Homeಅಂತರಾಷ್ಟ್ರೀಯಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

- Advertisement -
- Advertisement -

ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎಂದು ವರದಿಯಾಗಿದೆ.

ಚೀನಾದ ಸೈನ್ಯವು ಸುಮಾರು 2,000 ದಿಂದ 2,500 ಸೈನಿಕರನ್ನು ನಿಯೋಜಿಸುತ್ತಿದೆ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಎರಡು ವಿವಾದಾಸ್ಪದ ಪ್ರದೇಶಗಳಾದ ಪಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಉನ್ನತ ಮಿಲಿಟರಿ ಮೂಲಗಳು ತಿಳಿಸಿವೆ.

“ಈ ಪ್ರದೇಶದಲ್ಲಿ ಭಾರತೀಯ ಸೇನೆಯ ಸಾಮರ್ಥ್ಯವು ನಮ್ಮ ಎದುರಾಳಿಗಿಂತ ಉತ್ತಮವಾಗಿದೆ” ಎಂದು ಮಿಲಿಟರಿ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಇದು ಗಂಭೀರವಾಗಿದೆ, ಇದು ಸಾಮಾನ್ಯ ರೀತಿಯ ಉಲ್ಲಂಘನೆಯಲ್ಲ” ಎಂದು ಉತ್ತರ ಸೇನೆಯ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಡಿ.ಎಸ್. ಹೂಡಾ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲದ ಕಾರಣ ಗಾಲ್ವಾನ್‌ನಂತಹ ಪ್ರದೇಶಗಳಿಗೆ ಚೀನಾ ಅತಿಕ್ರಮಣಕ್ಕೆ ಚಿಂತಿಸುತ್ತಿದೆ ಎಂದು ಅವರು ವಿಶೇಷವಾಗಿ ಒತ್ತಿ ಹೇಳಿದ್ದಾರೆ.

ಕಾರ್ಯತಂತ್ರ ವ್ಯವಹಾರಗಳ ತಜ್ಞ ರಾಯಭಾರಿ ಅಶೋಕ್ ಕೆ ಕಾಂತಾ ಅವರು ಲೆಫ್ಟಿನೆಂಟ್ ಜನರಲ್ ಹೂಡಾ ಅವರ ವಾದವನ್ನು ಒಪ್ಪಿ, “ಚೀನಾದ ಸೈನ್ಯದಿಂದ ಅನೇಕ ಆಕ್ರಮಣಗಳು ನಡೆದಿವೆ. ಇದು ಕಳವಳಕ್ಕೆ ಕಾರಣವಾಗಿದೆ. ಇದು ದಿನನಿತ್ಯದ ನಿಲುಗಡೆಯಲ್ಲ. ಇದು ಗೊಂದಲದ ಪರಿಸ್ಥಿತಿ” ಎಂದು ಕಾಂತಾ ಹೇಳಿದರು.

ಎರಡು ಸೇನೆಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಹರಿಸಲು ರಾಜತಾಂತ್ರಿಕ ಪ್ರಯತ್ನಗಳನ್ನು ಹೆಚ್ಚಿಸಬೇಕು ಮತ್ತು ಪಾಂಗೊಂಗ್ ತ್ಸೊ, ಡೆಮ್‌ಚಾಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಎರಡೂ ಕಡೆಯ ಸೈನಿಕರು ಮುಖಾಮುಖಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಕಡೆಯವರು ವಿಶೇಷವಾಗಿ ಗಾಲ್ವಾನ್ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಮಾರು 100 ಡೇರೆಗಳನ್ನು ನಿರ್ಮಿಸಿದ್ದಾರೆ ಮತ್ತು ಬಂಕರ್‌ಗಳ ನಿರ್ಮಾಣಕ್ಕಾಗಿ ಭಾರೀ ಉಪಕರಣಗಳನ್ನು ತಂದಿದ್ದಾರೆ. ಡೆಮ್ಚೋಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ಪಡೆಗಳು ಗಸ್ತು ತಿರುಗಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಮೇ 9 ರಂದು ಉತ್ತರ ಸಿಕ್ಕಿಂನಲ್ಲಿ ಇದೇ ರೀತಿಯ ಘಟನೆ ಹಾಗೂ ಪಾಂಗೊಂಗ್ ತ್ಸೊದಲ್ಲಿ ನಡೆದ ಘಟನೆಯ ನಂತರ, ಚೀನಾ ಮಿಲಿಟರಿ ತನ್ನ ಸೈನಿಕರಿಂದಾಗಿ ಸಾಮಾನ್ಯ ಗಸ್ತು ತಿರುಗಲು ಅಡ್ಡಿಯಾಗುತ್ತಿದೆ ಎಂದು ಭಾರತ ಕಳೆದ ವಾರ ಹೇಳಿದೆ. ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ಮಾರ್ಗವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ಭಾರತೀಯ ಪಡೆಗಳ ಅತಿಕ್ರಮಣದಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂಬ ಚೀನಾದ ವಾದವನ್ನು ಬಲವಾಗಿ ನಿರಾಕರಿಸಿದರು.

ಸಿಕ್ಕಿಂ ಮತ್ತು ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನವನ್ನು ಭಾರತೀಯ ಸೈನ್ಯ ನಡೆಸುತ್ತಿದೆ ಎಂದು ಚೀನಾ ಆರೋಪಿಸಿದ ಎರಡು ದಿನಗಳ ನಂತರ ಭಾರತದ ಪ್ರತಿಕ್ರಿಯೆ ಹೊರಬಿದ್ದಿದೆ.

ಮೇ 5 ರಂದು, ಭಾರತೀಯ ಮತ್ತು ಚೀನಾದ ಸೈನಿಕರು ಪಂಗೊಂಗ್ ತ್ಸೋ ಸರೋವರ ಪ್ರದೇಶದಲ್ಲಿ ಕಬ್ಬಿಣದ ಸ್ಟಿಕ್ಕುಗಲು, ಕೋಲುಗಳಿಂದ ಘರ್ಷಣೆ ನಡೆಸಿ,  ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದರು.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...