Homeಕೊರೊನಾಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

- Advertisement -
- Advertisement -

ಕರ್ನಾಟಕದ ಹಲವಾರು ಜನರು ಕೋವಿಡ್ ಲಸಿಕೆ ಪಡೆದಿದ್ದಾರೆ. ಆದರೆ ಮತ್ತಷ್ಟು ಜನರು ಲಸಿಕೆಯ ಅಡ್ಡಪರಿಣಾಮದ ಭಯದಿಂದ, ಇತರೆ ಗುಮಾನಿಗಳಿಂದ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಕಾರ್ಯಕರ್ತರು ಮನವೊಲಿಸಿದರೂ ಸಹ ಕೆಲವರು ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಎಂದು ಪ್ರಶ್ನಿಸಿ ಜಿಲ್ಲಾಧಿಕಾರಿಯಿಂದ ಮುಚ್ಚಳಿಕೆ ಬರೆಸಿಕೊಂಡು ಲಸಿಕೆ ಪಡೆದ ಪ್ರಸಂಗ ಹುಬ್ಬಳ್ಳಿಯಲ್ಲಿ ಜರುಗಿದೆ.

ಲಸಿಕೆ ಪ್ರಮಾಣ ಹೆಚ್ಚಿಸಲು ಜನಜಾಗೃತಿ ಮೂಡಿಸುವ ಸಲುವಾಗಿ ಹುಬ್ಬಳಿಯ ಮಹಾನಗರ ಪಾಲಿಕೆಯ ಆವರಣದಲ್ಲಿ ಸಾರ್ವಜನಿಕರು ಸಭೆ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಯಲ್ಲಾಪುರ ಓಣಿಯ ನಿವಾಸಿಯಾದ ಆನಂದ ಕೊನ್ನೂರುಕರ ಎಂಬುವವರು ಲಸಿಕೆ ಪಡೆದರೆ ಅಡ್ಡಪರಿಣಾಮವಿಲ್ಲ ಎಂಬುದಕ್ಕೆ ಯಾರು ಗ್ಯಾರಂಟಿ? ಒಂದು ವೇಳೆ ನನಗೆ ಏನಾದರೂ ತೊಂದರೆಯಾದರೆ ನನ್ನ ಕುಟುಂಬವನ್ನು ಯಾರು ನೋಡುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ನನ್ನ ಮನೆಯಲ್ಲಿ ಎಲ್ಲರೂ ಲಸಿಕೆ ಪಡೆದಿದ್ದಾರೆ. ಆದರೆ ಏನಾದರೂ ಹೆಚ್ಚು ಕಡಿಮೆ ಆಗಬಹುದೆಂಬ ಭಯಕ್ಕೆ ನಾನು ಲಸಿಕೆ ಪಡೆದಿಲ್ಲ. ನನ್ನ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಾದರೆ ನೀವು ಜವಾಬ್ದಾರಿ ತೆಗೆದುಕೊಳ್ಳುವಿರಾ ಎಂದು ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲರವರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಪಾಲಿಕೆ ಆಯುಕ್ತರಾದ ಸುರೇಶ ಇಟ್ನಾಳ್‌ರವರು ಲಸಿಕೆಯಿಂದ ಅಡ್ಡಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಲಿಖಿತವಾಗಿ ಬರೆದು ತಮ್ಮ ಸಹಿಯೊಂದಿಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಮತ್ತು ಉಪ ವಿಭಾಗಾಧಿಕಾರಿಯವರ ಸಹಿ ಹಾಕಿಸಿ ಆನಂದ ಕೊನ್ನೂರುಕರವರಿಗೆ ನೀಡಲಾಯಿತು. ನಂತರ ಅವರು ಕೋವಾಕ್ಸಿನ್ ಲಸಿಕೆ ಪಡೆದಿದ್ದಾರೆ.

ಅವರ ಈ ಲಸಿಕೆ ಪಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲಾಡಳಿತವು ಈ ಲಿಖಿತ ಭರವಸೆಯ ಮೂಲಕ ಹೆಚ್ಚಿನ ಜನರು ಲಸಿಕೆ ಪಡೆಯಲು ಮುಂದೆ ಬರಬಹುದು ಎಂದು ಅಂದಾಜಿಸಿದೆ. ಸರ್ಕಾರವು ಜನರಿಗೆ ಲಸಿಕೆಯ ಕುರಿತು ಇನ್ನಷ್ಟು ಧೈರ್ಯ ನೀಡಬೇಕಿದೆ. ಜೊತೆಗೆ ಈಗಲೇ ಮತ್ತೊಂದು ಕೋವಿಡ್ ಅಲೆ ಬಾರದಂತೆ, ಒಂದು ವೇಳೆ ಬಂದರೂ ಅದನ್ನು ಸಮರ್ಪಕವಾಗಿ, ವೈಜ್ಞಾನಿಕವಾಗಿ, ಹೆಚ್ಚಿನ ಸಾವು ನೋವುಗಳಿಗೆ ಆಸ್ಪದ ರೀತಿ ಎದುರಿಸಲು ಸಿದ್ದತೆ ನಡೆಸಬೇಕಿದೆ.


ಇದನ್ನೂ ಓದಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ಕೃಷಿ ಕಾನೂನು ರದ್ದತಿ ಮಸೂದೆ ಮಂಡನೆ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...