Homeಮುಖಪುಟಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

ಸುಪ್ರೀಂಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ? ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳುಗಳ ಕಾಲ ತಡೆಹಿಡಿಯುವ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸುತ್ತಿರುವುದರಿಂದ, ಸರ್ಕಾರದ ಮುಂದಿರುವ ಶಾಸನಬದ್ಧ ಆಯ್ಕೆಗಳ ಬಗ್ಗೆ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ರವರು ಒಪ್ಪಿಗೆ ನೀಡಿದ ನಂತರ ಸೆಪ್ಟೆಂಬರ್ 27 ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಸಂಸತ್ತು ಕಾನೂನನ್ನು ರದ್ದುಗೊಳಿಸಬಹುದಾದರೂ, ಸಂವಿಧಾನದಲ್ಲಿ ಮತ್ತು ಸಂಸದೀಯ ಪ್ರಕ್ರಿಯೆಗಳಲ್ಲಿ ಯಾವುದೇ ಕಾನೂನನ್ನು ತಡೆ ಹಿಡಿಯುವ ಕಾರ್ಯವಿಧಾನಗಳಿಲ್ಲ ಎನ್ನಲಾಗುತ್ತಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌‌ನೊಂದಿಗೆ ಮಾತನಾಡಿದ ಕೇಂದ್ರ ಸಚಿವರೊಬ್ಬರು, ಹಿಂದಿನ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವ ಹೊಸ ಅಧಿಸೂಚನೆಯನ್ನು ಹೊರಡಿಸುವುದು ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ. “ನಮ್ಮ ಮುಂದಿನ ಹೆಜ್ಜೆಯನ್ನು ನಿರ್ಧರಿಸಲು ಕೃಷಿ ಸಂಘಟನೆಗಳ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. “ಒಂದು ಕಾನೂನಿನ ಅಧಿಸೂಚನೆಯನ್ನು ಈಗಾಗಲೇ ಮಾಡಿದ ನಂತರ, ಮತ್ತೊಂದು ಅಧಿಸೂಚನೆಯ ಮೂಲಕ ಅದನ್ನು ರದ್ದುಪಡಿಸಬಹುದು. ಇದಕ್ಕೆ ಕೇವಲ ಕಾರ್ಯಕಾರಿ ಆದೇಶ ಬೇಕು, ಅದು ಸಂಸತ್ತಿಗೆ ಹೋಗಬೇಕಾಗಿಲ್ಲ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ, “ನನ್ನ ದೃಷ್ಟಿಯಲ್ಲಿ, ಕಾನೂನನ್ನು ಸರ್ಕಾರವು ತಡೆ ಹಿಡಿಯಲು ಆಗದು. ಸಂಸತ್ತು ಒಂದು ಕಾನೂನನ್ನು ಅಂಗೀಕರಿಸಿದ ನಂತರ, ಸರ್ಕಾರಕ್ಕೆ ಅನುಷ್ಠಾನಗೊಳಿಸುವ ಅಧಿಕಾರ ಮಾತ್ರವಿದೆ ಮತ್ತು ಅದು ಕಾನೂನನ್ನು ನಿಗ್ರಹಿಸಲು/ ತಡೆಹಿಡಿಯಲು ಸಾಧ್ಯವಿಲ್ಲ”ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನು ಲೋಕಸಭೆಯ ಮತ್ತೊಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಪ್ರತಿಧ್ವನಿಸಿದ್ದಾರೆ.
“ಕಾನೂನನ್ನು ಜಾರಿಗೆ ತಂದ ನಂತರ ಅದನ್ನು ತಡೆ ಹಿಡಿಯಲು ಸರ್ಕಾರವೇ ಬಯಸುತ್ತಿರುವ ಇಂತಹ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದು ಕಶ್ಯಪ್ ಹೇಳಿದರು. “ಹಿಂದೆ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಗಿದೆ, ನೋಟಿಫೈ ಮಾಡದೇ ಇರುವ ಮೂಲಕ ಕಾನೂನು ಜಾರಿಗೊಳಿಸುವುದನ್ನು ವಿಳಂಬ ಮಾಡಲಾಗಿದೆ ಮತ್ತು ಕೆಲವೊಮ್ಮೆ ಕಾನೂನುಗಳನ್ನು ರದ್ದುಪಡಿಸಲಾಗಿದೆ. ಆದರೆ ಶಾಸಕಾಂಗ ಪ್ರಕ್ರಿಯೆ ಮುಗಿದ ನಂತರ ಅದನ್ನು ತಡೆ ಹಿಡಿಯುವ ಇಂತಹ ಪ್ರಕ್ರಿಯೆ ಹಿಂದೆಂದೂ ಸಂಭವಿಸಿಲ್ಲ’ ಎಂದು ಕಶ್ಯಪ್ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾಪ ಮತ್ತು ಜನವರಿ 12 ರಂದು ಸುಪ್ರೀಂಕೋರ್ಟ್ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಿರುವುದು- ಎರಡೂ ಭಿನ್ನವಾಗಿವೆ. ಎಂಟು ವಾರಗಳಲ್ಲಿ ತಾನು ನೇಮಿಸಿದ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದ ನಂತರ ಆ ತಡೆಯಾಜ್ಞೆ ಆದೇಶವನ್ನು ನ್ಯಾಯಾಲಯವು ವಜಾ ಮಾಡಬಹುದು.
“ಸುಪ್ರೀಂ ಕೋರ್ಟ್‌ಗೆ ಮಾತ್ರ ಕಾನೂನನ್ನು ತಡೆ ಹಿಡಿಯುವ ಅಧಿಕಾರವಿದೆ, ಸರ್ಕಾರಕ್ಕಲ್ಲ. ಸರ್ಕಾರವು ಸಂಸತ್ತಿನ ಕಾರ್ಯವನ್ನು ರದ್ದುಗೊಳಿಸಬಹುದಾದರೆ, ಸಂಸತ್ತಿನ ಅಗತ್ಯವಾದರೂ ಏನಿದೆ” ಎಂದು ಆಚಾರಿ ಪ್ರಶ್ನಿಸಿದ್ದಾರೆ.

ಸರ್ಕಾರವು ಕಾಯ್ದೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲವಾದರೂ, ನಿಯಮಗಳನ್ನು ನೋಟಿಫೈ ಮಾಡುವ ಮೊದಲು ಅದರ ಅನುಷ್ಠಾನವನ್ನು ವಿಳಂಬಗೊಳಿಸಬಹುದು. ಉದಾಹರಣೆಗೆ, 2019 ರ ಡಿಸೆಂಬರ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತ ಗೆಜೆಟ್‌ನಲ್ಲಿ 2020 ರ ಜನವರಿಯಲ್ಲಿ ನೋಟಿಫೈ ಮಾಡಲಾಗಿತು. ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ ಆರು ತಿಂಗಳೊಳಗೆ ಶಾಸನದ ನಿಯಮಗಳನ್ನು ನೋಟಿಫೈ ಮಾಡಬೇಕು ಎಮದು ಸಂಸತ್ತಿನ ನಿಯಮಗಳು ಹೇಳುತ್ತವೆ. ಆದರೆ ಈ ಸಂದರ್ಭದಲ್ಲಿ ಕಾನೂನು ಜಾರಿಗೆ ಬರಬೇಕಾದ ನಿಯಮಗಳನ್ನು ಸರ್ಕಾರ ಇನ್ನೂ ತಿಳಿಸಿಲ್ಲ.

ಅದೇ ರೀತಿ, 1988 ರ ಬೇನಾಮಿ ವಹಿವಾಟು (ನಿಷೇಧ) ಕಾಯ್ದೆ ಸುಮಾರು 28 ವರ್ಷಗಳವರೆಗೆ ಜಾರಿಗೆ ಬಂದಿರಲಿಲ್ಲ. 2016ರಲ್ಲಿ ನಿಯಮಗಳನ್ನು ನೋಟಿಫೈ ಮಾಡಿದ ನಂತರ ಅದು ಜಾರಿಗೆ ಬಂದಿತು.
‘ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಂದೆ ಇರುವ ಆಯ್ಕೆಗಳೆಂದರೆ, ಸುಪ್ರೀಂ ಕೋರ್ಟ್ ತನ್ನ ತಡೆಯಾಜ್ಞೆ ಮುಂದುವರಿಸಲು ಕೇಳಿಕೊಳ್ಳವುದು ಅಥವಾ ಕಾನೂನುಗಳನ್ನು ಮತ್ತೆ ಸಂಸತ್ತಿನ ಮುಂದೆ ಪ್ರಸ್ತುತಪಡಿಸುವುದು. ಸಂಸತ್ತು ಕಾನೂನುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ರದ್ದುಪಡಿಸಬಹುದು’ ಎಂದು ಆಚಾರಿ ತಿಲಿಸಿದ್ದಾರೆ.

ಕಾನೂನುಗಳನ್ನು ಮಾಡಲು ಸಂಸತ್ತಿಗೆ ಅಧಿಕಾರ ನೀಡುವ ಸಂವಿಧಾನದ 245 ನೇ ವಿಧಿಯೇ, ಕಾನೂನುಗಳನ್ನು ರದ್ದುಗೊಳಿಸುವ ಅಧಿಕಾರವನ್ನೂ ಸಂಸತ್ತಿಗೆ ನೀಡಿದೆ. ಕಾನೂನುಗಳು ತಮ್ಮ ಉದ್ದೇಶವನ್ನು ಈಡೇರಿಸಿದ ನಂತರ ಅವುಗಳ ಅಸ್ತಿತ್ವಕ್ಕೆ ಹೆಚ್ಚಿನ ಕಾರಣಗಳಿಲ್ಲದಿದ್ದಾಗ ಕಾನೂನುಗಳನ್ನು ರದ್ದುಪಡಿಸಬಹುದು. ಅಥವಾ ಕೆಲವು ಸಂದರ್ಭಗಳಲ್ಲಿ, ಅಸಂಗತತೆಗಳನ್ನು ತೆಗೆದುಹಾಕುವಾಗ ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ. ಸಾಮಾನ್ಯವಾಗಿ, ಹೊಸ ಕಾನೂನನ್ನು ಜಾರಿಗೊಳಿಸಿದಾಗ, ಹೊಸ ಕಾನೂನಿನಲ್ಲಿ ಹಳೆದನ್ನು ರದ್ದುಗೊಳಿಸುವ ಷರತ್ತನ್ನು ಸೇರಿಸುವ ಮೂಲಕ ಹಳೆಯ ಕಾನೂನನ್ನು ರದ್ದುಪಡಿಸಲಾಗುತ್ತದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...