Homeಮುಖಪುಟಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

- Advertisement -
- Advertisement -

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾದಿಯಾಗಿ ಇಡೀ ಆಡಳಿತ ಯಂತ್ರವೇ ಭಾಗವಹಿಸಿದ್ದನ್ನು ಪ್ರಶ್ನಿಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ನರೇಂದ್ರ ಮೋದಿ ಸರ್ಕಾರ ಕೇವಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜನವರಿ 22ರಂದು ನಡೆದ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು  ಸಕ್ರಿಯ ವಾಗಿದ್ದ ಬಗ್ಗೆ ಪ್ರಶ್ನಿಸಿದ ಅಸಾದುದ್ದೀನ್ ಓವೈಸಿ, ರಾಜ್ಯ ಮತ್ತು ಧರ್ಮದ ನಡುವಿನ ಗೆರೆಗಳು ಮಸುಕಾಗಿವೆ. ಧಾರ್ಮಿಕ ಕಾರ್ಯಕ್ರಮಗಳಿಂದ ದೂರ ಉಳಿಯಬೇಕಿರುವ ಭಾರತೀಯ ವಾಯುಸೇನೆ ಕಾರ್ಯಕ್ರಮದ ವೇಳೆ ದೇವಸ್ಥಾನದ ಆವರಣದಲ್ಲಿ ಅಭೂತಪೂರ್ವ ರೀತಿಯಲ್ಲಿ ಹೂವಿನ ದಳಗಳನ್ನು ಸುರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಶನಿವಾರ ಲೋಕಸಭೆಯಲ್ಲಿ ರಾಮಮಂದಿರ ಕುರಿತ ವಂದನಾ ನಿರ್ಣಯವನ್ನು ಮಂಡಿಸಿದೆ. ಈ ವೇಳೆ ಮಾತನಾಡಿದ ಹೈದರಾಬಾದ್ ಸಂಸದ ಒವೈಸಿ, ಸರಕಾರಕ್ಕೆ ಧರ್ಮವಿದೆಯೇ? ಈ ದೇಶಕ್ಕೆ ಧರ್ಮವಿಲ್ಲ ಎಂದು ನಾನು ನಂಬುತ್ತೇನೆ. ಜನವರಿ 22ರ ಮೂಲಕ ಈ ಸರ್ಕಾರವು ಒಂದು ಧರ್ಮದ ಮೇಲೆ ಇನ್ನೊಂದು ಧರ್ಮವನ್ನು ಗೆದ್ದಿದೆ ಎಂಬ ಸಂದೇಶವನ್ನು ನೀಡಲು ಬಯಸುತ್ತದೆಯೇ? ದೇಶದಲ್ಲಿರುವ 17 ಕೋಟಿ ಮುಸ್ಲಿಮರಿಗೆ ಏನು ಸಂದೇಶ ನೀಡುತ್ತೀರಿ. ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ನೇತೃತ್ವದಲ್ಲಿ ರಾಮ ಜನ್ಮಭೂಮಿ ಅಭಿಯಾನದ ನಂತರ 1992ರಲ್ಲಿ ಕರಸೇವಕರಿಂದ ಧ್ವಂಸಗೊಂಡ 16ನೇ ಶತಮಾನದ ಬಾಬ್ರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ಬಾಬರ್‌ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಒವೈಸಿ, ನಾನು ಬಾಬರ್, ಜಿನ್ನಾ ಅಥವಾ ಔರಂಗಜೇಬ್‌ನ ವಕ್ತಾರನೇ? ನಾನು ಭಗವಾನ್ ರಾಮನನ್ನು ಗೌರವಿಸುತ್ತೇನೆ ಆದರೆ ನಾನು ನಾಥೂರಾಂ ಗೋಡ್ಸೆಯನ್ನು ದ್ವೇಷಿಸುತ್ತೇನೆ ಏಕೆಂದರೆ ಅವನು ‘ಹೇ ರಾಮ್’ ಎಂದು ಕೊನೆಯ ಮಾತುಗಳನ್ನು ಹೇಳಿದ್ದ ವ್ಯಕ್ತಿಯನ್ನು ಕೊಂದಿದ್ದಾನೆ ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ಪಕ್ಷಪಾತಿ ಎಂದು ಆರೋಪಿಸಿದ ಓವೈಸಿ, ಪ್ರಧಾನಿ 140 ಕೋಟಿ ಭಾರತೀಯರ ಪರವಾಗಿ ಮಾತನಾಡುತ್ತಾರೆಯೇ ಅಥವಾ ಹಿಂದುತ್ವವನ್ನು ಬೆಂಬಲಿಸುವವರ ಪರವಾಗಿ ಮಾತ್ರ ಮಾತನಾಡುತ್ತಾರೆಯೇ ಎಂದು ಕೇಳಿದ್ದಾರೆ. ಗುಪ್ತಚರ ವರದಿಗಳ ಹೊರತಾಗಿಯೂ ಮಸೀದಿ ಬಳಿ ಕರಸೇವಕರಿಗೆ ಸೇರಲು ಅವಕಾಶ ನೀಡಿದ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಓವೈಸಿ, ಇದು ನ್ಯಾಯವೇ ಅಥವಾ ಅನ್ಯಾಯವೇ ಎಂದು ಪ್ರಶ್ನಿಸಿದರು.

ಹೈದರಾಬಾದ್ ಸಂಸದರು ಡಿಸೆಂಬರ್ 6, 1992ರಂದು ಬಾಬರಿ ಮಸೀದಿಯ ಧ್ವಂಸವನ್ನು ಖಂಡಿಸಿ ಲೋಕಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಉಲ್ಲೇಖಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಯೋಧ್ಯೆಯ ಮೌಲಾನಾ ಅಮೀರ್ ಅಲಿ ಮತ್ತು ಬಾಬಾ ರಾಮಚರಣ್ ದಾಸ್ ಅವರಂತಹ ಜನರು ಪ್ರಸ್ತುತ ಭಾರತಕ್ಕೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ 1528ರಲ್ಲಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಡಿಸೆಂಬರ್ 6, 1992 ರಂದು ಕೆಡವಿದರು. ಆ ಬಳಿಕ ತಿಂಗಳುಗಳ ಕಾಲ ನಡೆದ ಕೋಮು ಗಲಭೆಗಳಿಂದ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಯಿತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು. ಸುಪ್ರೀಂಕೋರ್ಟ್ 2.77 ಎಕರೆ ವಿವಾದಿತ ಭೂಮಿಯನ್ನು ರಾಮ್ ಲಲ್ಲಾಗೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಮಸೀದಿಯ ಧ್ವಂಸವನ್ನು ಕಾನೂನಿನ ನಿಯಮದ ಉಲ್ಲಂಘನೆ ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...