Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...