Homeಮುಖಪುಟಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

ಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

- Advertisement -
- Advertisement -

ಭಾರತದಲ್ಲಿ ಬಹುಕೋಟಿ ಬ್ಯಾಂಕಿಂಗ್ ಹಗರಣದಲ್ಲಿ ಭಾಗಿಯಾಗಿ ಆಂಟಿಗುವಾ ದೇಶಕ್ಕೆ ಪರಾರಿಯಾಗಿದ್ದ ಮೆಹುಲ್‌ ಚೋಕ್ಸಿಯವರಿಗೆ ಸೋಮವಾರ ಡೊಮಿನಿಕನ್ ನ್ಯಾಯಾಲಯ ಜಾಮೀನು ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದು ಚಿಕಿತ್ಸೆ ಕಾರಣಕ್ಕೆ ಆಂಟಿಗುವಾಗೆ ತೆರಳಲು ನ್ಯಾಯಾಲಯ ಅವಕಾಶ ನೀಡಿದೆ.

ಮೆಹುಲ್‌ ಚೋಕ್ಸಿ ಜಾಮೀನು ಪ್ರಕರಣದ ಬೆಳವಣಿಯಗೆಯನ್ನು ಖಚಿತಪಡಿಸಿರುವ ವಕೀಲ ವಿಜಯ್ ಅಗರ್ವಾಲ್, “ಡೊಮಿನಿಕಾ ನ್ಯಾಯಾಲಯಗಳು ಅಂತಿಮವಾಗಿ ಕಾನೂನು ಮತ್ತು ಆರೋಗ್ಯದ ಚಿಕಿತ್ಸೆಯ ಅಗತ್ಯತೆಗಳನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದಾರೆ.

ಆಂಟಿಗುವದ ಮಾಧ್ಯಮಗಳ ವರದಿ ಪ್ರಕಾರ, ಚೋಕ್ಸಿಯ ಜಾಮೀನು ಅರ್ಜಿಯ ವಿಚಾರಣೆ ಜುಲೈ 23 ರಂದು ನಡೆಯಬೇಕಿತ್ತು. ಆದರೆ ಜುಲೈ 12 ರಂದು ವೈದ್ಯಕೀಯ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು. ಚೋಕ್ಸಿ  ನರ ವಿಜ್ಞಾನ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ, ಅವರಿಗೆ ಆಂಟಿಗುವಾದಲ್ಲಿ ನರವಿಜ್ಞಾನ ತಜ್ಞರಿಂದ ಚಿಕಿತ್ಸೆ ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದರು. ಸೋಮವಾರ ಚೋಕ್ಸಿ ಜಾಮೀನು ನೀಡಿದ ಡೊಮಿನಿಕಾದ ಈಸ್ಟರ್ನ್ ಕೆರಿಬಿಯನ್ ಹೈಕೋರ್ಟ್ 10,000  ಕೆರಿಬಿಯನ್ ಡಾಲರ್ ಬಾಂಡ್ ನೀಡುವಂತೆ ಆದೇಶಿಸಿದೆ ಮತ್ತು ಚಿಕಿತ್ಸೆಯ ನಂತರ ಡೊಮಿನಿಕಾಗೆ ಮರಳಲು ಹೇಳಿದೆ.  

2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಆಂಟಿಗುವ ದೇಶದಿಂದ ಚೋಕ್ಸಿ ಕಳೆದ ಮೇ ತಿಂಗಳಿನಲ್ಲಿ ನಿಗೂಢವಾಗಿ ಡೊಮಿನಿಕಾ ದೇಶದಲ್ಲಿ ಪತ್ತೆಯಾಗಿದ್ದರು. ಚೋಕ್ಸಿ ಅಪಹರಣವಾಗಿದೆ. ಬಾರ್ಬಾರಾ ಎಂಬ ಮಹೀಳೆ ಭಾರತದ ತನಿಖಾ ಸಂಸ್ಥೆಗಳ ಸಹಾಯದಿಂದ ಚೋಕ್ಸಿ ಅವರನ್ನು ಡೊಮಿನಿಕನ್‌ ರಿಪಬ್ಲಿಕ್‌ಗೆ ಅಪಹರಿಸಿ ಕರೆತಂದಿದ್ದಾರೆ ಎಂಬ ಸುದ್ದಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ಭಾರತ ಮತ್ತು ಡೊಮಿನಿಕಾ ದೇಶದ ಸಂಬಂಧ ಉತ್ತಮವಾಗಿರುವುದರಿಂದ ಮೆಹುಲ್‌ ಚೋಕ್ಸಿ ಬಂಧಿಸಿ ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ದೇಶದ ತನಿಖಾ ಏಜನ್ಸಿಗಳು ಮುಂದಾಗಿದ್ದವು. ಇದಕ್ಕೆ ಪೂರಕವಾಗಿ ಈಚೆಗಷ್ಟೆ ಉದ್ಯಮಿ ಮೆಹುಲ್ ಚೋಕ್ಸಿ ಅಕ್ರಮ ವಲಸಿಗ ಎಂದು ಡೊಮಿನಿಕಾ ಘೋಷಿಸಿತ್ತು.

ಡೊಮಿನಿಕನ್ ಸರ್ಕಾರ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಭಯದಿಂದ ಚೋಕ್ಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾನೂನು ಹೋರಾಟದಲ್ಲಿ ಅವರಿಗೆ ಜಾಮೀನು ದೊರೆತಿದೆ.

ಇಂದರಿಂದ ಚೋಕ್ಸಿ ಬಂಧಿಸಿ ದೇಶಕ್ಕೆ ಕರೆತರುವ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು ಭಾರತ ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳಲ್ಲಿದೆ ಎಂಬುದನ್ನು ಇನ್ನೂ ಸ್ಪಷ್ಟ ಪಡಿಸಿಲ್ಲ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 10 ರಂದು ಕೇಂದ್ರೀಯ ತನಿಖಾ ದಳ ಮೆಹುಲ್ ಚೋಕ್ಸಿ ಮತ್ತು ಇತರೆ 21 ಜನರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದೆ. ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ, ಸಾಕ್ಷ್ಯ ನಾಶಪಡಿಸಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

2017ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಚೋಕ್ಸಿ ಎಲ್‌ಒಯು, 58 ಎಫ್‌ಎಲ್‌ಸಿಗಳನ್ನು ಮೋಸದಿಂದ ಪಡೆದು, ಬ್ಯಾಂಕಿಗೆ 13,500 ಕೋಟಿ ರೂ ವಂಚನೆ ಎಸಗಿದ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾಗಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಚೋಕ್ಸಿ ವಿರುದ್ಧ ಸಾಕ್ಷ್ಯನಾಶ, ವಂಚನೆ, ಪಿತೂರಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಭಾರತದಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ.

ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಮೆಹುಲ್ ಚೋಕ್ಸಿ ಹಾಗೂ ಆತನ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.

ಇದನ್ನೂ ಓದಿ:  ಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...