Homeಮುಖಪುಟಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

ಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

- Advertisement -
- Advertisement -

ಭಾರತದಲ್ಲಿ ಬಹುಕೋಟಿ ಬ್ಯಾಂಕಿಂಗ್ ಹಗರಣದಲ್ಲಿ ಭಾಗಿಯಾಗಿ ಆಂಟಿಗುವಾ ದೇಶಕ್ಕೆ ಪರಾರಿಯಾಗಿದ್ದ ಮೆಹುಲ್‌ ಚೋಕ್ಸಿಯವರಿಗೆ ಸೋಮವಾರ ಡೊಮಿನಿಕನ್ ನ್ಯಾಯಾಲಯ ಜಾಮೀನು ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದು ಚಿಕಿತ್ಸೆ ಕಾರಣಕ್ಕೆ ಆಂಟಿಗುವಾಗೆ ತೆರಳಲು ನ್ಯಾಯಾಲಯ ಅವಕಾಶ ನೀಡಿದೆ.

ಮೆಹುಲ್‌ ಚೋಕ್ಸಿ ಜಾಮೀನು ಪ್ರಕರಣದ ಬೆಳವಣಿಯಗೆಯನ್ನು ಖಚಿತಪಡಿಸಿರುವ ವಕೀಲ ವಿಜಯ್ ಅಗರ್ವಾಲ್, “ಡೊಮಿನಿಕಾ ನ್ಯಾಯಾಲಯಗಳು ಅಂತಿಮವಾಗಿ ಕಾನೂನು ಮತ್ತು ಆರೋಗ್ಯದ ಚಿಕಿತ್ಸೆಯ ಅಗತ್ಯತೆಗಳನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದಾರೆ.

ಆಂಟಿಗುವದ ಮಾಧ್ಯಮಗಳ ವರದಿ ಪ್ರಕಾರ, ಚೋಕ್ಸಿಯ ಜಾಮೀನು ಅರ್ಜಿಯ ವಿಚಾರಣೆ ಜುಲೈ 23 ರಂದು ನಡೆಯಬೇಕಿತ್ತು. ಆದರೆ ಜುಲೈ 12 ರಂದು ವೈದ್ಯಕೀಯ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು. ಚೋಕ್ಸಿ  ನರ ವಿಜ್ಞಾನ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ, ಅವರಿಗೆ ಆಂಟಿಗುವಾದಲ್ಲಿ ನರವಿಜ್ಞಾನ ತಜ್ಞರಿಂದ ಚಿಕಿತ್ಸೆ ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದರು. ಸೋಮವಾರ ಚೋಕ್ಸಿ ಜಾಮೀನು ನೀಡಿದ ಡೊಮಿನಿಕಾದ ಈಸ್ಟರ್ನ್ ಕೆರಿಬಿಯನ್ ಹೈಕೋರ್ಟ್ 10,000  ಕೆರಿಬಿಯನ್ ಡಾಲರ್ ಬಾಂಡ್ ನೀಡುವಂತೆ ಆದೇಶಿಸಿದೆ ಮತ್ತು ಚಿಕಿತ್ಸೆಯ ನಂತರ ಡೊಮಿನಿಕಾಗೆ ಮರಳಲು ಹೇಳಿದೆ.  

2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಆಂಟಿಗುವ ದೇಶದಿಂದ ಚೋಕ್ಸಿ ಕಳೆದ ಮೇ ತಿಂಗಳಿನಲ್ಲಿ ನಿಗೂಢವಾಗಿ ಡೊಮಿನಿಕಾ ದೇಶದಲ್ಲಿ ಪತ್ತೆಯಾಗಿದ್ದರು. ಚೋಕ್ಸಿ ಅಪಹರಣವಾಗಿದೆ. ಬಾರ್ಬಾರಾ ಎಂಬ ಮಹೀಳೆ ಭಾರತದ ತನಿಖಾ ಸಂಸ್ಥೆಗಳ ಸಹಾಯದಿಂದ ಚೋಕ್ಸಿ ಅವರನ್ನು ಡೊಮಿನಿಕನ್‌ ರಿಪಬ್ಲಿಕ್‌ಗೆ ಅಪಹರಿಸಿ ಕರೆತಂದಿದ್ದಾರೆ ಎಂಬ ಸುದ್ದಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ಭಾರತ ಮತ್ತು ಡೊಮಿನಿಕಾ ದೇಶದ ಸಂಬಂಧ ಉತ್ತಮವಾಗಿರುವುದರಿಂದ ಮೆಹುಲ್‌ ಚೋಕ್ಸಿ ಬಂಧಿಸಿ ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ದೇಶದ ತನಿಖಾ ಏಜನ್ಸಿಗಳು ಮುಂದಾಗಿದ್ದವು. ಇದಕ್ಕೆ ಪೂರಕವಾಗಿ ಈಚೆಗಷ್ಟೆ ಉದ್ಯಮಿ ಮೆಹುಲ್ ಚೋಕ್ಸಿ ಅಕ್ರಮ ವಲಸಿಗ ಎಂದು ಡೊಮಿನಿಕಾ ಘೋಷಿಸಿತ್ತು.

ಡೊಮಿನಿಕನ್ ಸರ್ಕಾರ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಭಯದಿಂದ ಚೋಕ್ಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾನೂನು ಹೋರಾಟದಲ್ಲಿ ಅವರಿಗೆ ಜಾಮೀನು ದೊರೆತಿದೆ.

ಇಂದರಿಂದ ಚೋಕ್ಸಿ ಬಂಧಿಸಿ ದೇಶಕ್ಕೆ ಕರೆತರುವ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು ಭಾರತ ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳಲ್ಲಿದೆ ಎಂಬುದನ್ನು ಇನ್ನೂ ಸ್ಪಷ್ಟ ಪಡಿಸಿಲ್ಲ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 10 ರಂದು ಕೇಂದ್ರೀಯ ತನಿಖಾ ದಳ ಮೆಹುಲ್ ಚೋಕ್ಸಿ ಮತ್ತು ಇತರೆ 21 ಜನರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದೆ. ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ, ಸಾಕ್ಷ್ಯ ನಾಶಪಡಿಸಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

2017ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಚೋಕ್ಸಿ ಎಲ್‌ಒಯು, 58 ಎಫ್‌ಎಲ್‌ಸಿಗಳನ್ನು ಮೋಸದಿಂದ ಪಡೆದು, ಬ್ಯಾಂಕಿಗೆ 13,500 ಕೋಟಿ ರೂ ವಂಚನೆ ಎಸಗಿದ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾಗಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಚೋಕ್ಸಿ ವಿರುದ್ಧ ಸಾಕ್ಷ್ಯನಾಶ, ವಂಚನೆ, ಪಿತೂರಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಭಾರತದಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ.

ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಮೆಹುಲ್ ಚೋಕ್ಸಿ ಹಾಗೂ ಆತನ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.

ಇದನ್ನೂ ಓದಿ:  ಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...