Homeಮುಖಪುಟ'ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ': ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

- Advertisement -
- Advertisement -

”ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ” ಎಂದು ಹಮಾಸ್ ಸಶಸ್ತ್ರ ಸಂಘಟನೆ ಹೇಳಿದೆ.​ ದಿಗ್ಬಂಧನಕ್ಕೊಳಗಾದ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ಇಸ್ರೇಲ್ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ನ​ ಸಶಸ್ತ್ರ ಸಂಘಟನೆ ಹಮಾಸ್ ನಡುವೆ ಆರಂಭವಾದ ಸಂಘರ್ಷ ಮುಂದುವರೆದಿದೆ. ಎರಡೂ ಕಡೆಯಿಂದ ಸುಮಾರು ನಾಲ್ಕು ಸಾವಿರ ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಇರಾನ್ ವಿದೇಶಾಂಗ ಸಚಿವಾಲಯವು ಇಸ್ರೇಲ್​ನ ಗಾಜಾ ಪಟ್ಟಿಯ ಮೇಲಿನ ವಾಯುದಾಳಿಯನ್ನು ನಿಲ್ಲಿಸಿದರೆ, ಒತ್ತೆಯಾಳಾಗಿದ್ದ ಸುಮಾರು 200 ಜನರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ ಇರಾನ್​ನ ಈ ಹೇಳಿಕೆಗೆ ಹಮಾಸ್​ ಯಾವುದೇ ಪ್ರತಕ್ರಿಯೆಯನ್ನು ನೀಡಿಲ್ಲ.

ಅದೇ ಸಮಯದಲ್ಲಿ,ಇರಾನ್​ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಹಮಾಸ್‌ನ್ನು ಉಲ್ಲೇಖಿಸಿ ಮಾತನಾಡಿ, ”ಈ ಯುದ್ಧವನ್ನು ಮುಂದುವರೆಸಲು ನಮಗೆ ಯಾವುದೇ ಸಮಸ್ಯೆಯಿಲ್ಲ. ಇಸ್ರೇಲ್‌ನ್ನು ಎದುರಿಸಲು ಸಾಕಷ್ಟು ಮಿಲಿಟರಿ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಗಾಜಾದಲ್ಲಿ ಇಂತಹ ಹಿಂಸಾತ್ಮಕ ಪ್ರವೃತ್ತಿ ಮುಂದುವರೆದರೆ ಇರಾನ್ ಕೂಡ ಯುದ್ಧಕ್ಕೆ ಧುಮುಕುತ್ತದೆ ಎಂದು ಇರಾನ್ ಇಸ್ರೇಲ್​ಗೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್​ ಮೇಲೆ ದಾಳಿ ನಡೆಸಿತ್ತು, ಎರಡೂ ಕಡೆಗಳು ಸೇರಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಯುದ್ಧ ಆರಂಭಕ್ಕೂ ಒಂದು ವಾರದ ಮುಂಚೆ ಅಬು ಒಬೇಡೆಹ್ ಅವರು, ”ನಮ್ಮ ಜನರ ವಿರುದ್ಧ ನೆಲದ ಆಕ್ರಮಣವನ್ನು ಪ್ರಾರಂಭಿಸುವ ಆಕ್ರಮಣದ (ಇಸ್ರೇಲ್) ಬೆದರಿಕೆಯು ನಮ್ಮನ್ನು ಹೆದರಿಸುವುದಿಲ್ಲ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

ಇಸ್ರೇಲಿ ಅಧಿಕಾರಿಗಳ ಪ್ರಕಾರ ಮುಂಜಾನೆ ಹಮಾಸ್ ದಾಳಿಯೊಂದಿಗೆ ಪ್ರಾರಂಭವಾದ ಹಿಂಸಾಚಾರದಲ್ಲಿ ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸೇನೆಯ ವಕ್ತಾರ ಡೇನಿಯಲ್ ಹಗಾರಿ ಸೋಮವಾರ ಮುಂಜಾನೆ ಇಸ್ರೇಲ್ ಗಾಜಾದಲ್ಲಿ ಬಂಧಿಯಾಗಿರುವ 199 ಜನರ ಸಂಬಂಧಿಕರನ್ನು ಖಚಿತಪಡಿಸಲು ಮತ್ತು ತಿಳಿಸಲು ಸಾಧ್ಯವಾಯಿತು ಎಂದು ಹೇಳಿದರು.

”ಪರಿಸ್ಥಿತಿಗಳು ಪಕ್ವವಾದಾಗ ನಾವು ವಿದೇಶಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ” ಎಂದು ಅಬು ಒಬೇಡೆ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ರೇಲ್‌ನಿಂದ ತೆಗೆದುಕೊಳ್ಳಲಾದ ಕನಿಷ್ಠ 22 ಒತ್ತೆಯಾಳುಗಳನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದರು.

ಹಮಾಸ್ ಅಧಿಕಾರಿಗಳ ಪ್ರಕಾರ, ಒಟ್ಟಾರೆಯಾಗಿ, ಅಕ್ಟೋಬರ್ 7 ರಿಂದ ಕಿರಿದಾದ ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ 2,750 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...