Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...