Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...