Homeಮುಖಪುಟವಿರೋಧ ಲೆಕ್ಕಿಸದೆ ದೇಗುಲ ಪ್ರವೇಶಿಸಿದ ದಲಿತರು; ದೇವರನ್ನೇ ಹೊರತಂದ ಸವರ್ಣೀಯರು

ವಿರೋಧ ಲೆಕ್ಕಿಸದೆ ದೇಗುಲ ಪ್ರವೇಶಿಸಿದ ದಲಿತರು; ದೇವರನ್ನೇ ಹೊರತಂದ ಸವರ್ಣೀಯರು

- Advertisement -
- Advertisement -

ತಮ್ಮ ವಿರೋಧವನ್ನೂ ಲೆಕ್ಕಿಸದೆ ದಲಿತರು ಕಾಲಭೈರವೇಶ್ವರ ದೇಗುಲ ಪ್ರವೇಶಿಸಿ ಪೂಜೆ ಸಲ್ಲಿಸಿದರು ಎಂಬ ಕಾರಣಕ್ಕೆ ಕೆರಳಿದ ಸವರ್ಣೀಯರು, ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಎಸೆದಿರುವ ಅಮಾನುಷ ಸಾಮೂಹಿಕ ಕೃತ್ಯ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.

2014ರಲ್ಲಿ ದಲಿತರ ವಿರುದ್ಧ ದೌರ್ಜನ್ಯ ಎಸಗಿದ್ದ ಕೊಪ್ಪಳದ ಮರಕುಂಬಿ ಗ್ರಾಮದ 98 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಮಂಡ್ಯದ ಜಾತಿವಾದಿಗಳು ದಲಿತರಿಗೆ ಸಾಮಾಜಿಕ ಸಮಾನತೆಯನ್ನು ನಿರಾಕರಿಸಿದ್ದಾರೆ.

ಪ್ರಸ್ತುತ ಹನಕೆರೆ ಗ್ರಾಮ ಬೂದಿಮುಚ್ಚಿದ ಕೆಂಡದಂತಿದ್ದು, ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕಳೆದ 2 ವರ್ಷಗಳ ಹಿಂದೆ ದೇವಾಲಯ ಪುನರ್ನಿರ್ಮಾಣ ಮಾಡಲಾಗಿತ್ತು. ನಂತರ, ದಲಿತರ ದೇಗುಲ ಪ್ರವೇಶಕ್ಕೆ ಸವರ್ಣೀಯರು ಒಪ್ಪಿಲ್ಲ, ಈ ಕುರಿತಾಗಿ ಎರಡು ಬಾರಿ ನಡೆಸಿದ ಶಾಂತಿ ಸಭೆಯೂ ವಿಫಲವಾಗಿತ್ತು.

ದಲಿತರು ದೇಗುಲ ಪ್ರವೇಶಕ್ಕೆ ಸವರ್ಣೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಗುಲ ಅವರೇ ಇಟ್ಟುಕೊಳ್ಳಲಿ, ದೇವರನ್ನ ತೆಗುದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ. ಈ ಮಧ್ಯೆ ಪೊಲೀಸರ ಭದ್ರತೆ ನಡುವೆ ದಲಿತರು ದೇಗುಲ ಪ್ರವೇಶಿಸಿದ್ದಾರೆ.

ಮಾಜಿ ಶಾಸಕ ಎಂ ಶ್ರೀನಿವಾಸ್ ಸವರ್ಣೀಯರ ಮನವೊಲಿಸಲು ಯತ್ನಿಸಿದ್ದಾರೆ. ತಹಶೀಲ್ದಾರ್, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ ಅಧಿಕಾರಿಗಳು ಮನವೊಲಿಕೆಗೆ ಯತ್ನಿಸಿದ್ದು, ಯಾರ ಮನವಿಗೂ ಗ್ರಾಮಸ್ಥರು ಸ್ಪಂದಿಸುತ್ತಿಲ್ಲ. ಕೊನೆಗೆ ಸರ್ಕಾರಿ ಅಧಿಕಾರಿಗಳು ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದಾರೆ.

ದಲಿತರ ದೇವಾಲಯ ಪ್ರವೇಶಿಸಿದ್ದಾರೆ, ಇನ್ನು ಮುಂದೆ ನಾವು ದೇವಾಲಯ ಪ್ರವೇಶ ಮಾಡುವುದಿಲ್ಲ ಎಂದು ಸವರ್ಣೀಯರು ಕೋಪಗೊಂಡಿದ್ದಾರೆ. ಸದ್ಯಕ್ಕೆ ದೇವಸ್ಥಾನಕ್ಕೆ ಬಾಗಿಲು ಬಂದ್ ಮಾಡಲಾಗಿದ್ದು, ಎಂದಿನಂತೆ  ಸಂಜೆ ತೆರೆಯುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ. ದೇವಸ್ಥಾನ ಪ್ರವೇಶಕ್ಕೆ ಇಲಾಖೆ ಎಲ್ಲರಿಗೂ ಅವಕಾಶ ಮಾಡಿಕೊಟ್ಟಿದೆ. ಸವರ್ಣೀಯರು ಉತ್ಸವ ಮೂರ್ತಿಯನ್ನು ಮತ್ತೊಂದು ಕೋಣೆಯಲ್ಲಿ ಇಟ್ಟಿದ್ದು, ಉತ್ಸವ ಮೂರ್ತಿಯನ್ನ ದೇವಸ್ಥಾನಕ್ಕೆ ಸಾಗಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ.

ಈ ಬಗ್ಗೆ ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರದಾರ್ ಹೇಳಿಕೆ ನೀಡಿದ್ದು, ದೇವಸ್ಥಾನಕ್ಕೆ ಪ್ರವೇಶ ಇಲ್ಲ ಎಂದು ನಮಗೆ ದೂರು ನೀಡಿದ್ದಾರೆ. ದಲಿತರು ತಮಗೆ ಪ್ರವೇಶ ಇಲ್ಲ ಎಂಬ ಬಗ್ಗೆ ನಮಗೆ ಮಾಹಿತಿ ಕೊಟ್ಟಿದ್ದರು. 4 ತಿಂಗಳ ಹಿಂದೆ ಎಲ್ಲರೂ ದೇವಸ್ಥಾನಕ್ಕೆ ಹೋಗುತ್ತಿದ್ದರು. ಕೆಲವು ದಿನಗಳ ಹಿಂದೆ ಇಲ್ಲಿ ಸಮಸ್ಯೆ ಉಂಟಾಗಿದೆ. ಇದು ಮುಜುರಾಯಿ ದೇವಸ್ಥಾನವಾಗಿದ್ದು, ಎಲ್ಲರಿಗೂ ಪ್ರವೇಶಕ್ಕೆ ಅವಕಾಶ ಇದೆ ಎಂದರು.

ಸಮಾಜ ಕಲ್ಯಾಣ ಅಧಿಕಾರಿ ಸಿದ್ದಲಿಂಗಪ್ಪ ಮಾತನಾಡಿ, 4 ತಿಂಗಳಿನಿಂದ ಈ ಸಮಸ್ಯೆ ಇದೆ. ದಲಿತರ ದೇಗುಲ ಪ್ರವೇಶಕ್ಕೆ ಬಿಟ್ಟಿಲ್ಲ. 2 ಬಾರಿ ಸಭೆ ಮಾಡಿ ಗ್ರಾಮಸ್ಥರಿಗೆ ತಿಳಿಸಿದ್ದೇವೆ. ಗ್ರಾಮದಲ್ಲಿರುವ ವಿರೋಧದ ಬಗ್ಗೆ ಮಾಹಿತಿ ನೀಡಿದ್ದೇವೆ. ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ಇದನ್ನೂ ಓದಿ; ಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...