Homeಕೊರೊನಾಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

- Advertisement -
- Advertisement -

ಕರ್ನಾಟಕದ ಹಲವಾರು ಜನರು ಕೋವಿಡ್ ಲಸಿಕೆ ಪಡೆದಿದ್ದಾರೆ. ಆದರೆ ಮತ್ತಷ್ಟು ಜನರು ಲಸಿಕೆಯ ಅಡ್ಡಪರಿಣಾಮದ ಭಯದಿಂದ, ಇತರೆ ಗುಮಾನಿಗಳಿಂದ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಕಾರ್ಯಕರ್ತರು ಮನವೊಲಿಸಿದರೂ ಸಹ ಕೆಲವರು ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಎಂದು ಪ್ರಶ್ನಿಸಿ ಜಿಲ್ಲಾಧಿಕಾರಿಯಿಂದ ಮುಚ್ಚಳಿಕೆ ಬರೆಸಿಕೊಂಡು ಲಸಿಕೆ ಪಡೆದ ಪ್ರಸಂಗ ಹುಬ್ಬಳ್ಳಿಯಲ್ಲಿ ಜರುಗಿದೆ.

ಲಸಿಕೆ ಪ್ರಮಾಣ ಹೆಚ್ಚಿಸಲು ಜನಜಾಗೃತಿ ಮೂಡಿಸುವ ಸಲುವಾಗಿ ಹುಬ್ಬಳಿಯ ಮಹಾನಗರ ಪಾಲಿಕೆಯ ಆವರಣದಲ್ಲಿ ಸಾರ್ವಜನಿಕರು ಸಭೆ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಯಲ್ಲಾಪುರ ಓಣಿಯ ನಿವಾಸಿಯಾದ ಆನಂದ ಕೊನ್ನೂರುಕರ ಎಂಬುವವರು ಲಸಿಕೆ ಪಡೆದರೆ ಅಡ್ಡಪರಿಣಾಮವಿಲ್ಲ ಎಂಬುದಕ್ಕೆ ಯಾರು ಗ್ಯಾರಂಟಿ? ಒಂದು ವೇಳೆ ನನಗೆ ಏನಾದರೂ ತೊಂದರೆಯಾದರೆ ನನ್ನ ಕುಟುಂಬವನ್ನು ಯಾರು ನೋಡುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ನನ್ನ ಮನೆಯಲ್ಲಿ ಎಲ್ಲರೂ ಲಸಿಕೆ ಪಡೆದಿದ್ದಾರೆ. ಆದರೆ ಏನಾದರೂ ಹೆಚ್ಚು ಕಡಿಮೆ ಆಗಬಹುದೆಂಬ ಭಯಕ್ಕೆ ನಾನು ಲಸಿಕೆ ಪಡೆದಿಲ್ಲ. ನನ್ನ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಾದರೆ ನೀವು ಜವಾಬ್ದಾರಿ ತೆಗೆದುಕೊಳ್ಳುವಿರಾ ಎಂದು ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲರವರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಪಾಲಿಕೆ ಆಯುಕ್ತರಾದ ಸುರೇಶ ಇಟ್ನಾಳ್‌ರವರು ಲಸಿಕೆಯಿಂದ ಅಡ್ಡಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಲಿಖಿತವಾಗಿ ಬರೆದು ತಮ್ಮ ಸಹಿಯೊಂದಿಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಮತ್ತು ಉಪ ವಿಭಾಗಾಧಿಕಾರಿಯವರ ಸಹಿ ಹಾಕಿಸಿ ಆನಂದ ಕೊನ್ನೂರುಕರವರಿಗೆ ನೀಡಲಾಯಿತು. ನಂತರ ಅವರು ಕೋವಾಕ್ಸಿನ್ ಲಸಿಕೆ ಪಡೆದಿದ್ದಾರೆ.

ಅವರ ಈ ಲಸಿಕೆ ಪಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲಾಡಳಿತವು ಈ ಲಿಖಿತ ಭರವಸೆಯ ಮೂಲಕ ಹೆಚ್ಚಿನ ಜನರು ಲಸಿಕೆ ಪಡೆಯಲು ಮುಂದೆ ಬರಬಹುದು ಎಂದು ಅಂದಾಜಿಸಿದೆ. ಸರ್ಕಾರವು ಜನರಿಗೆ ಲಸಿಕೆಯ ಕುರಿತು ಇನ್ನಷ್ಟು ಧೈರ್ಯ ನೀಡಬೇಕಿದೆ. ಜೊತೆಗೆ ಈಗಲೇ ಮತ್ತೊಂದು ಕೋವಿಡ್ ಅಲೆ ಬಾರದಂತೆ, ಒಂದು ವೇಳೆ ಬಂದರೂ ಅದನ್ನು ಸಮರ್ಪಕವಾಗಿ, ವೈಜ್ಞಾನಿಕವಾಗಿ, ಹೆಚ್ಚಿನ ಸಾವು ನೋವುಗಳಿಗೆ ಆಸ್ಪದ ರೀತಿ ಎದುರಿಸಲು ಸಿದ್ದತೆ ನಡೆಸಬೇಕಿದೆ.


ಇದನ್ನೂ ಓದಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ಕೃಷಿ ಕಾನೂನು ರದ್ದತಿ ಮಸೂದೆ ಮಂಡನೆ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...