Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...