Homeಮುಖಪುಟವಿರೋಧ ಲೆಕ್ಕಿಸದೆ ದೇಗುಲ ಪ್ರವೇಶಿಸಿದ ದಲಿತರು; ದೇವರನ್ನೇ ಹೊರತಂದ ಸವರ್ಣೀಯರು

ವಿರೋಧ ಲೆಕ್ಕಿಸದೆ ದೇಗುಲ ಪ್ರವೇಶಿಸಿದ ದಲಿತರು; ದೇವರನ್ನೇ ಹೊರತಂದ ಸವರ್ಣೀಯರು

- Advertisement -
- Advertisement -

ತಮ್ಮ ವಿರೋಧವನ್ನೂ ಲೆಕ್ಕಿಸದೆ ದಲಿತರು ಕಾಲಭೈರವೇಶ್ವರ ದೇಗುಲ ಪ್ರವೇಶಿಸಿ ಪೂಜೆ ಸಲ್ಲಿಸಿದರು ಎಂಬ ಕಾರಣಕ್ಕೆ ಕೆರಳಿದ ಸವರ್ಣೀಯರು, ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಎಸೆದಿರುವ ಅಮಾನುಷ ಸಾಮೂಹಿಕ ಕೃತ್ಯ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.

2014ರಲ್ಲಿ ದಲಿತರ ವಿರುದ್ಧ ದೌರ್ಜನ್ಯ ಎಸಗಿದ್ದ ಕೊಪ್ಪಳದ ಮರಕುಂಬಿ ಗ್ರಾಮದ 98 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಮಂಡ್ಯದ ಜಾತಿವಾದಿಗಳು ದಲಿತರಿಗೆ ಸಾಮಾಜಿಕ ಸಮಾನತೆಯನ್ನು ನಿರಾಕರಿಸಿದ್ದಾರೆ.

ಪ್ರಸ್ತುತ ಹನಕೆರೆ ಗ್ರಾಮ ಬೂದಿಮುಚ್ಚಿದ ಕೆಂಡದಂತಿದ್ದು, ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕಳೆದ 2 ವರ್ಷಗಳ ಹಿಂದೆ ದೇವಾಲಯ ಪುನರ್ನಿರ್ಮಾಣ ಮಾಡಲಾಗಿತ್ತು. ನಂತರ, ದಲಿತರ ದೇಗುಲ ಪ್ರವೇಶಕ್ಕೆ ಸವರ್ಣೀಯರು ಒಪ್ಪಿಲ್ಲ, ಈ ಕುರಿತಾಗಿ ಎರಡು ಬಾರಿ ನಡೆಸಿದ ಶಾಂತಿ ಸಭೆಯೂ ವಿಫಲವಾಗಿತ್ತು.

ದಲಿತರು ದೇಗುಲ ಪ್ರವೇಶಕ್ಕೆ ಸವರ್ಣೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಗುಲ ಅವರೇ ಇಟ್ಟುಕೊಳ್ಳಲಿ, ದೇವರನ್ನ ತೆಗುದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ. ಈ ಮಧ್ಯೆ ಪೊಲೀಸರ ಭದ್ರತೆ ನಡುವೆ ದಲಿತರು ದೇಗುಲ ಪ್ರವೇಶಿಸಿದ್ದಾರೆ.

ಮಾಜಿ ಶಾಸಕ ಎಂ ಶ್ರೀನಿವಾಸ್ ಸವರ್ಣೀಯರ ಮನವೊಲಿಸಲು ಯತ್ನಿಸಿದ್ದಾರೆ. ತಹಶೀಲ್ದಾರ್, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ ಅಧಿಕಾರಿಗಳು ಮನವೊಲಿಕೆಗೆ ಯತ್ನಿಸಿದ್ದು, ಯಾರ ಮನವಿಗೂ ಗ್ರಾಮಸ್ಥರು ಸ್ಪಂದಿಸುತ್ತಿಲ್ಲ. ಕೊನೆಗೆ ಸರ್ಕಾರಿ ಅಧಿಕಾರಿಗಳು ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದಾರೆ.

ದಲಿತರ ದೇವಾಲಯ ಪ್ರವೇಶಿಸಿದ್ದಾರೆ, ಇನ್ನು ಮುಂದೆ ನಾವು ದೇವಾಲಯ ಪ್ರವೇಶ ಮಾಡುವುದಿಲ್ಲ ಎಂದು ಸವರ್ಣೀಯರು ಕೋಪಗೊಂಡಿದ್ದಾರೆ. ಸದ್ಯಕ್ಕೆ ದೇವಸ್ಥಾನಕ್ಕೆ ಬಾಗಿಲು ಬಂದ್ ಮಾಡಲಾಗಿದ್ದು, ಎಂದಿನಂತೆ  ಸಂಜೆ ತೆರೆಯುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ. ದೇವಸ್ಥಾನ ಪ್ರವೇಶಕ್ಕೆ ಇಲಾಖೆ ಎಲ್ಲರಿಗೂ ಅವಕಾಶ ಮಾಡಿಕೊಟ್ಟಿದೆ. ಸವರ್ಣೀಯರು ಉತ್ಸವ ಮೂರ್ತಿಯನ್ನು ಮತ್ತೊಂದು ಕೋಣೆಯಲ್ಲಿ ಇಟ್ಟಿದ್ದು, ಉತ್ಸವ ಮೂರ್ತಿಯನ್ನ ದೇವಸ್ಥಾನಕ್ಕೆ ಸಾಗಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ.

ಈ ಬಗ್ಗೆ ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರದಾರ್ ಹೇಳಿಕೆ ನೀಡಿದ್ದು, ದೇವಸ್ಥಾನಕ್ಕೆ ಪ್ರವೇಶ ಇಲ್ಲ ಎಂದು ನಮಗೆ ದೂರು ನೀಡಿದ್ದಾರೆ. ದಲಿತರು ತಮಗೆ ಪ್ರವೇಶ ಇಲ್ಲ ಎಂಬ ಬಗ್ಗೆ ನಮಗೆ ಮಾಹಿತಿ ಕೊಟ್ಟಿದ್ದರು. 4 ತಿಂಗಳ ಹಿಂದೆ ಎಲ್ಲರೂ ದೇವಸ್ಥಾನಕ್ಕೆ ಹೋಗುತ್ತಿದ್ದರು. ಕೆಲವು ದಿನಗಳ ಹಿಂದೆ ಇಲ್ಲಿ ಸಮಸ್ಯೆ ಉಂಟಾಗಿದೆ. ಇದು ಮುಜುರಾಯಿ ದೇವಸ್ಥಾನವಾಗಿದ್ದು, ಎಲ್ಲರಿಗೂ ಪ್ರವೇಶಕ್ಕೆ ಅವಕಾಶ ಇದೆ ಎಂದರು.

ಸಮಾಜ ಕಲ್ಯಾಣ ಅಧಿಕಾರಿ ಸಿದ್ದಲಿಂಗಪ್ಪ ಮಾತನಾಡಿ, 4 ತಿಂಗಳಿನಿಂದ ಈ ಸಮಸ್ಯೆ ಇದೆ. ದಲಿತರ ದೇಗುಲ ಪ್ರವೇಶಕ್ಕೆ ಬಿಟ್ಟಿಲ್ಲ. 2 ಬಾರಿ ಸಭೆ ಮಾಡಿ ಗ್ರಾಮಸ್ಥರಿಗೆ ತಿಳಿಸಿದ್ದೇವೆ. ಗ್ರಾಮದಲ್ಲಿರುವ ವಿರೋಧದ ಬಗ್ಗೆ ಮಾಹಿತಿ ನೀಡಿದ್ದೇವೆ. ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ಇದನ್ನೂ ಓದಿ; ಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...