Homeಮುಖಪುಟಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

ಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

- Advertisement -
- Advertisement -

ಭಾರತದಲ್ಲಿ ಬಹುಕೋಟಿ ಬ್ಯಾಂಕಿಂಗ್ ಹಗರಣದಲ್ಲಿ ಭಾಗಿಯಾಗಿ ಆಂಟಿಗುವಾ ದೇಶಕ್ಕೆ ಪರಾರಿಯಾಗಿದ್ದ ಮೆಹುಲ್‌ ಚೋಕ್ಸಿಯವರಿಗೆ ಸೋಮವಾರ ಡೊಮಿನಿಕನ್ ನ್ಯಾಯಾಲಯ ಜಾಮೀನು ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದು ಚಿಕಿತ್ಸೆ ಕಾರಣಕ್ಕೆ ಆಂಟಿಗುವಾಗೆ ತೆರಳಲು ನ್ಯಾಯಾಲಯ ಅವಕಾಶ ನೀಡಿದೆ.

ಮೆಹುಲ್‌ ಚೋಕ್ಸಿ ಜಾಮೀನು ಪ್ರಕರಣದ ಬೆಳವಣಿಯಗೆಯನ್ನು ಖಚಿತಪಡಿಸಿರುವ ವಕೀಲ ವಿಜಯ್ ಅಗರ್ವಾಲ್, “ಡೊಮಿನಿಕಾ ನ್ಯಾಯಾಲಯಗಳು ಅಂತಿಮವಾಗಿ ಕಾನೂನು ಮತ್ತು ಆರೋಗ್ಯದ ಚಿಕಿತ್ಸೆಯ ಅಗತ್ಯತೆಗಳನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದಾರೆ.

ಆಂಟಿಗುವದ ಮಾಧ್ಯಮಗಳ ವರದಿ ಪ್ರಕಾರ, ಚೋಕ್ಸಿಯ ಜಾಮೀನು ಅರ್ಜಿಯ ವಿಚಾರಣೆ ಜುಲೈ 23 ರಂದು ನಡೆಯಬೇಕಿತ್ತು. ಆದರೆ ಜುಲೈ 12 ರಂದು ವೈದ್ಯಕೀಯ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು. ಚೋಕ್ಸಿ  ನರ ವಿಜ್ಞಾನ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ, ಅವರಿಗೆ ಆಂಟಿಗುವಾದಲ್ಲಿ ನರವಿಜ್ಞಾನ ತಜ್ಞರಿಂದ ಚಿಕಿತ್ಸೆ ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದರು. ಸೋಮವಾರ ಚೋಕ್ಸಿ ಜಾಮೀನು ನೀಡಿದ ಡೊಮಿನಿಕಾದ ಈಸ್ಟರ್ನ್ ಕೆರಿಬಿಯನ್ ಹೈಕೋರ್ಟ್ 10,000  ಕೆರಿಬಿಯನ್ ಡಾಲರ್ ಬಾಂಡ್ ನೀಡುವಂತೆ ಆದೇಶಿಸಿದೆ ಮತ್ತು ಚಿಕಿತ್ಸೆಯ ನಂತರ ಡೊಮಿನಿಕಾಗೆ ಮರಳಲು ಹೇಳಿದೆ.  

2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಆಂಟಿಗುವ ದೇಶದಿಂದ ಚೋಕ್ಸಿ ಕಳೆದ ಮೇ ತಿಂಗಳಿನಲ್ಲಿ ನಿಗೂಢವಾಗಿ ಡೊಮಿನಿಕಾ ದೇಶದಲ್ಲಿ ಪತ್ತೆಯಾಗಿದ್ದರು. ಚೋಕ್ಸಿ ಅಪಹರಣವಾಗಿದೆ. ಬಾರ್ಬಾರಾ ಎಂಬ ಮಹೀಳೆ ಭಾರತದ ತನಿಖಾ ಸಂಸ್ಥೆಗಳ ಸಹಾಯದಿಂದ ಚೋಕ್ಸಿ ಅವರನ್ನು ಡೊಮಿನಿಕನ್‌ ರಿಪಬ್ಲಿಕ್‌ಗೆ ಅಪಹರಿಸಿ ಕರೆತಂದಿದ್ದಾರೆ ಎಂಬ ಸುದ್ದಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ಭಾರತ ಮತ್ತು ಡೊಮಿನಿಕಾ ದೇಶದ ಸಂಬಂಧ ಉತ್ತಮವಾಗಿರುವುದರಿಂದ ಮೆಹುಲ್‌ ಚೋಕ್ಸಿ ಬಂಧಿಸಿ ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ದೇಶದ ತನಿಖಾ ಏಜನ್ಸಿಗಳು ಮುಂದಾಗಿದ್ದವು. ಇದಕ್ಕೆ ಪೂರಕವಾಗಿ ಈಚೆಗಷ್ಟೆ ಉದ್ಯಮಿ ಮೆಹುಲ್ ಚೋಕ್ಸಿ ಅಕ್ರಮ ವಲಸಿಗ ಎಂದು ಡೊಮಿನಿಕಾ ಘೋಷಿಸಿತ್ತು.

ಡೊಮಿನಿಕನ್ ಸರ್ಕಾರ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಭಯದಿಂದ ಚೋಕ್ಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾನೂನು ಹೋರಾಟದಲ್ಲಿ ಅವರಿಗೆ ಜಾಮೀನು ದೊರೆತಿದೆ.

ಇಂದರಿಂದ ಚೋಕ್ಸಿ ಬಂಧಿಸಿ ದೇಶಕ್ಕೆ ಕರೆತರುವ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು ಭಾರತ ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳಲ್ಲಿದೆ ಎಂಬುದನ್ನು ಇನ್ನೂ ಸ್ಪಷ್ಟ ಪಡಿಸಿಲ್ಲ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 10 ರಂದು ಕೇಂದ್ರೀಯ ತನಿಖಾ ದಳ ಮೆಹುಲ್ ಚೋಕ್ಸಿ ಮತ್ತು ಇತರೆ 21 ಜನರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದೆ. ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ, ಸಾಕ್ಷ್ಯ ನಾಶಪಡಿಸಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

2017ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಚೋಕ್ಸಿ ಎಲ್‌ಒಯು, 58 ಎಫ್‌ಎಲ್‌ಸಿಗಳನ್ನು ಮೋಸದಿಂದ ಪಡೆದು, ಬ್ಯಾಂಕಿಗೆ 13,500 ಕೋಟಿ ರೂ ವಂಚನೆ ಎಸಗಿದ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾಗಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಚೋಕ್ಸಿ ವಿರುದ್ಧ ಸಾಕ್ಷ್ಯನಾಶ, ವಂಚನೆ, ಪಿತೂರಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಭಾರತದಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ.

ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಮೆಹುಲ್ ಚೋಕ್ಸಿ ಹಾಗೂ ಆತನ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.

ಇದನ್ನೂ ಓದಿ:  ಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...