುರಿತು ಭಿನ್ನಾಭಿಪ್ರಾಯಗಳಿವೆ. ಕೆಲವು ನ್ಯಾಯಾಧೀಶರು ಕೇಂದ್ರಕ್ಕೆ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆಯೆಂದು ಹೇಳಿದರೆ ಕೆಲವು ನ್ಯಾಯಾಲಯಗಳು ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಕ್ರಮ ಕೈಗೊಳ್ಳಲು ಅಧಿಕಾರವಿದೆಯೆಂದು ಹೇಳಿದ್ದಾರೆ.

ಮದ್ರಾಸ್‌ ಹೈಕೋರ್ಟ್‌ 2013 ರಲ್ಲಿ ʼಪ್ರಮೋದ್‌ ಕುಮಾರ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮಾತ್ರ ಇದೆ ಎಂದು ಹೇಳಿದೆ. ನ್ಯಾಯಾಲಯವು ಮುಂದುವರೆದು ರಾಜ್ಯ ಸರ್ಕಾರದ ಕರ್ತವ್ಯದಲ್ಲಿರುವ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳ ಮೇಲೆ ಕೇಂದ್ರವು ಸ್ವಯಂ ಪ್ರೇರಿತಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ.

ಮದ್ರಾಸ್‌ ಉಚ್ಛನ್ಯಾಯಾಲಯವು ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ , 1969 ನಿಯಮ ಏಳರ ಅರ್ಥಾನ್ವಯವನ್ನು ಮಾಡಿದ್ದು ಇಲ್ಲಿರುವ ಅಕ್ಷರಗಳನ್ನು ವಿಶಾಲವಾದ ದೃಷ್ಟಿಕೋನದಲ್ಲಿ ಅನ್ವಯಿಸಬೇಕೆಂದು ಹೇಳಿದೆ. ಜೊತೆಗೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ವಿಶೇಷವಾದ ಸೌಲಭ್ಯಗಳನ್ನು ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದ ಅಧೀನ ಇಲಾಖೆಯಲ್ಲಿ ಕೆಲಸ ಮಾಡುವಾಗ ಕೇಂದ್ರದ ಉದ್ಯೋಗಿಗಳಾಗಿರುತ್ತಾರೆ. ರಾಜ್ಯ ಸರ್ಕಾರದ ಕರ್ತವ್ಯದಲ್ಲಿ ಇರುವಾಗ ರಾಜ್ಯ ಸರ್ಕಾರದ ಉದ್ಯೋಗಿಗಳಾಗಿರುತ್ತಾರೆ ಎಂದು ಮದ್ರಾಸ್‌ ಹೈಕೋರ್ಟ್‌ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

ಇದೇ ಭಾವನೆಯು ಗುವಾಹಟಿ ಮತ್ತು ಹೈದರಾಬಾದ್‌ ಸೆಂಟ್ರಲ್‌ ಅಡ್ಮಿನಿಸ್ಟರೇಟಿವ್‌ ಟ್ರಿಬ್ಯುನಲ್‌ ಗಳು ವ್ಯಕ್ತಪಡಿಸಿವೆ. ಒಮ್ಮೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯು ರಾಜ್ಯಗಳ ಸೇವೆಗೆ ನೇಮಕಗೊಂಡ ಮೇಲೆ ಅವರು ರಾಜ್ಯ ಸರ್ಕಾರದ ಉದ್ಯೋಗಿಗಳಾಗುತ್ತಾರೆ, ಅವರು ಆಲ್ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ನಿಯಮ 7 ಅಡಿಯಲ್ಲಿ ಬರುವುದಿಲ್ಲ. ಶಿಸ್ತು ಕ್ರಮ ಮತ್ತು ಮನವಿಯ ಅವಕಾಶ ವಿರುವ ನಿಯಮ 7 ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರದ ದೂರನ್ನು ವಜಾ ಮಾಡಿತ್ತು.

ಈ ಮೇಲಿನ ಆದೇಶಗಳಿಗೆ ವ್ಯತಿರಿಕ್ತವಾಗಿ ಗುಜರಾತ್‌ ಹೈಕೋರ್ಟ್‌ 2007 ರ ʼಪ್ರೇಮ್‌ಶಂಕರ್‌ ವಿ ಭಟ್‌ Vs ಗುಜರಾತ್‌ ರಾಜ್ಯʼ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮಾತ್ರ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಇದೆ. ರಾಜ್ಯ ಸರ್ಕಾರಗಳಿಗೆ IAS ಅಧಿಕಾರಿಗಳ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಆದೇಶ ನೀಡಿದೆ. ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ಕೇಂದ್ರ ಸರ್ಕಾರದಿಂದ ಉದ್ಯೋಗಕ್ಕೆ ಆಯ್ಕೆಯಾದವರಾಗಿದ್ದಾರೆ. ಅಧಿಕಾರಿಗಳ ನೇಮಕ, ಪ್ರೊಬೆಶನರಿ, ಭತ್ಯೆ, ವರ್ಗಾವಣೆ, ರಜೆ ಮತ್ತು ಇತರ ಸೌಲಭ್ಯ, ಸಂಬಳ, ನಿವೃತ್ತಿ, ಗೌಪ್ಯತೆ , ಸೇವಾವಧಿಯ ವಿಸ್ತರಣೆ, ಕೆಲಸದಿಂದ ವಜಾ ಎಲ್ಲವೂ ಕೂಡ ಕೇಂದ್ರ ಸರ್ಕಾರದ ಅಧೀನದಲ್ಲೆ ಬರುತ್ತವೆ ಎಂದು ಗುಜರಾತ್‌ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಬೇರೆ ಬೇರೆ ನ್ಯಾಯಾಲಯಗಳ ಬೇರೆ ಬೇರೆ ಆದೇಶಗಳ ನಡುವೆ ಹೆಚ್ಚಿನ ನ್ಯಾಯಶಾಸ್ತ್ರಜ್ಞರ ಮತ್ತು ನ್ಯಾಯಾಧೀಶರ ಅಭಿಪ್ರಾಯ ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯುಕ್ತಿಗೊಂಡ ಅಧಿಕಾರಿಗಳು ರಾಜ್ಯದ ಅಧೀನದಲ್ಲಿ ಬರುತ್ತಾರೆ ಎಂಬ ಕಡೆಯೇ ವಾಲುತ್ತದೆ.

IAS ಅಧಿಕಾರಿಯ ನಿವೃತ್ತಿಯ ನಂತರ ಕೇಂದ್ರ ಸರ್ಕಾರ ವಿಚಾರಣೆ ನಡೆಸಬಹುದೇ?

ಬಂದೋಪಾದ್ಯಾಯ್‌ ಅವರ ಪ್ರಕರಣವು ಅವರ ನಿವೃತ್ತಿಯಿಂದಾಗಿ ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಮೇ 31 ರಂದು ಬಂದೋಪಾದ್ಯಾಯ ತಮ್ಮ ಆಲ್‌ ಇಂಡಿಯಾ ಸರ್ವಿಸ್‌ ಅಡಿಯ ಉದ್ಯೋಗದಿಂದ ನಿವೃತ್ತರಾಗಿದ್ದಾರೆ. ಹಾಗಾದರೆ ನಿವೃತ್ತಿಯ ನಂತರ ಕೇಂದ್ರ ಸರ್ಕಾರವು ಬಂದೋಪಾದ್ಯಾಯ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಬಹುದೇ?

ಸುಪ್ರಿಂ ಕೋರ್ಟ್‌ 1971 ರಲ್ಲಿ IAS ಅಧಿಕಾರಿಗಳ ನಿವೃತ್ತಿಯ ನಂತರ ಅವರ ವಿರುದ್ಧ ವಿಚಾರಣೆಗಳನ್ನು ನಡೆಸುವ ಕುರಿತು ತನ್ನ ಆದೇಶದಲ್ಲಿ ಸ್ಪಷ್ಟತೆಯನ್ನು ನೀಡಿದೆ. 1971 ರಲ್ಲಿ ʼಪಿ.ಆರ್‌ ನಾಯಕ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಇಂಡಿಯನ್‌ ಸಿವಿಲ್‌ ಸರ್ವಿಸ್‌ ನ ಸದಸ್ಯರ ನಿವೃತ್ತಿಯ ನಂತರದಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಬೇರೆ ಉದ್ಯೋಗಿಗಳನ್ನು ನಿವೃತ್ತಿಯ ನಂತರವೂ ಇಲಾಖಾ ವಿಚಾರಣೆಗೆ ಒಳಪಡಿಸಬಹುದು ಎಂಬ ಸ್ಪಷ್ಟ ಆದೇಶವನ್ನು ನೀಡಿದೆ.
2014 ರಲ್ಲಿ ಸುಪ್ರೀಂ ಕೋರ್ಟ್‌ ದೇವ್‌ ಪ್ರಕಾಶ್‌ Vs ಉತ್ತರ ಪ್ರದೇಶ ಕೊ ಆಪರೇಟಿವ್‌ ಸಂಸ್ಥೆ ಪ್ರಕರಣದಲ್ಲಿ IAS ಅಧಿಕಾರಿಯ ನಿವೃತ್ತಿಯ ನಂತರ ಅವರ ವಿರುದ್ಧವಿರುವ ಇಲಾಖಾ ವಿಚಾರಣೆಯನ್ನು ಮುಂದುವರಿಸಬಾರದು. ನಿಯಮಗಳ ಪ್ರಕಾರ ವಿಚಾರಣೆಯನ್ನು ನಡೆಸಲು ಅವಕಾಶವಿಲ್ಲದಿದ್ದಾಗ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಯು ನಿವೃತ್ತಿಯ ನಂತರದಲ್ಲಿ ವಿಚಾರಣೆಯನ್ನು ಮುಂದುವರೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಹೇಳಿದೆ.

ಬಂದೋಪಾದ್ಯಾಯ್‌ ಅವರ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌ 1983 ರ ನಿಯಮಾವಳಿಗಳು IAS ಅಧಿಕಾರಿಯು ನಿವೃತ್ತನಾಗಿ ನಾಲ್ಕು ವರ್ಷಗಳ ಅವಧಿಯ ವರೆಗೆ ಇಲಾಖಾ ವಿಚಾರಣೆಗೆ ಅವಕಾಶವನ್ನು ಕಲ್ಪಿಸುತ್ತದೆ. ಆದರೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ IAS ಅಧಿಕಾರಿಯ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆಯೆಂದು ಈ ನಿಯಮಾವಳಿಗಳು ಎಲ್ಲೂ ಸ್ಪಷ್ಟವಾಗಿ ಹೇಳುವುದಿಲ್ಲ.

ಒಂದು ವೇಳೆ ಬಂದೋಪಾದ್ಯಾಯ್‌ ಅವರ ವಿರುದ್ಧ ಇಲಾಖಾ ತನಿಖೆಯನ್ನು ನಡೆಸುವುದೇ ಆದರೆ ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆ? ಕೇಂದ್ರ ಸರ್ಕಾರಕ್ಕೋ ? ಅಥವಾ ರಾಜ್ಯ ಸರ್ಕಾರಕ್ಕೋ?

ದೇಶದಲ್ಲಿ ಇದುವರೆಗೆ ಈ ಸಮಸ್ಯೆ ಉದ್ಭವವಾಗಿಲ್ಲ. ಈ ಹೊಸ ಸಮಸ್ಯೆಗೆ ಹೈ ಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ ಗಳು ಮಾತ್ರ ಸಮರ್ಪಕ ಉತ್ತರವನ್ನು ನೀಡಲು ಸಾಧ್ಯ.


ಇದನ್ನೂ ಓದಿ: ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...