Homeಕ್ರೀಡೆಕ್ರಿಕೆಟ್ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ...

ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿ ಅಭಿಮತ

ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ.

- Advertisement -
- Advertisement -

ಭಾರತದ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪುರುಷರ ತಂಡಕ್ಕೆ ನೀಡುತ್ತಿರುವಷ್ಟೇ ಸಮಾನ ವೇತನ ನೀಡುವುದಾಗಿ ಬಿಸಿಸಿಐ ತೀರ್ಮಾನ ತೆಗೆದುಕೊಂಡಿದೆ. ‘ಪೆ ಇಕ್ವಿಟಿ ಪಾಲಿಸಿ’ಯನ್ನು ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ಕೊನೆಗೂ ಫಲಿಸುತ್ತಿದೆ. ಈ ಯೋಜನೆಯು ದೇಶಿಯ ಮಹಿಳಾ ಆಟಗಾರ್ತಿಯರಿಗೂ ವಿಸ್ತರಿಸಬೇಕು ಎನ್ನುತ್ತಾರೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿಯವರು.

ಭಾರತ ಮಹಿಳಾ ಟೆಸ್ಟ್ ಕ್ರಿಕೆಟ್ ತಂಡದ ಮೊದಲ ನಾಯಕಿ, ಅರ್ಜುನ ಪ್ರಶಸ್ತಿ ಪಡೆದ ಮೊದಲ ಮಹಿಳೆ, ಬಿಸಿಸಿಐನಿಂದ ಜೀವಮಾನದ ಸಾಧನೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡ ಶಾಂತ ರಂಗಸ್ವಾಮಿಯವರು ಬಿಸಿಸಿಐ ನಿರ್ಧಾರದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

“ಬಿಸಿಸಿಐ ಖಂಡಿತವಾಗಿಯೂ ಒಳ್ಳೆಯ ತೀರ್ಮಾನ ಕೈಗೊಂಡಿದೆ. ಇಂದಿನ ಸಭೆಯಲ್ಲಿ ನಾನು ಇದ್ದೆ. ಅದು ಬಿಸಿಸಿಐನಲ್ಲಿ ನನ್ನ ಕೊನೆಯ ಸಭೆಯಾಗಿತ್ತು. ಅಲ್ಲಿ ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ನೀಡುವ ತೀರ್ಮಾನ ತೆಗೆದುಕೊಂಡಿದ್ದು ನನಗೆ ಬಿಳ್ಕೊಡುಗೆ ಉಡುಗೊರೆಯಂತಿತ್ತು” ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಭಾರತಕ್ಕಿಂತ ಮುಂಚೆನೇ ಮಹಿಳಾ ಕ್ರಿಕೆಟ್ ತಂಡ ಕಟ್ಟಿದ್ದರು. ಆದರೂ ಅವರಿನ್ನು ಇಂತಹ ಸಮಾನ ವೇತನದ ತೀರ್ಮಾನ ತೆಗೆದುಕೊಂಡಿಲ್ಲ. ಆದರೆ ನ್ಯೂಜಿಲೆಂಡ್ ಮತ್ತು ಭಾರತ ಈ ನಿರ್ಧಾರ ತೆಗೆದುಕೊಂಡಿರುವುದು ನಾವು ಸರಿಯಾದ ದಿಕ್ಕಿನಲ್ಲಿ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ ಎಂದರು.

ಆದರೆ ದೇಶೀಯ ಕ್ರಿಕೆಟ್ ಆಟಗಾರ್ತಿಯರಿಗೂ ಈ ಸೌಲಭ್ಯ ದೊರೆಯಬೇಕಿದೆ. ಏಕೆಂದರೆ ಇಂದಿನ ತೀರ್ಮಾನದಿಂದ ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡಿರುವ 20-25 ಆಟಗಾರ್ತಿಯರಿಗೆ ಮಾತ್ರ ಸಮಾನ ವೇತನ ದೊರೆಯುತ್ತದೆ. ಆದರೆ ನಮ್ಮ ದೇಶೀಯ ಕ್ರಿಕೆಟ್‌ನಲ್ಲಿ ಆ ತೀರ್ಮಾನ ತೆಗೆದುಕೊಂಡರೆ ಸುಮಾರು 300-400 ಆಟಗಾರ್ತಿಯರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಇವತ್ತಿನ ಸಭೆಯಲ್ಲಿ ದೇಶೀಯ ಕ್ರಿಕೆಟ್‌ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕೆಂದು ಪ್ರಸ್ತಾಪಿಸಿದ್ದೇನೆ. ಹಂತ ಹಂತವಾಗಿ ಜಾರಿಗೊಳಿಸುವ ಭರವಸೆ ಸಿಕ್ಕಿದೆ. ಸದ್ಯದ ತೀರ್ಮಾನದಿಂದ ಬಿಸಿಸಿಐಗೆ ವಾರ್ಷಿಕ 10 ಕೋಟಿ ರೂ ಹೆಚ್ಚು ಖರ್ಚು ಬರುತ್ತದೆ. ಆದರೆ ದೇಶೀಯ ಆಟಗಾರ್ತಿಯರಿಗೂ ವಿಸ್ತರಿಸಿದರೆ ಸುಮಾರು 50 ಕೋಟಿ ರೂವರೆಗೂ ಹೆಚ್ಚಿನ ಖರ್ಚು ಬರುತ್ತದೆ. ಅದಕ್ಕಾಗಿ ಬಿಸಿಸಿಐ ಹಣ ಒದಗಿಸುವ ಯೋಜನೆ ಮಾಡಬೇಕಿದೆ. ಒಟ್ಟಿನಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿಸಿಸಿಐ ಉತ್ತಮ ಹೆಜ್ಜೆ ಇಟ್ಟಿದೆ ಎಂದರು.

ಈ ತೀರ್ಮಾನದಿಂದ ಮತ್ತಷ್ಟು ಮಹಿಳೆಯರು ಭಾರತೀಯ ತಂಡಕ್ಕೆ ಆಡಬೇಕೆಂದು ಮುಂದೆ ಬರುತ್ತಾರೆ. ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಮಹಿಳಾ ಐಪಿಎಲ್ ಸ್ವಾಹತಾರ್ಹ ನಡೆ

2023ರಲ್ಲಿ ಮಹಿಳಾ ಐಪಿಎಲ್ ಆಯೋಜಿಸುತ್ತಿರುವುದು ಬಹಳ ಸ್ವಾಗತಾರ್ಹ ಕ್ರಮವಾಗಿದೆ. ಆರಂಭದಲ್ಲಿ 5 ತಂಡಗಳು ಇರುವುದರಿಂದ ಕನಿಷ್ಟ 50 ರಿಂದ 60 ಭಾರತೀಯ ಆಟಗಾರ್ತಿಯರ ಪ್ರತಿಭೆ ಗುರುತಿಸಲು ಅದು ವೇದಿಕೆಯಾಗುತ್ತದೆ. ಅವರೆಲ್ಲವರೂ ಅಂತರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಸಿಗುತ್ತದೆ ಮತ್ತು ಅಲ್ಲಿನ ವೇತನವೂ ಹೆಚ್ಚಿರುವುದು ಮಹಿಳಾ ಆಟಗಾರ್ತಿಯರಿಗೆ ಅತ್ಯುತ್ತಮ ಪ್ರೋತ್ಸಾಹವಾಗಿದೆ ಎಂದರು.

ದೇಶೀಯ ಕ್ರಿಕೆಟ್‌ನಲ್ಲಿ ಸೀನಿಯರ್ ಆಟಗಾರ್ತಿಯರಿಗೆ ದಿನಕ್ಕೆ 12,500 ರೂ ನಷ್ಟು ಮಾತ್ರ ವೇತನವಿದೆ. ಜೂನಿಯರ್‌ಗಳಿಗೆ ಅದರಲ್ಲಿ ಅರ್ಧ ಇದೆ. ಇಂತಹ ಪರಿಸ್ಥಿತಿಯಲ್ಲಿ ಅವರು ತಮ್ಮ ಸ್ವಂತ ಹಣ ಖರ್ಚು ಮಾಡಿ ತರಬೇತಿ ಪಡೆದು ಆಡುವುದು ಕಷ್ಟದ ಕೆಲಸ. ಹಾಗಾಗಿ ಐಪಿಎಲ್ ನಿಂದ ಅವರಿಗೆಲ್ಲ ಅನುಕೂಲವಾಗಲಿದೆ ಎಂದರು.

ಭಾರತೀಯ ಮಹಿಳಾ ತಂಡ 2005ರಲ್ಲಿಯೇ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿತ್ತು. ಬಿಸಿಸಿಐ ನೊಂದಿಗೆ ವಿಲೀನಗೊಂಡ ನಂತರ ಮಹಿಳಾ ತಂಡಕ್ಕೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. 2020ರಲ್ಲಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ತಲುಪಿತ್ತು. ಇತ್ತೀಚೆಗೆ ಏಷ್ಯಾ ಕಪ್ ಗೆದ್ದಿದೆ. ಹಾಗಾಗಿ ಮಹಿಳಾ ತಂಡ ಉತ್ತಮ ಪ್ರದರ್ಶನ ತೋರುತ್ತಿರುವಾಗಲೇ ಸಮಾನ ವೇತನ ಜಾರಿಯಾಗಿದ್ದು, ಮಹಿಳಾ ಐಪಿಎಲ್ ಘೋಷಣೆಯಾಗಿದ್ದು ಸಂತಸದ ವಿಚಾರ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರ್ತಿಯರು ಸಹ ಇನ್ನು ಮುಂದೆ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯಲಿದ್ದಾರೆ. ಈ ನಿಯಮವೂ ದೇಶೀಯ ಕ್ರಿಕೆಟ್‌ನಲ್ಲಿಯೂ ಜಾರಿಯಾದರೆ ಭಾರತದಂತಹ ದೊಡ್ಡ ದೇಶದಲ್ಲಿ ಮತ್ತಷ್ಟು ಕ್ರಿಕೆಟ್ ಪ್ರತಿಭೆಗಳು ಹೊರಬರುವುದು ಖಚಿತ.

ಇದನ್ನೂ ಓದಿ: ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...