Homeಅಂತರಾಷ್ಟ್ರೀಯಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

- Advertisement -
- Advertisement -

ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎಂದು ವರದಿಯಾಗಿದೆ.

ಚೀನಾದ ಸೈನ್ಯವು ಸುಮಾರು 2,000 ದಿಂದ 2,500 ಸೈನಿಕರನ್ನು ನಿಯೋಜಿಸುತ್ತಿದೆ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಎರಡು ವಿವಾದಾಸ್ಪದ ಪ್ರದೇಶಗಳಾದ ಪಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಉನ್ನತ ಮಿಲಿಟರಿ ಮೂಲಗಳು ತಿಳಿಸಿವೆ.

“ಈ ಪ್ರದೇಶದಲ್ಲಿ ಭಾರತೀಯ ಸೇನೆಯ ಸಾಮರ್ಥ್ಯವು ನಮ್ಮ ಎದುರಾಳಿಗಿಂತ ಉತ್ತಮವಾಗಿದೆ” ಎಂದು ಮಿಲಿಟರಿ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಇದು ಗಂಭೀರವಾಗಿದೆ, ಇದು ಸಾಮಾನ್ಯ ರೀತಿಯ ಉಲ್ಲಂಘನೆಯಲ್ಲ” ಎಂದು ಉತ್ತರ ಸೇನೆಯ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಡಿ.ಎಸ್. ಹೂಡಾ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲದ ಕಾರಣ ಗಾಲ್ವಾನ್‌ನಂತಹ ಪ್ರದೇಶಗಳಿಗೆ ಚೀನಾ ಅತಿಕ್ರಮಣಕ್ಕೆ ಚಿಂತಿಸುತ್ತಿದೆ ಎಂದು ಅವರು ವಿಶೇಷವಾಗಿ ಒತ್ತಿ ಹೇಳಿದ್ದಾರೆ.

ಕಾರ್ಯತಂತ್ರ ವ್ಯವಹಾರಗಳ ತಜ್ಞ ರಾಯಭಾರಿ ಅಶೋಕ್ ಕೆ ಕಾಂತಾ ಅವರು ಲೆಫ್ಟಿನೆಂಟ್ ಜನರಲ್ ಹೂಡಾ ಅವರ ವಾದವನ್ನು ಒಪ್ಪಿ, “ಚೀನಾದ ಸೈನ್ಯದಿಂದ ಅನೇಕ ಆಕ್ರಮಣಗಳು ನಡೆದಿವೆ. ಇದು ಕಳವಳಕ್ಕೆ ಕಾರಣವಾಗಿದೆ. ಇದು ದಿನನಿತ್ಯದ ನಿಲುಗಡೆಯಲ್ಲ. ಇದು ಗೊಂದಲದ ಪರಿಸ್ಥಿತಿ” ಎಂದು ಕಾಂತಾ ಹೇಳಿದರು.

ಎರಡು ಸೇನೆಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಹರಿಸಲು ರಾಜತಾಂತ್ರಿಕ ಪ್ರಯತ್ನಗಳನ್ನು ಹೆಚ್ಚಿಸಬೇಕು ಮತ್ತು ಪಾಂಗೊಂಗ್ ತ್ಸೊ, ಡೆಮ್‌ಚಾಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಎರಡೂ ಕಡೆಯ ಸೈನಿಕರು ಮುಖಾಮುಖಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಕಡೆಯವರು ವಿಶೇಷವಾಗಿ ಗಾಲ್ವಾನ್ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಮಾರು 100 ಡೇರೆಗಳನ್ನು ನಿರ್ಮಿಸಿದ್ದಾರೆ ಮತ್ತು ಬಂಕರ್‌ಗಳ ನಿರ್ಮಾಣಕ್ಕಾಗಿ ಭಾರೀ ಉಪಕರಣಗಳನ್ನು ತಂದಿದ್ದಾರೆ. ಡೆಮ್ಚೋಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ಪಡೆಗಳು ಗಸ್ತು ತಿರುಗಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಮೇ 9 ರಂದು ಉತ್ತರ ಸಿಕ್ಕಿಂನಲ್ಲಿ ಇದೇ ರೀತಿಯ ಘಟನೆ ಹಾಗೂ ಪಾಂಗೊಂಗ್ ತ್ಸೊದಲ್ಲಿ ನಡೆದ ಘಟನೆಯ ನಂತರ, ಚೀನಾ ಮಿಲಿಟರಿ ತನ್ನ ಸೈನಿಕರಿಂದಾಗಿ ಸಾಮಾನ್ಯ ಗಸ್ತು ತಿರುಗಲು ಅಡ್ಡಿಯಾಗುತ್ತಿದೆ ಎಂದು ಭಾರತ ಕಳೆದ ವಾರ ಹೇಳಿದೆ. ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ಮಾರ್ಗವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ಭಾರತೀಯ ಪಡೆಗಳ ಅತಿಕ್ರಮಣದಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂಬ ಚೀನಾದ ವಾದವನ್ನು ಬಲವಾಗಿ ನಿರಾಕರಿಸಿದರು.

ಸಿಕ್ಕಿಂ ಮತ್ತು ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನವನ್ನು ಭಾರತೀಯ ಸೈನ್ಯ ನಡೆಸುತ್ತಿದೆ ಎಂದು ಚೀನಾ ಆರೋಪಿಸಿದ ಎರಡು ದಿನಗಳ ನಂತರ ಭಾರತದ ಪ್ರತಿಕ್ರಿಯೆ ಹೊರಬಿದ್ದಿದೆ.

ಮೇ 5 ರಂದು, ಭಾರತೀಯ ಮತ್ತು ಚೀನಾದ ಸೈನಿಕರು ಪಂಗೊಂಗ್ ತ್ಸೋ ಸರೋವರ ಪ್ರದೇಶದಲ್ಲಿ ಕಬ್ಬಿಣದ ಸ್ಟಿಕ್ಕುಗಲು, ಕೋಲುಗಳಿಂದ ಘರ್ಷಣೆ ನಡೆಸಿ,  ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದರು.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...