Homeಮುಖಪುಟಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

- Advertisement -
- Advertisement -

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾದಿಯಾಗಿ ಇಡೀ ಆಡಳಿತ ಯಂತ್ರವೇ ಭಾಗವಹಿಸಿದ್ದನ್ನು ಪ್ರಶ್ನಿಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ನರೇಂದ್ರ ಮೋದಿ ಸರ್ಕಾರ ಕೇವಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜನವರಿ 22ರಂದು ನಡೆದ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು  ಸಕ್ರಿಯ ವಾಗಿದ್ದ ಬಗ್ಗೆ ಪ್ರಶ್ನಿಸಿದ ಅಸಾದುದ್ದೀನ್ ಓವೈಸಿ, ರಾಜ್ಯ ಮತ್ತು ಧರ್ಮದ ನಡುವಿನ ಗೆರೆಗಳು ಮಸುಕಾಗಿವೆ. ಧಾರ್ಮಿಕ ಕಾರ್ಯಕ್ರಮಗಳಿಂದ ದೂರ ಉಳಿಯಬೇಕಿರುವ ಭಾರತೀಯ ವಾಯುಸೇನೆ ಕಾರ್ಯಕ್ರಮದ ವೇಳೆ ದೇವಸ್ಥಾನದ ಆವರಣದಲ್ಲಿ ಅಭೂತಪೂರ್ವ ರೀತಿಯಲ್ಲಿ ಹೂವಿನ ದಳಗಳನ್ನು ಸುರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಶನಿವಾರ ಲೋಕಸಭೆಯಲ್ಲಿ ರಾಮಮಂದಿರ ಕುರಿತ ವಂದನಾ ನಿರ್ಣಯವನ್ನು ಮಂಡಿಸಿದೆ. ಈ ವೇಳೆ ಮಾತನಾಡಿದ ಹೈದರಾಬಾದ್ ಸಂಸದ ಒವೈಸಿ, ಸರಕಾರಕ್ಕೆ ಧರ್ಮವಿದೆಯೇ? ಈ ದೇಶಕ್ಕೆ ಧರ್ಮವಿಲ್ಲ ಎಂದು ನಾನು ನಂಬುತ್ತೇನೆ. ಜನವರಿ 22ರ ಮೂಲಕ ಈ ಸರ್ಕಾರವು ಒಂದು ಧರ್ಮದ ಮೇಲೆ ಇನ್ನೊಂದು ಧರ್ಮವನ್ನು ಗೆದ್ದಿದೆ ಎಂಬ ಸಂದೇಶವನ್ನು ನೀಡಲು ಬಯಸುತ್ತದೆಯೇ? ದೇಶದಲ್ಲಿರುವ 17 ಕೋಟಿ ಮುಸ್ಲಿಮರಿಗೆ ಏನು ಸಂದೇಶ ನೀಡುತ್ತೀರಿ. ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ನೇತೃತ್ವದಲ್ಲಿ ರಾಮ ಜನ್ಮಭೂಮಿ ಅಭಿಯಾನದ ನಂತರ 1992ರಲ್ಲಿ ಕರಸೇವಕರಿಂದ ಧ್ವಂಸಗೊಂಡ 16ನೇ ಶತಮಾನದ ಬಾಬ್ರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ಬಾಬರ್‌ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಒವೈಸಿ, ನಾನು ಬಾಬರ್, ಜಿನ್ನಾ ಅಥವಾ ಔರಂಗಜೇಬ್‌ನ ವಕ್ತಾರನೇ? ನಾನು ಭಗವಾನ್ ರಾಮನನ್ನು ಗೌರವಿಸುತ್ತೇನೆ ಆದರೆ ನಾನು ನಾಥೂರಾಂ ಗೋಡ್ಸೆಯನ್ನು ದ್ವೇಷಿಸುತ್ತೇನೆ ಏಕೆಂದರೆ ಅವನು ‘ಹೇ ರಾಮ್’ ಎಂದು ಕೊನೆಯ ಮಾತುಗಳನ್ನು ಹೇಳಿದ್ದ ವ್ಯಕ್ತಿಯನ್ನು ಕೊಂದಿದ್ದಾನೆ ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ಪಕ್ಷಪಾತಿ ಎಂದು ಆರೋಪಿಸಿದ ಓವೈಸಿ, ಪ್ರಧಾನಿ 140 ಕೋಟಿ ಭಾರತೀಯರ ಪರವಾಗಿ ಮಾತನಾಡುತ್ತಾರೆಯೇ ಅಥವಾ ಹಿಂದುತ್ವವನ್ನು ಬೆಂಬಲಿಸುವವರ ಪರವಾಗಿ ಮಾತ್ರ ಮಾತನಾಡುತ್ತಾರೆಯೇ ಎಂದು ಕೇಳಿದ್ದಾರೆ. ಗುಪ್ತಚರ ವರದಿಗಳ ಹೊರತಾಗಿಯೂ ಮಸೀದಿ ಬಳಿ ಕರಸೇವಕರಿಗೆ ಸೇರಲು ಅವಕಾಶ ನೀಡಿದ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಓವೈಸಿ, ಇದು ನ್ಯಾಯವೇ ಅಥವಾ ಅನ್ಯಾಯವೇ ಎಂದು ಪ್ರಶ್ನಿಸಿದರು.

ಹೈದರಾಬಾದ್ ಸಂಸದರು ಡಿಸೆಂಬರ್ 6, 1992ರಂದು ಬಾಬರಿ ಮಸೀದಿಯ ಧ್ವಂಸವನ್ನು ಖಂಡಿಸಿ ಲೋಕಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಉಲ್ಲೇಖಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಯೋಧ್ಯೆಯ ಮೌಲಾನಾ ಅಮೀರ್ ಅಲಿ ಮತ್ತು ಬಾಬಾ ರಾಮಚರಣ್ ದಾಸ್ ಅವರಂತಹ ಜನರು ಪ್ರಸ್ತುತ ಭಾರತಕ್ಕೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ 1528ರಲ್ಲಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಡಿಸೆಂಬರ್ 6, 1992 ರಂದು ಕೆಡವಿದರು. ಆ ಬಳಿಕ ತಿಂಗಳುಗಳ ಕಾಲ ನಡೆದ ಕೋಮು ಗಲಭೆಗಳಿಂದ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಯಿತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು. ಸುಪ್ರೀಂಕೋರ್ಟ್ 2.77 ಎಕರೆ ವಿವಾದಿತ ಭೂಮಿಯನ್ನು ರಾಮ್ ಲಲ್ಲಾಗೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಮಸೀದಿಯ ಧ್ವಂಸವನ್ನು ಕಾನೂನಿನ ನಿಯಮದ ಉಲ್ಲಂಘನೆ ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...