Homeಮುಖಪುಟಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

- Advertisement -
- Advertisement -

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾದಿಯಾಗಿ ಇಡೀ ಆಡಳಿತ ಯಂತ್ರವೇ ಭಾಗವಹಿಸಿದ್ದನ್ನು ಪ್ರಶ್ನಿಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ನರೇಂದ್ರ ಮೋದಿ ಸರ್ಕಾರ ಕೇವಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜನವರಿ 22ರಂದು ನಡೆದ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು  ಸಕ್ರಿಯ ವಾಗಿದ್ದ ಬಗ್ಗೆ ಪ್ರಶ್ನಿಸಿದ ಅಸಾದುದ್ದೀನ್ ಓವೈಸಿ, ರಾಜ್ಯ ಮತ್ತು ಧರ್ಮದ ನಡುವಿನ ಗೆರೆಗಳು ಮಸುಕಾಗಿವೆ. ಧಾರ್ಮಿಕ ಕಾರ್ಯಕ್ರಮಗಳಿಂದ ದೂರ ಉಳಿಯಬೇಕಿರುವ ಭಾರತೀಯ ವಾಯುಸೇನೆ ಕಾರ್ಯಕ್ರಮದ ವೇಳೆ ದೇವಸ್ಥಾನದ ಆವರಣದಲ್ಲಿ ಅಭೂತಪೂರ್ವ ರೀತಿಯಲ್ಲಿ ಹೂವಿನ ದಳಗಳನ್ನು ಸುರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಶನಿವಾರ ಲೋಕಸಭೆಯಲ್ಲಿ ರಾಮಮಂದಿರ ಕುರಿತ ವಂದನಾ ನಿರ್ಣಯವನ್ನು ಮಂಡಿಸಿದೆ. ಈ ವೇಳೆ ಮಾತನಾಡಿದ ಹೈದರಾಬಾದ್ ಸಂಸದ ಒವೈಸಿ, ಸರಕಾರಕ್ಕೆ ಧರ್ಮವಿದೆಯೇ? ಈ ದೇಶಕ್ಕೆ ಧರ್ಮವಿಲ್ಲ ಎಂದು ನಾನು ನಂಬುತ್ತೇನೆ. ಜನವರಿ 22ರ ಮೂಲಕ ಈ ಸರ್ಕಾರವು ಒಂದು ಧರ್ಮದ ಮೇಲೆ ಇನ್ನೊಂದು ಧರ್ಮವನ್ನು ಗೆದ್ದಿದೆ ಎಂಬ ಸಂದೇಶವನ್ನು ನೀಡಲು ಬಯಸುತ್ತದೆಯೇ? ದೇಶದಲ್ಲಿರುವ 17 ಕೋಟಿ ಮುಸ್ಲಿಮರಿಗೆ ಏನು ಸಂದೇಶ ನೀಡುತ್ತೀರಿ. ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ನೇತೃತ್ವದಲ್ಲಿ ರಾಮ ಜನ್ಮಭೂಮಿ ಅಭಿಯಾನದ ನಂತರ 1992ರಲ್ಲಿ ಕರಸೇವಕರಿಂದ ಧ್ವಂಸಗೊಂಡ 16ನೇ ಶತಮಾನದ ಬಾಬ್ರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ಬಾಬರ್‌ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಒವೈಸಿ, ನಾನು ಬಾಬರ್, ಜಿನ್ನಾ ಅಥವಾ ಔರಂಗಜೇಬ್‌ನ ವಕ್ತಾರನೇ? ನಾನು ಭಗವಾನ್ ರಾಮನನ್ನು ಗೌರವಿಸುತ್ತೇನೆ ಆದರೆ ನಾನು ನಾಥೂರಾಂ ಗೋಡ್ಸೆಯನ್ನು ದ್ವೇಷಿಸುತ್ತೇನೆ ಏಕೆಂದರೆ ಅವನು ‘ಹೇ ರಾಮ್’ ಎಂದು ಕೊನೆಯ ಮಾತುಗಳನ್ನು ಹೇಳಿದ್ದ ವ್ಯಕ್ತಿಯನ್ನು ಕೊಂದಿದ್ದಾನೆ ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ಪಕ್ಷಪಾತಿ ಎಂದು ಆರೋಪಿಸಿದ ಓವೈಸಿ, ಪ್ರಧಾನಿ 140 ಕೋಟಿ ಭಾರತೀಯರ ಪರವಾಗಿ ಮಾತನಾಡುತ್ತಾರೆಯೇ ಅಥವಾ ಹಿಂದುತ್ವವನ್ನು ಬೆಂಬಲಿಸುವವರ ಪರವಾಗಿ ಮಾತ್ರ ಮಾತನಾಡುತ್ತಾರೆಯೇ ಎಂದು ಕೇಳಿದ್ದಾರೆ. ಗುಪ್ತಚರ ವರದಿಗಳ ಹೊರತಾಗಿಯೂ ಮಸೀದಿ ಬಳಿ ಕರಸೇವಕರಿಗೆ ಸೇರಲು ಅವಕಾಶ ನೀಡಿದ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಓವೈಸಿ, ಇದು ನ್ಯಾಯವೇ ಅಥವಾ ಅನ್ಯಾಯವೇ ಎಂದು ಪ್ರಶ್ನಿಸಿದರು.

ಹೈದರಾಬಾದ್ ಸಂಸದರು ಡಿಸೆಂಬರ್ 6, 1992ರಂದು ಬಾಬರಿ ಮಸೀದಿಯ ಧ್ವಂಸವನ್ನು ಖಂಡಿಸಿ ಲೋಕಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಉಲ್ಲೇಖಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಯೋಧ್ಯೆಯ ಮೌಲಾನಾ ಅಮೀರ್ ಅಲಿ ಮತ್ತು ಬಾಬಾ ರಾಮಚರಣ್ ದಾಸ್ ಅವರಂತಹ ಜನರು ಪ್ರಸ್ತುತ ಭಾರತಕ್ಕೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ 1528ರಲ್ಲಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಡಿಸೆಂಬರ್ 6, 1992 ರಂದು ಕೆಡವಿದರು. ಆ ಬಳಿಕ ತಿಂಗಳುಗಳ ಕಾಲ ನಡೆದ ಕೋಮು ಗಲಭೆಗಳಿಂದ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಯಿತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು. ಸುಪ್ರೀಂಕೋರ್ಟ್ 2.77 ಎಕರೆ ವಿವಾದಿತ ಭೂಮಿಯನ್ನು ರಾಮ್ ಲಲ್ಲಾಗೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಮಸೀದಿಯ ಧ್ವಂಸವನ್ನು ಕಾನೂನಿನ ನಿಯಮದ ಉಲ್ಲಂಘನೆ ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...