Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...