Homeಕ್ರೀಡೆಕ್ರಿಕೆಟ್ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ...

ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿ ಅಭಿಮತ

ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ.

- Advertisement -
- Advertisement -

ಭಾರತದ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪುರುಷರ ತಂಡಕ್ಕೆ ನೀಡುತ್ತಿರುವಷ್ಟೇ ಸಮಾನ ವೇತನ ನೀಡುವುದಾಗಿ ಬಿಸಿಸಿಐ ತೀರ್ಮಾನ ತೆಗೆದುಕೊಂಡಿದೆ. ‘ಪೆ ಇಕ್ವಿಟಿ ಪಾಲಿಸಿ’ಯನ್ನು ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ಕೊನೆಗೂ ಫಲಿಸುತ್ತಿದೆ. ಈ ಯೋಜನೆಯು ದೇಶಿಯ ಮಹಿಳಾ ಆಟಗಾರ್ತಿಯರಿಗೂ ವಿಸ್ತರಿಸಬೇಕು ಎನ್ನುತ್ತಾರೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿಯವರು.

ಭಾರತ ಮಹಿಳಾ ಟೆಸ್ಟ್ ಕ್ರಿಕೆಟ್ ತಂಡದ ಮೊದಲ ನಾಯಕಿ, ಅರ್ಜುನ ಪ್ರಶಸ್ತಿ ಪಡೆದ ಮೊದಲ ಮಹಿಳೆ, ಬಿಸಿಸಿಐನಿಂದ ಜೀವಮಾನದ ಸಾಧನೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡ ಶಾಂತ ರಂಗಸ್ವಾಮಿಯವರು ಬಿಸಿಸಿಐ ನಿರ್ಧಾರದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

“ಬಿಸಿಸಿಐ ಖಂಡಿತವಾಗಿಯೂ ಒಳ್ಳೆಯ ತೀರ್ಮಾನ ಕೈಗೊಂಡಿದೆ. ಇಂದಿನ ಸಭೆಯಲ್ಲಿ ನಾನು ಇದ್ದೆ. ಅದು ಬಿಸಿಸಿಐನಲ್ಲಿ ನನ್ನ ಕೊನೆಯ ಸಭೆಯಾಗಿತ್ತು. ಅಲ್ಲಿ ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ನೀಡುವ ತೀರ್ಮಾನ ತೆಗೆದುಕೊಂಡಿದ್ದು ನನಗೆ ಬಿಳ್ಕೊಡುಗೆ ಉಡುಗೊರೆಯಂತಿತ್ತು” ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಭಾರತಕ್ಕಿಂತ ಮುಂಚೆನೇ ಮಹಿಳಾ ಕ್ರಿಕೆಟ್ ತಂಡ ಕಟ್ಟಿದ್ದರು. ಆದರೂ ಅವರಿನ್ನು ಇಂತಹ ಸಮಾನ ವೇತನದ ತೀರ್ಮಾನ ತೆಗೆದುಕೊಂಡಿಲ್ಲ. ಆದರೆ ನ್ಯೂಜಿಲೆಂಡ್ ಮತ್ತು ಭಾರತ ಈ ನಿರ್ಧಾರ ತೆಗೆದುಕೊಂಡಿರುವುದು ನಾವು ಸರಿಯಾದ ದಿಕ್ಕಿನಲ್ಲಿ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ ಎಂದರು.

ಆದರೆ ದೇಶೀಯ ಕ್ರಿಕೆಟ್ ಆಟಗಾರ್ತಿಯರಿಗೂ ಈ ಸೌಲಭ್ಯ ದೊರೆಯಬೇಕಿದೆ. ಏಕೆಂದರೆ ಇಂದಿನ ತೀರ್ಮಾನದಿಂದ ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡಿರುವ 20-25 ಆಟಗಾರ್ತಿಯರಿಗೆ ಮಾತ್ರ ಸಮಾನ ವೇತನ ದೊರೆಯುತ್ತದೆ. ಆದರೆ ನಮ್ಮ ದೇಶೀಯ ಕ್ರಿಕೆಟ್‌ನಲ್ಲಿ ಆ ತೀರ್ಮಾನ ತೆಗೆದುಕೊಂಡರೆ ಸುಮಾರು 300-400 ಆಟಗಾರ್ತಿಯರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಇವತ್ತಿನ ಸಭೆಯಲ್ಲಿ ದೇಶೀಯ ಕ್ರಿಕೆಟ್‌ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕೆಂದು ಪ್ರಸ್ತಾಪಿಸಿದ್ದೇನೆ. ಹಂತ ಹಂತವಾಗಿ ಜಾರಿಗೊಳಿಸುವ ಭರವಸೆ ಸಿಕ್ಕಿದೆ. ಸದ್ಯದ ತೀರ್ಮಾನದಿಂದ ಬಿಸಿಸಿಐಗೆ ವಾರ್ಷಿಕ 10 ಕೋಟಿ ರೂ ಹೆಚ್ಚು ಖರ್ಚು ಬರುತ್ತದೆ. ಆದರೆ ದೇಶೀಯ ಆಟಗಾರ್ತಿಯರಿಗೂ ವಿಸ್ತರಿಸಿದರೆ ಸುಮಾರು 50 ಕೋಟಿ ರೂವರೆಗೂ ಹೆಚ್ಚಿನ ಖರ್ಚು ಬರುತ್ತದೆ. ಅದಕ್ಕಾಗಿ ಬಿಸಿಸಿಐ ಹಣ ಒದಗಿಸುವ ಯೋಜನೆ ಮಾಡಬೇಕಿದೆ. ಒಟ್ಟಿನಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿಸಿಸಿಐ ಉತ್ತಮ ಹೆಜ್ಜೆ ಇಟ್ಟಿದೆ ಎಂದರು.

ಈ ತೀರ್ಮಾನದಿಂದ ಮತ್ತಷ್ಟು ಮಹಿಳೆಯರು ಭಾರತೀಯ ತಂಡಕ್ಕೆ ಆಡಬೇಕೆಂದು ಮುಂದೆ ಬರುತ್ತಾರೆ. ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಮಹಿಳಾ ಐಪಿಎಲ್ ಸ್ವಾಹತಾರ್ಹ ನಡೆ

2023ರಲ್ಲಿ ಮಹಿಳಾ ಐಪಿಎಲ್ ಆಯೋಜಿಸುತ್ತಿರುವುದು ಬಹಳ ಸ್ವಾಗತಾರ್ಹ ಕ್ರಮವಾಗಿದೆ. ಆರಂಭದಲ್ಲಿ 5 ತಂಡಗಳು ಇರುವುದರಿಂದ ಕನಿಷ್ಟ 50 ರಿಂದ 60 ಭಾರತೀಯ ಆಟಗಾರ್ತಿಯರ ಪ್ರತಿಭೆ ಗುರುತಿಸಲು ಅದು ವೇದಿಕೆಯಾಗುತ್ತದೆ. ಅವರೆಲ್ಲವರೂ ಅಂತರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಸಿಗುತ್ತದೆ ಮತ್ತು ಅಲ್ಲಿನ ವೇತನವೂ ಹೆಚ್ಚಿರುವುದು ಮಹಿಳಾ ಆಟಗಾರ್ತಿಯರಿಗೆ ಅತ್ಯುತ್ತಮ ಪ್ರೋತ್ಸಾಹವಾಗಿದೆ ಎಂದರು.

ದೇಶೀಯ ಕ್ರಿಕೆಟ್‌ನಲ್ಲಿ ಸೀನಿಯರ್ ಆಟಗಾರ್ತಿಯರಿಗೆ ದಿನಕ್ಕೆ 12,500 ರೂ ನಷ್ಟು ಮಾತ್ರ ವೇತನವಿದೆ. ಜೂನಿಯರ್‌ಗಳಿಗೆ ಅದರಲ್ಲಿ ಅರ್ಧ ಇದೆ. ಇಂತಹ ಪರಿಸ್ಥಿತಿಯಲ್ಲಿ ಅವರು ತಮ್ಮ ಸ್ವಂತ ಹಣ ಖರ್ಚು ಮಾಡಿ ತರಬೇತಿ ಪಡೆದು ಆಡುವುದು ಕಷ್ಟದ ಕೆಲಸ. ಹಾಗಾಗಿ ಐಪಿಎಲ್ ನಿಂದ ಅವರಿಗೆಲ್ಲ ಅನುಕೂಲವಾಗಲಿದೆ ಎಂದರು.

ಭಾರತೀಯ ಮಹಿಳಾ ತಂಡ 2005ರಲ್ಲಿಯೇ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿತ್ತು. ಬಿಸಿಸಿಐ ನೊಂದಿಗೆ ವಿಲೀನಗೊಂಡ ನಂತರ ಮಹಿಳಾ ತಂಡಕ್ಕೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. 2020ರಲ್ಲಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ತಲುಪಿತ್ತು. ಇತ್ತೀಚೆಗೆ ಏಷ್ಯಾ ಕಪ್ ಗೆದ್ದಿದೆ. ಹಾಗಾಗಿ ಮಹಿಳಾ ತಂಡ ಉತ್ತಮ ಪ್ರದರ್ಶನ ತೋರುತ್ತಿರುವಾಗಲೇ ಸಮಾನ ವೇತನ ಜಾರಿಯಾಗಿದ್ದು, ಮಹಿಳಾ ಐಪಿಎಲ್ ಘೋಷಣೆಯಾಗಿದ್ದು ಸಂತಸದ ವಿಚಾರ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರ್ತಿಯರು ಸಹ ಇನ್ನು ಮುಂದೆ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯಲಿದ್ದಾರೆ. ಈ ನಿಯಮವೂ ದೇಶೀಯ ಕ್ರಿಕೆಟ್‌ನಲ್ಲಿಯೂ ಜಾರಿಯಾದರೆ ಭಾರತದಂತಹ ದೊಡ್ಡ ದೇಶದಲ್ಲಿ ಮತ್ತಷ್ಟು ಕ್ರಿಕೆಟ್ ಪ್ರತಿಭೆಗಳು ಹೊರಬರುವುದು ಖಚಿತ.

ಇದನ್ನೂ ಓದಿ: ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...