Homeಕ್ರೀಡೆಕ್ರಿಕೆಟ್ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ...

ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿ ಅಭಿಮತ

ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ.

- Advertisement -
- Advertisement -

ಭಾರತದ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪುರುಷರ ತಂಡಕ್ಕೆ ನೀಡುತ್ತಿರುವಷ್ಟೇ ಸಮಾನ ವೇತನ ನೀಡುವುದಾಗಿ ಬಿಸಿಸಿಐ ತೀರ್ಮಾನ ತೆಗೆದುಕೊಂಡಿದೆ. ‘ಪೆ ಇಕ್ವಿಟಿ ಪಾಲಿಸಿ’ಯನ್ನು ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ಕೊನೆಗೂ ಫಲಿಸುತ್ತಿದೆ. ಈ ಯೋಜನೆಯು ದೇಶಿಯ ಮಹಿಳಾ ಆಟಗಾರ್ತಿಯರಿಗೂ ವಿಸ್ತರಿಸಬೇಕು ಎನ್ನುತ್ತಾರೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿಯವರು.

ಭಾರತ ಮಹಿಳಾ ಟೆಸ್ಟ್ ಕ್ರಿಕೆಟ್ ತಂಡದ ಮೊದಲ ನಾಯಕಿ, ಅರ್ಜುನ ಪ್ರಶಸ್ತಿ ಪಡೆದ ಮೊದಲ ಮಹಿಳೆ, ಬಿಸಿಸಿಐನಿಂದ ಜೀವಮಾನದ ಸಾಧನೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡ ಶಾಂತ ರಂಗಸ್ವಾಮಿಯವರು ಬಿಸಿಸಿಐ ನಿರ್ಧಾರದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

“ಬಿಸಿಸಿಐ ಖಂಡಿತವಾಗಿಯೂ ಒಳ್ಳೆಯ ತೀರ್ಮಾನ ಕೈಗೊಂಡಿದೆ. ಇಂದಿನ ಸಭೆಯಲ್ಲಿ ನಾನು ಇದ್ದೆ. ಅದು ಬಿಸಿಸಿಐನಲ್ಲಿ ನನ್ನ ಕೊನೆಯ ಸಭೆಯಾಗಿತ್ತು. ಅಲ್ಲಿ ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ನೀಡುವ ತೀರ್ಮಾನ ತೆಗೆದುಕೊಂಡಿದ್ದು ನನಗೆ ಬಿಳ್ಕೊಡುಗೆ ಉಡುಗೊರೆಯಂತಿತ್ತು” ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಭಾರತಕ್ಕಿಂತ ಮುಂಚೆನೇ ಮಹಿಳಾ ಕ್ರಿಕೆಟ್ ತಂಡ ಕಟ್ಟಿದ್ದರು. ಆದರೂ ಅವರಿನ್ನು ಇಂತಹ ಸಮಾನ ವೇತನದ ತೀರ್ಮಾನ ತೆಗೆದುಕೊಂಡಿಲ್ಲ. ಆದರೆ ನ್ಯೂಜಿಲೆಂಡ್ ಮತ್ತು ಭಾರತ ಈ ನಿರ್ಧಾರ ತೆಗೆದುಕೊಂಡಿರುವುದು ನಾವು ಸರಿಯಾದ ದಿಕ್ಕಿನಲ್ಲಿ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ ಎಂದರು.

ಆದರೆ ದೇಶೀಯ ಕ್ರಿಕೆಟ್ ಆಟಗಾರ್ತಿಯರಿಗೂ ಈ ಸೌಲಭ್ಯ ದೊರೆಯಬೇಕಿದೆ. ಏಕೆಂದರೆ ಇಂದಿನ ತೀರ್ಮಾನದಿಂದ ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡಿರುವ 20-25 ಆಟಗಾರ್ತಿಯರಿಗೆ ಮಾತ್ರ ಸಮಾನ ವೇತನ ದೊರೆಯುತ್ತದೆ. ಆದರೆ ನಮ್ಮ ದೇಶೀಯ ಕ್ರಿಕೆಟ್‌ನಲ್ಲಿ ಆ ತೀರ್ಮಾನ ತೆಗೆದುಕೊಂಡರೆ ಸುಮಾರು 300-400 ಆಟಗಾರ್ತಿಯರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಇವತ್ತಿನ ಸಭೆಯಲ್ಲಿ ದೇಶೀಯ ಕ್ರಿಕೆಟ್‌ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕೆಂದು ಪ್ರಸ್ತಾಪಿಸಿದ್ದೇನೆ. ಹಂತ ಹಂತವಾಗಿ ಜಾರಿಗೊಳಿಸುವ ಭರವಸೆ ಸಿಕ್ಕಿದೆ. ಸದ್ಯದ ತೀರ್ಮಾನದಿಂದ ಬಿಸಿಸಿಐಗೆ ವಾರ್ಷಿಕ 10 ಕೋಟಿ ರೂ ಹೆಚ್ಚು ಖರ್ಚು ಬರುತ್ತದೆ. ಆದರೆ ದೇಶೀಯ ಆಟಗಾರ್ತಿಯರಿಗೂ ವಿಸ್ತರಿಸಿದರೆ ಸುಮಾರು 50 ಕೋಟಿ ರೂವರೆಗೂ ಹೆಚ್ಚಿನ ಖರ್ಚು ಬರುತ್ತದೆ. ಅದಕ್ಕಾಗಿ ಬಿಸಿಸಿಐ ಹಣ ಒದಗಿಸುವ ಯೋಜನೆ ಮಾಡಬೇಕಿದೆ. ಒಟ್ಟಿನಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿಸಿಸಿಐ ಉತ್ತಮ ಹೆಜ್ಜೆ ಇಟ್ಟಿದೆ ಎಂದರು.

ಈ ತೀರ್ಮಾನದಿಂದ ಮತ್ತಷ್ಟು ಮಹಿಳೆಯರು ಭಾರತೀಯ ತಂಡಕ್ಕೆ ಆಡಬೇಕೆಂದು ಮುಂದೆ ಬರುತ್ತಾರೆ. ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಮಹಿಳಾ ಐಪಿಎಲ್ ಸ್ವಾಹತಾರ್ಹ ನಡೆ

2023ರಲ್ಲಿ ಮಹಿಳಾ ಐಪಿಎಲ್ ಆಯೋಜಿಸುತ್ತಿರುವುದು ಬಹಳ ಸ್ವಾಗತಾರ್ಹ ಕ್ರಮವಾಗಿದೆ. ಆರಂಭದಲ್ಲಿ 5 ತಂಡಗಳು ಇರುವುದರಿಂದ ಕನಿಷ್ಟ 50 ರಿಂದ 60 ಭಾರತೀಯ ಆಟಗಾರ್ತಿಯರ ಪ್ರತಿಭೆ ಗುರುತಿಸಲು ಅದು ವೇದಿಕೆಯಾಗುತ್ತದೆ. ಅವರೆಲ್ಲವರೂ ಅಂತರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಸಿಗುತ್ತದೆ ಮತ್ತು ಅಲ್ಲಿನ ವೇತನವೂ ಹೆಚ್ಚಿರುವುದು ಮಹಿಳಾ ಆಟಗಾರ್ತಿಯರಿಗೆ ಅತ್ಯುತ್ತಮ ಪ್ರೋತ್ಸಾಹವಾಗಿದೆ ಎಂದರು.

ದೇಶೀಯ ಕ್ರಿಕೆಟ್‌ನಲ್ಲಿ ಸೀನಿಯರ್ ಆಟಗಾರ್ತಿಯರಿಗೆ ದಿನಕ್ಕೆ 12,500 ರೂ ನಷ್ಟು ಮಾತ್ರ ವೇತನವಿದೆ. ಜೂನಿಯರ್‌ಗಳಿಗೆ ಅದರಲ್ಲಿ ಅರ್ಧ ಇದೆ. ಇಂತಹ ಪರಿಸ್ಥಿತಿಯಲ್ಲಿ ಅವರು ತಮ್ಮ ಸ್ವಂತ ಹಣ ಖರ್ಚು ಮಾಡಿ ತರಬೇತಿ ಪಡೆದು ಆಡುವುದು ಕಷ್ಟದ ಕೆಲಸ. ಹಾಗಾಗಿ ಐಪಿಎಲ್ ನಿಂದ ಅವರಿಗೆಲ್ಲ ಅನುಕೂಲವಾಗಲಿದೆ ಎಂದರು.

ಭಾರತೀಯ ಮಹಿಳಾ ತಂಡ 2005ರಲ್ಲಿಯೇ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿತ್ತು. ಬಿಸಿಸಿಐ ನೊಂದಿಗೆ ವಿಲೀನಗೊಂಡ ನಂತರ ಮಹಿಳಾ ತಂಡಕ್ಕೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. 2020ರಲ್ಲಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ತಲುಪಿತ್ತು. ಇತ್ತೀಚೆಗೆ ಏಷ್ಯಾ ಕಪ್ ಗೆದ್ದಿದೆ. ಹಾಗಾಗಿ ಮಹಿಳಾ ತಂಡ ಉತ್ತಮ ಪ್ರದರ್ಶನ ತೋರುತ್ತಿರುವಾಗಲೇ ಸಮಾನ ವೇತನ ಜಾರಿಯಾಗಿದ್ದು, ಮಹಿಳಾ ಐಪಿಎಲ್ ಘೋಷಣೆಯಾಗಿದ್ದು ಸಂತಸದ ವಿಚಾರ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರ್ತಿಯರು ಸಹ ಇನ್ನು ಮುಂದೆ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯಲಿದ್ದಾರೆ. ಈ ನಿಯಮವೂ ದೇಶೀಯ ಕ್ರಿಕೆಟ್‌ನಲ್ಲಿಯೂ ಜಾರಿಯಾದರೆ ಭಾರತದಂತಹ ದೊಡ್ಡ ದೇಶದಲ್ಲಿ ಮತ್ತಷ್ಟು ಕ್ರಿಕೆಟ್ ಪ್ರತಿಭೆಗಳು ಹೊರಬರುವುದು ಖಚಿತ.

ಇದನ್ನೂ ಓದಿ: ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...