Homeಅಂತರಾಷ್ಟ್ರೀಯಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

- Advertisement -
- Advertisement -

ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎಂದು ವರದಿಯಾಗಿದೆ.

ಚೀನಾದ ಸೈನ್ಯವು ಸುಮಾರು 2,000 ದಿಂದ 2,500 ಸೈನಿಕರನ್ನು ನಿಯೋಜಿಸುತ್ತಿದೆ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಎರಡು ವಿವಾದಾಸ್ಪದ ಪ್ರದೇಶಗಳಾದ ಪಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಉನ್ನತ ಮಿಲಿಟರಿ ಮೂಲಗಳು ತಿಳಿಸಿವೆ.

“ಈ ಪ್ರದೇಶದಲ್ಲಿ ಭಾರತೀಯ ಸೇನೆಯ ಸಾಮರ್ಥ್ಯವು ನಮ್ಮ ಎದುರಾಳಿಗಿಂತ ಉತ್ತಮವಾಗಿದೆ” ಎಂದು ಮಿಲಿಟರಿ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಇದು ಗಂಭೀರವಾಗಿದೆ, ಇದು ಸಾಮಾನ್ಯ ರೀತಿಯ ಉಲ್ಲಂಘನೆಯಲ್ಲ” ಎಂದು ಉತ್ತರ ಸೇನೆಯ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಡಿ.ಎಸ್. ಹೂಡಾ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲದ ಕಾರಣ ಗಾಲ್ವಾನ್‌ನಂತಹ ಪ್ರದೇಶಗಳಿಗೆ ಚೀನಾ ಅತಿಕ್ರಮಣಕ್ಕೆ ಚಿಂತಿಸುತ್ತಿದೆ ಎಂದು ಅವರು ವಿಶೇಷವಾಗಿ ಒತ್ತಿ ಹೇಳಿದ್ದಾರೆ.

ಕಾರ್ಯತಂತ್ರ ವ್ಯವಹಾರಗಳ ತಜ್ಞ ರಾಯಭಾರಿ ಅಶೋಕ್ ಕೆ ಕಾಂತಾ ಅವರು ಲೆಫ್ಟಿನೆಂಟ್ ಜನರಲ್ ಹೂಡಾ ಅವರ ವಾದವನ್ನು ಒಪ್ಪಿ, “ಚೀನಾದ ಸೈನ್ಯದಿಂದ ಅನೇಕ ಆಕ್ರಮಣಗಳು ನಡೆದಿವೆ. ಇದು ಕಳವಳಕ್ಕೆ ಕಾರಣವಾಗಿದೆ. ಇದು ದಿನನಿತ್ಯದ ನಿಲುಗಡೆಯಲ್ಲ. ಇದು ಗೊಂದಲದ ಪರಿಸ್ಥಿತಿ” ಎಂದು ಕಾಂತಾ ಹೇಳಿದರು.

ಎರಡು ಸೇನೆಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಹರಿಸಲು ರಾಜತಾಂತ್ರಿಕ ಪ್ರಯತ್ನಗಳನ್ನು ಹೆಚ್ಚಿಸಬೇಕು ಮತ್ತು ಪಾಂಗೊಂಗ್ ತ್ಸೊ, ಡೆಮ್‌ಚಾಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಎರಡೂ ಕಡೆಯ ಸೈನಿಕರು ಮುಖಾಮುಖಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಕಡೆಯವರು ವಿಶೇಷವಾಗಿ ಗಾಲ್ವಾನ್ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಮಾರು 100 ಡೇರೆಗಳನ್ನು ನಿರ್ಮಿಸಿದ್ದಾರೆ ಮತ್ತು ಬಂಕರ್‌ಗಳ ನಿರ್ಮಾಣಕ್ಕಾಗಿ ಭಾರೀ ಉಪಕರಣಗಳನ್ನು ತಂದಿದ್ದಾರೆ. ಡೆಮ್ಚೋಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ಪಡೆಗಳು ಗಸ್ತು ತಿರುಗಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಮೇ 9 ರಂದು ಉತ್ತರ ಸಿಕ್ಕಿಂನಲ್ಲಿ ಇದೇ ರೀತಿಯ ಘಟನೆ ಹಾಗೂ ಪಾಂಗೊಂಗ್ ತ್ಸೊದಲ್ಲಿ ನಡೆದ ಘಟನೆಯ ನಂತರ, ಚೀನಾ ಮಿಲಿಟರಿ ತನ್ನ ಸೈನಿಕರಿಂದಾಗಿ ಸಾಮಾನ್ಯ ಗಸ್ತು ತಿರುಗಲು ಅಡ್ಡಿಯಾಗುತ್ತಿದೆ ಎಂದು ಭಾರತ ಕಳೆದ ವಾರ ಹೇಳಿದೆ. ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ಮಾರ್ಗವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ಭಾರತೀಯ ಪಡೆಗಳ ಅತಿಕ್ರಮಣದಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂಬ ಚೀನಾದ ವಾದವನ್ನು ಬಲವಾಗಿ ನಿರಾಕರಿಸಿದರು.

ಸಿಕ್ಕಿಂ ಮತ್ತು ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನವನ್ನು ಭಾರತೀಯ ಸೈನ್ಯ ನಡೆಸುತ್ತಿದೆ ಎಂದು ಚೀನಾ ಆರೋಪಿಸಿದ ಎರಡು ದಿನಗಳ ನಂತರ ಭಾರತದ ಪ್ರತಿಕ್ರಿಯೆ ಹೊರಬಿದ್ದಿದೆ.

ಮೇ 5 ರಂದು, ಭಾರತೀಯ ಮತ್ತು ಚೀನಾದ ಸೈನಿಕರು ಪಂಗೊಂಗ್ ತ್ಸೋ ಸರೋವರ ಪ್ರದೇಶದಲ್ಲಿ ಕಬ್ಬಿಣದ ಸ್ಟಿಕ್ಕುಗಲು, ಕೋಲುಗಳಿಂದ ಘರ್ಷಣೆ ನಡೆಸಿ,  ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದರು.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...