Homeಅಂತರಾಷ್ಟ್ರೀಯಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

- Advertisement -
- Advertisement -

ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎಂದು ವರದಿಯಾಗಿದೆ.

ಚೀನಾದ ಸೈನ್ಯವು ಸುಮಾರು 2,000 ದಿಂದ 2,500 ಸೈನಿಕರನ್ನು ನಿಯೋಜಿಸುತ್ತಿದೆ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಎರಡು ವಿವಾದಾಸ್ಪದ ಪ್ರದೇಶಗಳಾದ ಪಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಉನ್ನತ ಮಿಲಿಟರಿ ಮೂಲಗಳು ತಿಳಿಸಿವೆ.

“ಈ ಪ್ರದೇಶದಲ್ಲಿ ಭಾರತೀಯ ಸೇನೆಯ ಸಾಮರ್ಥ್ಯವು ನಮ್ಮ ಎದುರಾಳಿಗಿಂತ ಉತ್ತಮವಾಗಿದೆ” ಎಂದು ಮಿಲಿಟರಿ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಇದು ಗಂಭೀರವಾಗಿದೆ, ಇದು ಸಾಮಾನ್ಯ ರೀತಿಯ ಉಲ್ಲಂಘನೆಯಲ್ಲ” ಎಂದು ಉತ್ತರ ಸೇನೆಯ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಡಿ.ಎಸ್. ಹೂಡಾ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲದ ಕಾರಣ ಗಾಲ್ವಾನ್‌ನಂತಹ ಪ್ರದೇಶಗಳಿಗೆ ಚೀನಾ ಅತಿಕ್ರಮಣಕ್ಕೆ ಚಿಂತಿಸುತ್ತಿದೆ ಎಂದು ಅವರು ವಿಶೇಷವಾಗಿ ಒತ್ತಿ ಹೇಳಿದ್ದಾರೆ.

ಕಾರ್ಯತಂತ್ರ ವ್ಯವಹಾರಗಳ ತಜ್ಞ ರಾಯಭಾರಿ ಅಶೋಕ್ ಕೆ ಕಾಂತಾ ಅವರು ಲೆಫ್ಟಿನೆಂಟ್ ಜನರಲ್ ಹೂಡಾ ಅವರ ವಾದವನ್ನು ಒಪ್ಪಿ, “ಚೀನಾದ ಸೈನ್ಯದಿಂದ ಅನೇಕ ಆಕ್ರಮಣಗಳು ನಡೆದಿವೆ. ಇದು ಕಳವಳಕ್ಕೆ ಕಾರಣವಾಗಿದೆ. ಇದು ದಿನನಿತ್ಯದ ನಿಲುಗಡೆಯಲ್ಲ. ಇದು ಗೊಂದಲದ ಪರಿಸ್ಥಿತಿ” ಎಂದು ಕಾಂತಾ ಹೇಳಿದರು.

ಎರಡು ಸೇನೆಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಹರಿಸಲು ರಾಜತಾಂತ್ರಿಕ ಪ್ರಯತ್ನಗಳನ್ನು ಹೆಚ್ಚಿಸಬೇಕು ಮತ್ತು ಪಾಂಗೊಂಗ್ ತ್ಸೊ, ಡೆಮ್‌ಚಾಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಎರಡೂ ಕಡೆಯ ಸೈನಿಕರು ಮುಖಾಮುಖಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಕಡೆಯವರು ವಿಶೇಷವಾಗಿ ಗಾಲ್ವಾನ್ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಮಾರು 100 ಡೇರೆಗಳನ್ನು ನಿರ್ಮಿಸಿದ್ದಾರೆ ಮತ್ತು ಬಂಕರ್‌ಗಳ ನಿರ್ಮಾಣಕ್ಕಾಗಿ ಭಾರೀ ಉಪಕರಣಗಳನ್ನು ತಂದಿದ್ದಾರೆ. ಡೆಮ್ಚೋಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ಪಡೆಗಳು ಗಸ್ತು ತಿರುಗಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಮೇ 9 ರಂದು ಉತ್ತರ ಸಿಕ್ಕಿಂನಲ್ಲಿ ಇದೇ ರೀತಿಯ ಘಟನೆ ಹಾಗೂ ಪಾಂಗೊಂಗ್ ತ್ಸೊದಲ್ಲಿ ನಡೆದ ಘಟನೆಯ ನಂತರ, ಚೀನಾ ಮಿಲಿಟರಿ ತನ್ನ ಸೈನಿಕರಿಂದಾಗಿ ಸಾಮಾನ್ಯ ಗಸ್ತು ತಿರುಗಲು ಅಡ್ಡಿಯಾಗುತ್ತಿದೆ ಎಂದು ಭಾರತ ಕಳೆದ ವಾರ ಹೇಳಿದೆ. ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ಮಾರ್ಗವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ಭಾರತೀಯ ಪಡೆಗಳ ಅತಿಕ್ರಮಣದಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂಬ ಚೀನಾದ ವಾದವನ್ನು ಬಲವಾಗಿ ನಿರಾಕರಿಸಿದರು.

ಸಿಕ್ಕಿಂ ಮತ್ತು ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನವನ್ನು ಭಾರತೀಯ ಸೈನ್ಯ ನಡೆಸುತ್ತಿದೆ ಎಂದು ಚೀನಾ ಆರೋಪಿಸಿದ ಎರಡು ದಿನಗಳ ನಂತರ ಭಾರತದ ಪ್ರತಿಕ್ರಿಯೆ ಹೊರಬಿದ್ದಿದೆ.

ಮೇ 5 ರಂದು, ಭಾರತೀಯ ಮತ್ತು ಚೀನಾದ ಸೈನಿಕರು ಪಂಗೊಂಗ್ ತ್ಸೋ ಸರೋವರ ಪ್ರದೇಶದಲ್ಲಿ ಕಬ್ಬಿಣದ ಸ್ಟಿಕ್ಕುಗಲು, ಕೋಲುಗಳಿಂದ ಘರ್ಷಣೆ ನಡೆಸಿ,  ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದರು.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...