Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...