Homeಮುಖಪುಟ'ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ': ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

- Advertisement -
- Advertisement -

”ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ” ಎಂದು ಹಮಾಸ್ ಸಶಸ್ತ್ರ ಸಂಘಟನೆ ಹೇಳಿದೆ.​ ದಿಗ್ಬಂಧನಕ್ಕೊಳಗಾದ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ಇಸ್ರೇಲ್ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ನ​ ಸಶಸ್ತ್ರ ಸಂಘಟನೆ ಹಮಾಸ್ ನಡುವೆ ಆರಂಭವಾದ ಸಂಘರ್ಷ ಮುಂದುವರೆದಿದೆ. ಎರಡೂ ಕಡೆಯಿಂದ ಸುಮಾರು ನಾಲ್ಕು ಸಾವಿರ ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಇರಾನ್ ವಿದೇಶಾಂಗ ಸಚಿವಾಲಯವು ಇಸ್ರೇಲ್​ನ ಗಾಜಾ ಪಟ್ಟಿಯ ಮೇಲಿನ ವಾಯುದಾಳಿಯನ್ನು ನಿಲ್ಲಿಸಿದರೆ, ಒತ್ತೆಯಾಳಾಗಿದ್ದ ಸುಮಾರು 200 ಜನರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ ಇರಾನ್​ನ ಈ ಹೇಳಿಕೆಗೆ ಹಮಾಸ್​ ಯಾವುದೇ ಪ್ರತಕ್ರಿಯೆಯನ್ನು ನೀಡಿಲ್ಲ.

ಅದೇ ಸಮಯದಲ್ಲಿ,ಇರಾನ್​ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಹಮಾಸ್‌ನ್ನು ಉಲ್ಲೇಖಿಸಿ ಮಾತನಾಡಿ, ”ಈ ಯುದ್ಧವನ್ನು ಮುಂದುವರೆಸಲು ನಮಗೆ ಯಾವುದೇ ಸಮಸ್ಯೆಯಿಲ್ಲ. ಇಸ್ರೇಲ್‌ನ್ನು ಎದುರಿಸಲು ಸಾಕಷ್ಟು ಮಿಲಿಟರಿ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಗಾಜಾದಲ್ಲಿ ಇಂತಹ ಹಿಂಸಾತ್ಮಕ ಪ್ರವೃತ್ತಿ ಮುಂದುವರೆದರೆ ಇರಾನ್ ಕೂಡ ಯುದ್ಧಕ್ಕೆ ಧುಮುಕುತ್ತದೆ ಎಂದು ಇರಾನ್ ಇಸ್ರೇಲ್​ಗೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್​ ಮೇಲೆ ದಾಳಿ ನಡೆಸಿತ್ತು, ಎರಡೂ ಕಡೆಗಳು ಸೇರಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಯುದ್ಧ ಆರಂಭಕ್ಕೂ ಒಂದು ವಾರದ ಮುಂಚೆ ಅಬು ಒಬೇಡೆಹ್ ಅವರು, ”ನಮ್ಮ ಜನರ ವಿರುದ್ಧ ನೆಲದ ಆಕ್ರಮಣವನ್ನು ಪ್ರಾರಂಭಿಸುವ ಆಕ್ರಮಣದ (ಇಸ್ರೇಲ್) ಬೆದರಿಕೆಯು ನಮ್ಮನ್ನು ಹೆದರಿಸುವುದಿಲ್ಲ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

ಇಸ್ರೇಲಿ ಅಧಿಕಾರಿಗಳ ಪ್ರಕಾರ ಮುಂಜಾನೆ ಹಮಾಸ್ ದಾಳಿಯೊಂದಿಗೆ ಪ್ರಾರಂಭವಾದ ಹಿಂಸಾಚಾರದಲ್ಲಿ ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸೇನೆಯ ವಕ್ತಾರ ಡೇನಿಯಲ್ ಹಗಾರಿ ಸೋಮವಾರ ಮುಂಜಾನೆ ಇಸ್ರೇಲ್ ಗಾಜಾದಲ್ಲಿ ಬಂಧಿಯಾಗಿರುವ 199 ಜನರ ಸಂಬಂಧಿಕರನ್ನು ಖಚಿತಪಡಿಸಲು ಮತ್ತು ತಿಳಿಸಲು ಸಾಧ್ಯವಾಯಿತು ಎಂದು ಹೇಳಿದರು.

”ಪರಿಸ್ಥಿತಿಗಳು ಪಕ್ವವಾದಾಗ ನಾವು ವಿದೇಶಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ” ಎಂದು ಅಬು ಒಬೇಡೆ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ರೇಲ್‌ನಿಂದ ತೆಗೆದುಕೊಳ್ಳಲಾದ ಕನಿಷ್ಠ 22 ಒತ್ತೆಯಾಳುಗಳನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದರು.

ಹಮಾಸ್ ಅಧಿಕಾರಿಗಳ ಪ್ರಕಾರ, ಒಟ್ಟಾರೆಯಾಗಿ, ಅಕ್ಟೋಬರ್ 7 ರಿಂದ ಕಿರಿದಾದ ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ 2,750 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...