Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...