Homeಅಂತರಾಷ್ಟ್ರೀಯಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

- Advertisement -
- Advertisement -

ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎಂದು ವರದಿಯಾಗಿದೆ.

ಚೀನಾದ ಸೈನ್ಯವು ಸುಮಾರು 2,000 ದಿಂದ 2,500 ಸೈನಿಕರನ್ನು ನಿಯೋಜಿಸುತ್ತಿದೆ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಎರಡು ವಿವಾದಾಸ್ಪದ ಪ್ರದೇಶಗಳಾದ ಪಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಉನ್ನತ ಮಿಲಿಟರಿ ಮೂಲಗಳು ತಿಳಿಸಿವೆ.

“ಈ ಪ್ರದೇಶದಲ್ಲಿ ಭಾರತೀಯ ಸೇನೆಯ ಸಾಮರ್ಥ್ಯವು ನಮ್ಮ ಎದುರಾಳಿಗಿಂತ ಉತ್ತಮವಾಗಿದೆ” ಎಂದು ಮಿಲಿಟರಿ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಇದು ಗಂಭೀರವಾಗಿದೆ, ಇದು ಸಾಮಾನ್ಯ ರೀತಿಯ ಉಲ್ಲಂಘನೆಯಲ್ಲ” ಎಂದು ಉತ್ತರ ಸೇನೆಯ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಡಿ.ಎಸ್. ಹೂಡಾ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲದ ಕಾರಣ ಗಾಲ್ವಾನ್‌ನಂತಹ ಪ್ರದೇಶಗಳಿಗೆ ಚೀನಾ ಅತಿಕ್ರಮಣಕ್ಕೆ ಚಿಂತಿಸುತ್ತಿದೆ ಎಂದು ಅವರು ವಿಶೇಷವಾಗಿ ಒತ್ತಿ ಹೇಳಿದ್ದಾರೆ.

ಕಾರ್ಯತಂತ್ರ ವ್ಯವಹಾರಗಳ ತಜ್ಞ ರಾಯಭಾರಿ ಅಶೋಕ್ ಕೆ ಕಾಂತಾ ಅವರು ಲೆಫ್ಟಿನೆಂಟ್ ಜನರಲ್ ಹೂಡಾ ಅವರ ವಾದವನ್ನು ಒಪ್ಪಿ, “ಚೀನಾದ ಸೈನ್ಯದಿಂದ ಅನೇಕ ಆಕ್ರಮಣಗಳು ನಡೆದಿವೆ. ಇದು ಕಳವಳಕ್ಕೆ ಕಾರಣವಾಗಿದೆ. ಇದು ದಿನನಿತ್ಯದ ನಿಲುಗಡೆಯಲ್ಲ. ಇದು ಗೊಂದಲದ ಪರಿಸ್ಥಿತಿ” ಎಂದು ಕಾಂತಾ ಹೇಳಿದರು.

ಎರಡು ಸೇನೆಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಹರಿಸಲು ರಾಜತಾಂತ್ರಿಕ ಪ್ರಯತ್ನಗಳನ್ನು ಹೆಚ್ಚಿಸಬೇಕು ಮತ್ತು ಪಾಂಗೊಂಗ್ ತ್ಸೊ, ಡೆಮ್‌ಚಾಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಎರಡೂ ಕಡೆಯ ಸೈನಿಕರು ಮುಖಾಮುಖಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಕಡೆಯವರು ವಿಶೇಷವಾಗಿ ಗಾಲ್ವಾನ್ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಮಾರು 100 ಡೇರೆಗಳನ್ನು ನಿರ್ಮಿಸಿದ್ದಾರೆ ಮತ್ತು ಬಂಕರ್‌ಗಳ ನಿರ್ಮಾಣಕ್ಕಾಗಿ ಭಾರೀ ಉಪಕರಣಗಳನ್ನು ತಂದಿದ್ದಾರೆ. ಡೆಮ್ಚೋಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ಪಡೆಗಳು ಗಸ್ತು ತಿರುಗಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಮೇ 9 ರಂದು ಉತ್ತರ ಸಿಕ್ಕಿಂನಲ್ಲಿ ಇದೇ ರೀತಿಯ ಘಟನೆ ಹಾಗೂ ಪಾಂಗೊಂಗ್ ತ್ಸೊದಲ್ಲಿ ನಡೆದ ಘಟನೆಯ ನಂತರ, ಚೀನಾ ಮಿಲಿಟರಿ ತನ್ನ ಸೈನಿಕರಿಂದಾಗಿ ಸಾಮಾನ್ಯ ಗಸ್ತು ತಿರುಗಲು ಅಡ್ಡಿಯಾಗುತ್ತಿದೆ ಎಂದು ಭಾರತ ಕಳೆದ ವಾರ ಹೇಳಿದೆ. ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ಮಾರ್ಗವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ಭಾರತೀಯ ಪಡೆಗಳ ಅತಿಕ್ರಮಣದಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂಬ ಚೀನಾದ ವಾದವನ್ನು ಬಲವಾಗಿ ನಿರಾಕರಿಸಿದರು.

ಸಿಕ್ಕಿಂ ಮತ್ತು ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನವನ್ನು ಭಾರತೀಯ ಸೈನ್ಯ ನಡೆಸುತ್ತಿದೆ ಎಂದು ಚೀನಾ ಆರೋಪಿಸಿದ ಎರಡು ದಿನಗಳ ನಂತರ ಭಾರತದ ಪ್ರತಿಕ್ರಿಯೆ ಹೊರಬಿದ್ದಿದೆ.

ಮೇ 5 ರಂದು, ಭಾರತೀಯ ಮತ್ತು ಚೀನಾದ ಸೈನಿಕರು ಪಂಗೊಂಗ್ ತ್ಸೋ ಸರೋವರ ಪ್ರದೇಶದಲ್ಲಿ ಕಬ್ಬಿಣದ ಸ್ಟಿಕ್ಕುಗಲು, ಕೋಲುಗಳಿಂದ ಘರ್ಷಣೆ ನಡೆಸಿ,  ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದರು.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....