Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...