Homeಕರ್ನಾಟಕನಾಯಿ ಕಡಿತ ಪ್ರಕರಣ | ಕಳೆದ 2 ತಿಂಗಳಲ್ಲಿ 47% ಹೆಚ್ಚಳ; ರೇಬಿಸ್‌ನಿಂದ 8 ಸಾವು

ನಾಯಿ ಕಡಿತ ಪ್ರಕರಣ | ಕಳೆದ 2 ತಿಂಗಳಲ್ಲಿ 47% ಹೆಚ್ಚಳ; ರೇಬಿಸ್‌ನಿಂದ 8 ಸಾವು

- Advertisement -
- Advertisement -

ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ರೇಬೀಸ್‌ನಿಂದ ಎಂಟು ಸಾವುಗಳು ಸಂಭವಿಸಿವೆ ಎಂದು ಡೆಕ್ಕನ್ ಹೆರಾಲ್ಡ್‌ ಸೋಮವಾರ ವರದಿ ಮಾಡಿದ್ದು, ಈ ಸಾವುಗಳಲ್ಲಿ ನಾಲ್ಕು ಸಾವು ಬೆಂಗಳೂರಿನಲ್ಲೆ ಸಂಭವಿಸಿವೆ ಎಂದು ಪತ್ರಿಕೆ ಆರೋಗ್ಯ ಇಲಾಖೆಯ ಮೂಲವನ್ನು ಉಲ್ಲೇಖಿಸಿ ವರದಿ ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ವರದಿಯಾದ ನಾಯಿ ಕಡಿತ ಪ್ರಕರಣಗಳಿಗೆ ಹೋಲಿಸಿದರೆ ಈ ವರ್ಷ 47% ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ ಎಂದು ವರದಿ ಉಲ್ಲೇಖಿಸಿದೆ. ನಾಯಿ ಕಡಿತ ಪ್ರಕರಣ

ಬೆಂಗಳೂರಿನಲ್ಲಿ ಸಂಭವಿಸಿದ ನಾಲ್ಕು ಸಾವುಗಳಲ್ಲಿ, ಮೂವರು (ಹರಿಯಾಣ ಮೂಲದ 38 ವರ್ಷದ ವ್ಯಕ್ತಿ, ಚಿತ್ರದುರ್ಗದ 36 ವರ್ಷದ ವ್ಯಕ್ತಿ ಮತ್ತು ತುಮಕೂರಿನ 26 ವರ್ಷದ ವ್ಯಕ್ತಿ) ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿದ್ದರು. ಇದು ಶಂಕಿತ ರೇಬೀಸ್ ಪ್ರಕರಣಗಳಿಗೆ ಗೊತ್ತುಪಡಿಸಿದ ಪ್ರತ್ಯೇಕ ಆಸ್ಪತ್ರೆಯಾಗಿದ್ದು, ಇತರ ಜಿಲ್ಲೆಗಳ ರೋಗಿಳನ್ನು ಇಲ್ಲಿಗೆ ಕಳುಹಿಸಲಾಗುತ್ತದೆ. ನಾಯಿ ಕಡಿತ ಪ್ರಕರಣ

ನಾಲ್ಕನೆಯ ಘಟನೆ ಜನವರಿ 5 ರಂದು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ (IGICH) ಸಾವನ್ನಪ್ಪಿದ ನಾಲ್ಕು ವರ್ಷದ ಬಾಲಕನದ್ದಾಗಿದೆ ಎಂದು ವರದಿ ಹೇಳಿದೆ. ಅಲ್ಲದೆ, ಬೆಳಗಾವಿಯಲ್ಲಿ ಇಬ್ಬರು ಮತ್ತು ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ ಒಬ್ಬರು ರೇಬೀಸ್ ನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 23, 2025 ರ ಹೊತ್ತಿಗೆ ಆರೋಗ್ಯ ಇಲಾಖೆಯು ಸುಮಾರು 66,489 ನಾಯಿ ಕಡಿತ ಪ್ರಕರಣಗಳನ್ನು ದಾಖಲಿಸಿದೆ. ಇದರಲ್ಲಿ ವಿಜಯಪುರ (4,552), ಬೆಂಗಳೂರಿನ ಬಿಬಿಎಂಪಿ ಮಿತಿಯಲ್ಲಿ (4,072) ಮತ್ತು ಹಾಸನ (3,688) ಗಳಲ್ಲಿ ಅತಿ ಹೆಚ್ಚು ಘಟನೆ ವರದಿಯಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಇದು 47% ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ.

ಕಳೆದ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ರಾಜ್ಯದಲ್ಲಿ ಸುಮಾರು 45,173 ನಾಯಿ ಕಡಿತ ಪ್ರಕರಣಗಳು ವರದಿಯಾಗಿತ್ತು. ಜನವರಿ ಮತ್ತು ಡಿಸೆಂಬರ್ 2024 ರ ನಡುವೆ, ಒಟ್ಟು 42 ಸಾವುಗಳು ಮತ್ತು 3,61,522 ನಾಯಿ ಕಡಿತ ಪ್ರಕರಣಗಳು ಕಳೆದ ವರ್ಷ ವರದಿಯಾಗಿದ್ದವು. 2023 ರಲ್ಲಿ, ಕರ್ನಾಟಕದಲ್ಲಿ ಕನಿಷ್ಠ 2.32 ಲಕ್ಷ ನಾಯಿ ಕಡಿತ ಮತ್ತು ನಾಲ್ಕು ಸಾವುಗಳು ವರದಿಯಾಗಿದ್ದವು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹೆಚ್ಚಿದ ಕಣ್ಗಾವಲು ಹಾಗೂ ಪ್ರಕರಣಗಳ ವರದಿಯೇ ಈ ಏರಿಕೆಗೆ ಕಾರಣ ಎಂದು ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸರ್ ಅಹ್ಮದ್ ಅವರು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. “ಎಲ್ಲಾ ನಾಯಿ ಕಡಿತ ಪ್ರಕರಣಗಳು ರೇಬೀಸ್ ಪ್ರಕರಣಗಳಲ್ಲ. ಆದಾಗ್ಯೂ, ರೋಗದ ಸಾಧ್ಯತೆಯನ್ನು ಕಡಿಮೆ ಮಾಡಲು ಪ್ರತಿಯೊಂದು ಗಾಯವನ್ನು ತಕ್ಷಣವೇ ಸೋಂಕುರಹಿತ ನೀರು ಮತ್ತು ಸೋಪಿನಿಂದ ತೊಳೆಯುವುದು ಮುಖ್ಯ,” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...